Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...