Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...