Homeಅಂಕಣಗಳುನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

ನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

- Advertisement -
- Advertisement -

ಪೆಟ್ರೋಲ್ ಮತ್ತು ಡೀಸೆಲ್ ದರ ದಿನದಿನಕ್ಕೆ ಬೇಸಿಗೆಯ ಬಿಸಿಲಿನಂತೆ ಏರುತ್ತಲೇ ಇದೆ. ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ ನೂರು ಮುಟ್ಟಿದೆ. ಇದರಿಂದ ಪ್ರಯಾಣ ದರ ಹೆಚ್ಚುತ್ತದೆ. ಸರಕು ಸಾಗಣೆ ಖರ್ಚು ಹೆಚ್ಚುತ್ತದೆ. ಆ ಮೂಲಕ ಜೀವನಾಧಾರಕ್ಕೆ ಅಗತ್ಯವಾದ ಆಹಾರ ಪದಾರ್ಥಗಳು, ತರಕಾರಿ ಎಲ್ಲದರ ದರ ಹೆಚ್ಚುತ್ತದೆ. ಸರ್ಕಾರ ಆಹಾರ ಧಾನ್ಯಗಳ ಬೆಲೆ ಇಳಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಧ್ಯಮವರ್ಗದ ಜನ, ಬಡವರು ಈ ಬೆಲೆ ಏರಿಕೆಯ ಬವಣೆಯನ್ನು ಹತ್ತಾರು ವರ್ಷಗಳಿಂದ ಅನುಭವಿಸುತ್ತಿದ್ದಾರೆ. ಈ ಗೋಳನ್ನು ನಿವಾರಿಸಬೇಕೆಂದು ಸರ್ಕಾರಕ್ಕೆ ಅನ್ನಿಸುತ್ತಲೇ ಇಲ್ಲ. ಇದೇ ರೀತಿ ಅಡುಗೆ ಅನಿಲದ ಬೆಲೆಯೂ ಪ್ರತಿಸಾರಿ ನೂರು, ಇನ್ನೂರು ರೂಗಳಷ್ಟು ಹೆಚ್ಚುತ್ತಲೇ ಹೋಗುತ್ತಿದೆ. ಜನ ಸಾಮಾನ್ಯರ ಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಲೇ ಇಲ್ಲ ಜಡ್ಡುಕಟ್ಟಿದ ಸರ್ಕಾರ ಬಡವರ ಬವಣೆಗೆ ಕಿವುಡಾಗಿದೆ, ಕುರುಡಾಗಿದೆ.

ಎರಡನೆ ಮಹಾಯುದ್ಧದ ಸಂದರ್ಭದಲ್ಲಿ ಬ್ರಿಟಿಷರು ಭಾರತೀಯರನ್ನು ಹೀಗೆಯೇ ನಡೆಸಿಕೊಂಡರು. ಆಹಾರಧಾನ್ಯಗಳು ಅಂಗಡಿಗಳಲ್ಲಿ ತುಂಬಿ ತುಳುಕುತ್ತಿತ್ತು. ಆದರೆ ಅದು ದುಬಾರಿ ಬೆಲೆ ಕೊಡಲಾರದ ಬಡವರು ಹಸಿವಿನಿಂದ ಕಲ್ಕತ್ತದ ಬೀದಿ ಬೀದಿಗಳಲ್ಲಿ ಸತ್ತುಬಿದ್ದರು.

ಸ್ವಾತಂತ್ರ್ಯ ಪ್ರಾಪ್ತವಾದ ಹೊಸದರಲ್ಲಿ ಕೆಲ ವರ್ಷಗಳ ಕಾಲ ಕಾಂಗ್ರೆಸ್ ಬೆಲೆಗಳನ್ನು ಹತೋಟಿಯಲ್ಲಿಡಲು ಅನೇಕ ಕ್ರಮಗಳನ್ನು ಕೈಗೊಂಡವು. ಕಳ್ಳದಾಸ್ತಾನು ಇಟ್ಟಿರುವ ವರ್ತಕರ ರಹಸ್ಯ ಮಳಿಗೆಗಳ ಮೇಲೆ ದಾಳಿ ಮಾಡಿ, ಆ ಬಚ್ಚಿಟ್ಟ ಪದಾರ್ಥಗಳನ್ನು ಬಡವರಿಗೆ ನ್ಯಾಯ ಬೆಲೆಯಲ್ಲಿ ಒದಗಿಸುವ ಪ್ರಯತ್ನ ಮಾಡಿತು. ಹೆಚ್ಚು ಬೆಲೆಗೆ ಆಹಾರ ಧಾನ್ಯವನ್ನು ಮಾರಾಟ ಮಾಡುತ್ತಿದ್ದ ವರ್ತಕರ ವಿರುದ್ಧ ಖಟ್ಳೆ ಹೂಡಿ ಅವರನ್ನು ಸೆರೆಮನೆಗೆ ಅಟ್ಟಿತು. ಸರ್ಕಾರ ಬಡವರ ದಲಿತರ ಪರವಾಗಿದೆ ಎಂದು ಸಾಬೀತು ಮಾಡಿತು.

ಇಂದಿನ ಮೋದಿ, ಯಡಿಯೂರಪ್ಪನವರ ಸರ್ಕಾರಗಳು ತಾವು ಕಾಳಸಂತೆಕೋರರ, ಧನಪಿಶಾಚಿಗಳ ಪರವಾಗಿದೆ ಎಂದು ರಾಜಾರೋಷವಾಗಿ ಘೋಷಿಸಲು ಹಿಂಜರಿಯುತ್ತಿಲ್ಲ. ಸರ್ಕಾರದ ಈ ಭಂಡತನವನ್ನು ಜನಸಾಮಾನ್ಯರು ಇನ್ನೆಷ್ಟು ದಿನ ಸಹಿಸಬಲ್ಲರು? ಜನ ಬೀದಿಗಿಳಿಯುವ ದಿನ ಇನ್ನು ಕೆಲದಿನಗಳಲ್ಲೇ ಪ್ರಾಪ್ತವಾಗುವುದಿದೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯನ್ನಾದರೂ ಹಿಂದಕ್ಕೆ ತೆಗೆದುಕೊಂಡು ಜನರಿಗೆ ನೆಮ್ಮದಿ ತರಬಹುದಿತ್ತು. 2014ಕ್ಕೆ ಮೊದಲು ಅಂದರೆ ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಅಂದಿನ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ ಶೇ.10 ರಷ್ಟು ಡೀಸೆಲ್ ಮೇಲೆ ಶೇ.5 ರಷ್ಟು ತೆರಿಗೆ ಹಾಕಿತ್ತು. ಮೋದಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್ ಮೇಲಿನ ತೆರಿಗೆ ಶೇ.10 ರಷ್ಟಿದ್ದದ್ದನ್ನು ಈಗ ಶೇ.32ಕ್ಕೆ, ಡೀಸೆಲ್ ಮೇಲಿನ ತೆರಿಗೆಯನ್ನು ಶೇ.5ರಿಂದ ಶೇ.31ಕ್ಕೆ ಏರಿಸಿದ್ದಾರೆ. ಇದು ಹಗಲು ದರೋಡೆ ಎಂದು ಕರೆಯದೇ ಬೇರೆ ಯಾವ ಹೆಸರಿನಿಂದ ಕರೆಯಬೇಕು?

PC : Prajavani

ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿಯವರು, ಕ್ರೂಡ್ ಆಯಿಲ್ ಬೆಲೆಗಿಂತ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯೇ ಜಾಸ್ತಿ ಎಂದು ಹೇಳಿ, ಅಂದಿನ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದರು. ಈಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ 3ಪಟ್ಟು ಏರಿದ್ದರೂ ಬಿಜೆಪಿ ರಾಜ್ಯ ಸರ್ಕಾರಗಳು ಮೋದಿ ಸರ್ಕಾರದ ಹಗಲು ದರೋಡೆಯ ವಿರುದ್ಧ ಒಂದು ಕೂಗನ್ನು ಹಾಕಿಲ್ಲ. ರಾಜ್ಯಾಂಗ ಮತ್ತು ಆಡಳಿತಾಂಗ ಈ ಬಗೆಗೆ ಉದಾಸೀನ ಭಾವನೆ ತೋರಬೇಕಾದರೆ, ನ್ಯಾಯಾಂಗವಾದರೂ ಮಧ್ಯೆಪ್ರವೇಶಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಾಗಿತ್ತು. ನ್ಯಾಯಾಂಗ ಈ ಜ್ವಲಂತ ಪ್ರಶ್ನೆಯ ಬಗೆಗೆ ಪರಿಹಾರ ರೂಪದಲ್ಲಿ ಸಲಹೆ ಸೂಚನೆಯನ್ನಾದರೂ ಸರ್ಕಾರಕ್ಕೆ ನೀಡಬೇಕಾಗಿತ್ತು. ಅದೂ ಈ ಬಗೆಗೆ ಮೈನ ತಳೆದಿರುವುದು ದೇಶದ ದೌರ್ಭಾಗ್ಯ.

ಮೋದಿ ಷಾ ಸರ್ಕಾರಕ್ಕೆ ಜನರ ಸಮಸ್ಯೆಗಳನ್ನು ಹೆಚ್ಚಿಸುವುದಕ್ಕಿರುವ ಆಸಕ್ತಿ ಜನರ ಬವಣೆಯನ್ನು ಕಡಿತಗೊಳಿಸುವುದರಲ್ಲಿ ಇಲ್ಲ. ಅವರೀಗ ಭಾರತವನ್ನೆಲ್ಲ ಬಿಜೆಪಿ ವಶಮಾಡಿಕೊಳ್ಳುವ ಅವೇಶದಲ್ಲಿದ್ದಾರೆ. ಪುದುಚೇರಿಯಲ್ಲಿ ಸಮಸ್ಯೆ ಹುಟ್ಟಿ ಹಾಕಿ ವಿದ್ಯುಕ್ತ ಸರ್ಕಾರವನ್ನು ಕೆಡವಿ, ರಾಷ್ಟ್ರಾಧ್ಯಕ್ಷರ ಆಡಳಿತ ಜಾರಿಗೆ ಬರುವಂತೆ ಮಾಡಲಾಯಿತು. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಡಿಎಂಕೆ ಪಕ್ಷವನ್ನು ತನ್ನ ವಶ ಮಾಡಿಕೊಂಡು ಅಧಿಕಾರ ಹಿಡಿಯುವ ಪ್ರಯತ್ನದಲ್ಲಿದೆ. ಮೊದಲು ಪಶ್ಚಿಮ ಬಂಗಾಳವನ್ನು ಶತಾಯುಗತಾಯು ತೆಕ್ಕೆಗೆ ತೆಗೆದುಕೊಳ್ಳುವ ತವಕದಲ್ಲಿ ನಿರತರಾಗಿದ್ದಾರೆ. ತಮಿಳುನಾಡು ಇಲ್ಲಿಯವರೆಗೂ ತಮಿಳರ ಸಾರ್ವಭೌಮತ್ವದಲ್ಲಿ ನಡೆಯುತ್ತಿತ್ತು. ಪಶ್ಚಿಮ ಬಂಗಾಳದಲ್ಲಿ ಬಂಗಾಳಿಗಳ ಐಕ್ಯತೆಯಲ್ಲಿ ರಾಜ್ಯಭಾರ ನಡೆಯುತ್ತಿತ್ತು. ಈಗ ಬಂಗಾಳದಲ್ಲಿ ಬಂಗಾಳಿಗಳಲ್ಲಿ ಒಡಕು ಉಂಟು ಮಾಡಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ತೊಡಗಿದ್ದಾರೆ. ಇದು ಅನೀತಿಯುತ ನಡವಳಿಕೆ ಎಂದು ಮೋದಿ ಷಾಗಳಿಗೆ ಅನಿಸುತ್ತಿಲ್ಲ. ಭಾರತದ ಸಾರ್ವಭೌಮರಾಗುವ ಆತುರದಲ್ಲಿ ಮೋದಿ ಮತ್ತು ಷಾ ಎಲ್ಲ ಮಾನವೀಯ ಮೌಲ್ಯಗಳನ್ನೂ ಗಾಳಿಗೆ ತೂರುತ್ತಿದ್ದಾರೆ. ಸಂಚು ಪಿತೂರಿ ಇವು ಅವರ ರಾಜಕೀಯ ಮೌಲ್ಯಗಳಾಗಿವೆ.

’ಸಬ್ ಕೆ ಲಿಯೆ ಹಮ್ ಎಂದು ಘೋಷಣೆ ಕೂಗುತ್ತಾ, ಹಿಂದುತ್ವ ಪ್ರತಿಪಾದನೆಗೆ ಮಾತ್ರ ಅವರು ಬದ್ಧರು. ವಿರೋಧ ಪಕ್ಷವಾದ ಕಾಂಗ್ರೆಸ್‌ಅನ್ನು ದುರ್ಬಲಗೊಳಿಸುವುದು, ನಾಮಾವಶೇಷ ಮಾಡುವುದಾಗಿ ಘೋಷಣೆ ಕೂಗುವುದು, ವಿರೋಧ ಪಕ್ಷಗಳಲ್ಲಿರುವವರನ್ನು ತಮ್ಮ ವಶ ಮಾಡಿಕೊಳ್ಳುವುದು, ಅನೈತಿಕವಾಗಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದು, ರಾಜ್ಯಗಳಲ್ಲಿರುವ ಅನ್ಯ ಆಡಳಿತಾರೂಢ ಪಕ್ಷವನ್ನು ದುರ್ಬಲಗೊಳಿಸುವುದು ಇವೆಲ್ಲ ರಾಜನೀತಿಯೇ?

ಒಟ್ಟಿನಲ್ಲಿ ಕಚ್ಚಾ ಪೆಟ್ರೋಲಿಯಂ ಬೆಲೆ ಇಳಿಸಬೇಕೆಂದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಾಯಿ ಬಡಿದುಕೊಳ್ಳುತ್ತಿದ್ದ ಬೆಜಿಪಿ, ಮೋದಿ ಷಾ ಅಧಿಕಾರಕ್ಕೆ ಬಂದು 7 ವರ್ಷಗಳೇ ಕಳೆದಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದೇ ಸಮನೆ ಏರುತ್ತಿದ್ದರೂ, ಕ್ರೂಡ್ ಆಯಿಲ್ ಬೆಲೆ ಕಡಿಮೆಯಾದ ಸಂದರ್ಭಗಳಲ್ಲೂ ಸುಂಕದ ದರವನ್ನು ಹೆಚ್ಚಿಸಿಕೊಂಡು ಹೋಗುತ್ತಿದ್ದರೂ, ಬಾಯಿ ಮುಚ್ಚಿಕೊಂಡು ಕೂತಿದೆ. ಜನತೆಯೊಡನೆ ಚೆಲ್ಲಾಟವಾಡುತ್ತಿದೆ.


ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...