Homeಅಂಕಣಗಳುನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

ನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

- Advertisement -
- Advertisement -

ಪೆಟ್ರೋಲ್ ಮತ್ತು ಡೀಸೆಲ್ ದರ ದಿನದಿನಕ್ಕೆ ಬೇಸಿಗೆಯ ಬಿಸಿಲಿನಂತೆ ಏರುತ್ತಲೇ ಇದೆ. ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ ನೂರು ಮುಟ್ಟಿದೆ. ಇದರಿಂದ ಪ್ರಯಾಣ ದರ ಹೆಚ್ಚುತ್ತದೆ. ಸರಕು ಸಾಗಣೆ ಖರ್ಚು ಹೆಚ್ಚುತ್ತದೆ. ಆ ಮೂಲಕ ಜೀವನಾಧಾರಕ್ಕೆ ಅಗತ್ಯವಾದ ಆಹಾರ ಪದಾರ್ಥಗಳು, ತರಕಾರಿ ಎಲ್ಲದರ ದರ ಹೆಚ್ಚುತ್ತದೆ. ಸರ್ಕಾರ ಆಹಾರ ಧಾನ್ಯಗಳ ಬೆಲೆ ಇಳಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಧ್ಯಮವರ್ಗದ ಜನ, ಬಡವರು ಈ ಬೆಲೆ ಏರಿಕೆಯ ಬವಣೆಯನ್ನು ಹತ್ತಾರು ವರ್ಷಗಳಿಂದ ಅನುಭವಿಸುತ್ತಿದ್ದಾರೆ. ಈ ಗೋಳನ್ನು ನಿವಾರಿಸಬೇಕೆಂದು ಸರ್ಕಾರಕ್ಕೆ ಅನ್ನಿಸುತ್ತಲೇ ಇಲ್ಲ. ಇದೇ ರೀತಿ ಅಡುಗೆ ಅನಿಲದ ಬೆಲೆಯೂ ಪ್ರತಿಸಾರಿ ನೂರು, ಇನ್ನೂರು ರೂಗಳಷ್ಟು ಹೆಚ್ಚುತ್ತಲೇ ಹೋಗುತ್ತಿದೆ. ಜನ ಸಾಮಾನ್ಯರ ಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಲೇ ಇಲ್ಲ ಜಡ್ಡುಕಟ್ಟಿದ ಸರ್ಕಾರ ಬಡವರ ಬವಣೆಗೆ ಕಿವುಡಾಗಿದೆ, ಕುರುಡಾಗಿದೆ.

ಎರಡನೆ ಮಹಾಯುದ್ಧದ ಸಂದರ್ಭದಲ್ಲಿ ಬ್ರಿಟಿಷರು ಭಾರತೀಯರನ್ನು ಹೀಗೆಯೇ ನಡೆಸಿಕೊಂಡರು. ಆಹಾರಧಾನ್ಯಗಳು ಅಂಗಡಿಗಳಲ್ಲಿ ತುಂಬಿ ತುಳುಕುತ್ತಿತ್ತು. ಆದರೆ ಅದು ದುಬಾರಿ ಬೆಲೆ ಕೊಡಲಾರದ ಬಡವರು ಹಸಿವಿನಿಂದ ಕಲ್ಕತ್ತದ ಬೀದಿ ಬೀದಿಗಳಲ್ಲಿ ಸತ್ತುಬಿದ್ದರು.

ಸ್ವಾತಂತ್ರ್ಯ ಪ್ರಾಪ್ತವಾದ ಹೊಸದರಲ್ಲಿ ಕೆಲ ವರ್ಷಗಳ ಕಾಲ ಕಾಂಗ್ರೆಸ್ ಬೆಲೆಗಳನ್ನು ಹತೋಟಿಯಲ್ಲಿಡಲು ಅನೇಕ ಕ್ರಮಗಳನ್ನು ಕೈಗೊಂಡವು. ಕಳ್ಳದಾಸ್ತಾನು ಇಟ್ಟಿರುವ ವರ್ತಕರ ರಹಸ್ಯ ಮಳಿಗೆಗಳ ಮೇಲೆ ದಾಳಿ ಮಾಡಿ, ಆ ಬಚ್ಚಿಟ್ಟ ಪದಾರ್ಥಗಳನ್ನು ಬಡವರಿಗೆ ನ್ಯಾಯ ಬೆಲೆಯಲ್ಲಿ ಒದಗಿಸುವ ಪ್ರಯತ್ನ ಮಾಡಿತು. ಹೆಚ್ಚು ಬೆಲೆಗೆ ಆಹಾರ ಧಾನ್ಯವನ್ನು ಮಾರಾಟ ಮಾಡುತ್ತಿದ್ದ ವರ್ತಕರ ವಿರುದ್ಧ ಖಟ್ಳೆ ಹೂಡಿ ಅವರನ್ನು ಸೆರೆಮನೆಗೆ ಅಟ್ಟಿತು. ಸರ್ಕಾರ ಬಡವರ ದಲಿತರ ಪರವಾಗಿದೆ ಎಂದು ಸಾಬೀತು ಮಾಡಿತು.

ಇಂದಿನ ಮೋದಿ, ಯಡಿಯೂರಪ್ಪನವರ ಸರ್ಕಾರಗಳು ತಾವು ಕಾಳಸಂತೆಕೋರರ, ಧನಪಿಶಾಚಿಗಳ ಪರವಾಗಿದೆ ಎಂದು ರಾಜಾರೋಷವಾಗಿ ಘೋಷಿಸಲು ಹಿಂಜರಿಯುತ್ತಿಲ್ಲ. ಸರ್ಕಾರದ ಈ ಭಂಡತನವನ್ನು ಜನಸಾಮಾನ್ಯರು ಇನ್ನೆಷ್ಟು ದಿನ ಸಹಿಸಬಲ್ಲರು? ಜನ ಬೀದಿಗಿಳಿಯುವ ದಿನ ಇನ್ನು ಕೆಲದಿನಗಳಲ್ಲೇ ಪ್ರಾಪ್ತವಾಗುವುದಿದೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯನ್ನಾದರೂ ಹಿಂದಕ್ಕೆ ತೆಗೆದುಕೊಂಡು ಜನರಿಗೆ ನೆಮ್ಮದಿ ತರಬಹುದಿತ್ತು. 2014ಕ್ಕೆ ಮೊದಲು ಅಂದರೆ ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಅಂದಿನ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ ಶೇ.10 ರಷ್ಟು ಡೀಸೆಲ್ ಮೇಲೆ ಶೇ.5 ರಷ್ಟು ತೆರಿಗೆ ಹಾಕಿತ್ತು. ಮೋದಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್ ಮೇಲಿನ ತೆರಿಗೆ ಶೇ.10 ರಷ್ಟಿದ್ದದ್ದನ್ನು ಈಗ ಶೇ.32ಕ್ಕೆ, ಡೀಸೆಲ್ ಮೇಲಿನ ತೆರಿಗೆಯನ್ನು ಶೇ.5ರಿಂದ ಶೇ.31ಕ್ಕೆ ಏರಿಸಿದ್ದಾರೆ. ಇದು ಹಗಲು ದರೋಡೆ ಎಂದು ಕರೆಯದೇ ಬೇರೆ ಯಾವ ಹೆಸರಿನಿಂದ ಕರೆಯಬೇಕು?

PC : Prajavani

ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿಯವರು, ಕ್ರೂಡ್ ಆಯಿಲ್ ಬೆಲೆಗಿಂತ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯೇ ಜಾಸ್ತಿ ಎಂದು ಹೇಳಿ, ಅಂದಿನ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದರು. ಈಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ 3ಪಟ್ಟು ಏರಿದ್ದರೂ ಬಿಜೆಪಿ ರಾಜ್ಯ ಸರ್ಕಾರಗಳು ಮೋದಿ ಸರ್ಕಾರದ ಹಗಲು ದರೋಡೆಯ ವಿರುದ್ಧ ಒಂದು ಕೂಗನ್ನು ಹಾಕಿಲ್ಲ. ರಾಜ್ಯಾಂಗ ಮತ್ತು ಆಡಳಿತಾಂಗ ಈ ಬಗೆಗೆ ಉದಾಸೀನ ಭಾವನೆ ತೋರಬೇಕಾದರೆ, ನ್ಯಾಯಾಂಗವಾದರೂ ಮಧ್ಯೆಪ್ರವೇಶಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಾಗಿತ್ತು. ನ್ಯಾಯಾಂಗ ಈ ಜ್ವಲಂತ ಪ್ರಶ್ನೆಯ ಬಗೆಗೆ ಪರಿಹಾರ ರೂಪದಲ್ಲಿ ಸಲಹೆ ಸೂಚನೆಯನ್ನಾದರೂ ಸರ್ಕಾರಕ್ಕೆ ನೀಡಬೇಕಾಗಿತ್ತು. ಅದೂ ಈ ಬಗೆಗೆ ಮೈನ ತಳೆದಿರುವುದು ದೇಶದ ದೌರ್ಭಾಗ್ಯ.

ಮೋದಿ ಷಾ ಸರ್ಕಾರಕ್ಕೆ ಜನರ ಸಮಸ್ಯೆಗಳನ್ನು ಹೆಚ್ಚಿಸುವುದಕ್ಕಿರುವ ಆಸಕ್ತಿ ಜನರ ಬವಣೆಯನ್ನು ಕಡಿತಗೊಳಿಸುವುದರಲ್ಲಿ ಇಲ್ಲ. ಅವರೀಗ ಭಾರತವನ್ನೆಲ್ಲ ಬಿಜೆಪಿ ವಶಮಾಡಿಕೊಳ್ಳುವ ಅವೇಶದಲ್ಲಿದ್ದಾರೆ. ಪುದುಚೇರಿಯಲ್ಲಿ ಸಮಸ್ಯೆ ಹುಟ್ಟಿ ಹಾಕಿ ವಿದ್ಯುಕ್ತ ಸರ್ಕಾರವನ್ನು ಕೆಡವಿ, ರಾಷ್ಟ್ರಾಧ್ಯಕ್ಷರ ಆಡಳಿತ ಜಾರಿಗೆ ಬರುವಂತೆ ಮಾಡಲಾಯಿತು. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಡಿಎಂಕೆ ಪಕ್ಷವನ್ನು ತನ್ನ ವಶ ಮಾಡಿಕೊಂಡು ಅಧಿಕಾರ ಹಿಡಿಯುವ ಪ್ರಯತ್ನದಲ್ಲಿದೆ. ಮೊದಲು ಪಶ್ಚಿಮ ಬಂಗಾಳವನ್ನು ಶತಾಯುಗತಾಯು ತೆಕ್ಕೆಗೆ ತೆಗೆದುಕೊಳ್ಳುವ ತವಕದಲ್ಲಿ ನಿರತರಾಗಿದ್ದಾರೆ. ತಮಿಳುನಾಡು ಇಲ್ಲಿಯವರೆಗೂ ತಮಿಳರ ಸಾರ್ವಭೌಮತ್ವದಲ್ಲಿ ನಡೆಯುತ್ತಿತ್ತು. ಪಶ್ಚಿಮ ಬಂಗಾಳದಲ್ಲಿ ಬಂಗಾಳಿಗಳ ಐಕ್ಯತೆಯಲ್ಲಿ ರಾಜ್ಯಭಾರ ನಡೆಯುತ್ತಿತ್ತು. ಈಗ ಬಂಗಾಳದಲ್ಲಿ ಬಂಗಾಳಿಗಳಲ್ಲಿ ಒಡಕು ಉಂಟು ಮಾಡಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ತೊಡಗಿದ್ದಾರೆ. ಇದು ಅನೀತಿಯುತ ನಡವಳಿಕೆ ಎಂದು ಮೋದಿ ಷಾಗಳಿಗೆ ಅನಿಸುತ್ತಿಲ್ಲ. ಭಾರತದ ಸಾರ್ವಭೌಮರಾಗುವ ಆತುರದಲ್ಲಿ ಮೋದಿ ಮತ್ತು ಷಾ ಎಲ್ಲ ಮಾನವೀಯ ಮೌಲ್ಯಗಳನ್ನೂ ಗಾಳಿಗೆ ತೂರುತ್ತಿದ್ದಾರೆ. ಸಂಚು ಪಿತೂರಿ ಇವು ಅವರ ರಾಜಕೀಯ ಮೌಲ್ಯಗಳಾಗಿವೆ.

’ಸಬ್ ಕೆ ಲಿಯೆ ಹಮ್ ಎಂದು ಘೋಷಣೆ ಕೂಗುತ್ತಾ, ಹಿಂದುತ್ವ ಪ್ರತಿಪಾದನೆಗೆ ಮಾತ್ರ ಅವರು ಬದ್ಧರು. ವಿರೋಧ ಪಕ್ಷವಾದ ಕಾಂಗ್ರೆಸ್‌ಅನ್ನು ದುರ್ಬಲಗೊಳಿಸುವುದು, ನಾಮಾವಶೇಷ ಮಾಡುವುದಾಗಿ ಘೋಷಣೆ ಕೂಗುವುದು, ವಿರೋಧ ಪಕ್ಷಗಳಲ್ಲಿರುವವರನ್ನು ತಮ್ಮ ವಶ ಮಾಡಿಕೊಳ್ಳುವುದು, ಅನೈತಿಕವಾಗಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದು, ರಾಜ್ಯಗಳಲ್ಲಿರುವ ಅನ್ಯ ಆಡಳಿತಾರೂಢ ಪಕ್ಷವನ್ನು ದುರ್ಬಲಗೊಳಿಸುವುದು ಇವೆಲ್ಲ ರಾಜನೀತಿಯೇ?

ಒಟ್ಟಿನಲ್ಲಿ ಕಚ್ಚಾ ಪೆಟ್ರೋಲಿಯಂ ಬೆಲೆ ಇಳಿಸಬೇಕೆಂದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಾಯಿ ಬಡಿದುಕೊಳ್ಳುತ್ತಿದ್ದ ಬೆಜಿಪಿ, ಮೋದಿ ಷಾ ಅಧಿಕಾರಕ್ಕೆ ಬಂದು 7 ವರ್ಷಗಳೇ ಕಳೆದಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದೇ ಸಮನೆ ಏರುತ್ತಿದ್ದರೂ, ಕ್ರೂಡ್ ಆಯಿಲ್ ಬೆಲೆ ಕಡಿಮೆಯಾದ ಸಂದರ್ಭಗಳಲ್ಲೂ ಸುಂಕದ ದರವನ್ನು ಹೆಚ್ಚಿಸಿಕೊಂಡು ಹೋಗುತ್ತಿದ್ದರೂ, ಬಾಯಿ ಮುಚ್ಚಿಕೊಂಡು ಕೂತಿದೆ. ಜನತೆಯೊಡನೆ ಚೆಲ್ಲಾಟವಾಡುತ್ತಿದೆ.


ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...