Homeಅಂಕಣಗಳುನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

ನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

- Advertisement -
- Advertisement -

ಪೆಟ್ರೋಲ್ ಮತ್ತು ಡೀಸೆಲ್ ದರ ದಿನದಿನಕ್ಕೆ ಬೇಸಿಗೆಯ ಬಿಸಿಲಿನಂತೆ ಏರುತ್ತಲೇ ಇದೆ. ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ ನೂರು ಮುಟ್ಟಿದೆ. ಇದರಿಂದ ಪ್ರಯಾಣ ದರ ಹೆಚ್ಚುತ್ತದೆ. ಸರಕು ಸಾಗಣೆ ಖರ್ಚು ಹೆಚ್ಚುತ್ತದೆ. ಆ ಮೂಲಕ ಜೀವನಾಧಾರಕ್ಕೆ ಅಗತ್ಯವಾದ ಆಹಾರ ಪದಾರ್ಥಗಳು, ತರಕಾರಿ ಎಲ್ಲದರ ದರ ಹೆಚ್ಚುತ್ತದೆ. ಸರ್ಕಾರ ಆಹಾರ ಧಾನ್ಯಗಳ ಬೆಲೆ ಇಳಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಧ್ಯಮವರ್ಗದ ಜನ, ಬಡವರು ಈ ಬೆಲೆ ಏರಿಕೆಯ ಬವಣೆಯನ್ನು ಹತ್ತಾರು ವರ್ಷಗಳಿಂದ ಅನುಭವಿಸುತ್ತಿದ್ದಾರೆ. ಈ ಗೋಳನ್ನು ನಿವಾರಿಸಬೇಕೆಂದು ಸರ್ಕಾರಕ್ಕೆ ಅನ್ನಿಸುತ್ತಲೇ ಇಲ್ಲ. ಇದೇ ರೀತಿ ಅಡುಗೆ ಅನಿಲದ ಬೆಲೆಯೂ ಪ್ರತಿಸಾರಿ ನೂರು, ಇನ್ನೂರು ರೂಗಳಷ್ಟು ಹೆಚ್ಚುತ್ತಲೇ ಹೋಗುತ್ತಿದೆ. ಜನ ಸಾಮಾನ್ಯರ ಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಲೇ ಇಲ್ಲ ಜಡ್ಡುಕಟ್ಟಿದ ಸರ್ಕಾರ ಬಡವರ ಬವಣೆಗೆ ಕಿವುಡಾಗಿದೆ, ಕುರುಡಾಗಿದೆ.

ಎರಡನೆ ಮಹಾಯುದ್ಧದ ಸಂದರ್ಭದಲ್ಲಿ ಬ್ರಿಟಿಷರು ಭಾರತೀಯರನ್ನು ಹೀಗೆಯೇ ನಡೆಸಿಕೊಂಡರು. ಆಹಾರಧಾನ್ಯಗಳು ಅಂಗಡಿಗಳಲ್ಲಿ ತುಂಬಿ ತುಳುಕುತ್ತಿತ್ತು. ಆದರೆ ಅದು ದುಬಾರಿ ಬೆಲೆ ಕೊಡಲಾರದ ಬಡವರು ಹಸಿವಿನಿಂದ ಕಲ್ಕತ್ತದ ಬೀದಿ ಬೀದಿಗಳಲ್ಲಿ ಸತ್ತುಬಿದ್ದರು.

ಸ್ವಾತಂತ್ರ್ಯ ಪ್ರಾಪ್ತವಾದ ಹೊಸದರಲ್ಲಿ ಕೆಲ ವರ್ಷಗಳ ಕಾಲ ಕಾಂಗ್ರೆಸ್ ಬೆಲೆಗಳನ್ನು ಹತೋಟಿಯಲ್ಲಿಡಲು ಅನೇಕ ಕ್ರಮಗಳನ್ನು ಕೈಗೊಂಡವು. ಕಳ್ಳದಾಸ್ತಾನು ಇಟ್ಟಿರುವ ವರ್ತಕರ ರಹಸ್ಯ ಮಳಿಗೆಗಳ ಮೇಲೆ ದಾಳಿ ಮಾಡಿ, ಆ ಬಚ್ಚಿಟ್ಟ ಪದಾರ್ಥಗಳನ್ನು ಬಡವರಿಗೆ ನ್ಯಾಯ ಬೆಲೆಯಲ್ಲಿ ಒದಗಿಸುವ ಪ್ರಯತ್ನ ಮಾಡಿತು. ಹೆಚ್ಚು ಬೆಲೆಗೆ ಆಹಾರ ಧಾನ್ಯವನ್ನು ಮಾರಾಟ ಮಾಡುತ್ತಿದ್ದ ವರ್ತಕರ ವಿರುದ್ಧ ಖಟ್ಳೆ ಹೂಡಿ ಅವರನ್ನು ಸೆರೆಮನೆಗೆ ಅಟ್ಟಿತು. ಸರ್ಕಾರ ಬಡವರ ದಲಿತರ ಪರವಾಗಿದೆ ಎಂದು ಸಾಬೀತು ಮಾಡಿತು.

ಇಂದಿನ ಮೋದಿ, ಯಡಿಯೂರಪ್ಪನವರ ಸರ್ಕಾರಗಳು ತಾವು ಕಾಳಸಂತೆಕೋರರ, ಧನಪಿಶಾಚಿಗಳ ಪರವಾಗಿದೆ ಎಂದು ರಾಜಾರೋಷವಾಗಿ ಘೋಷಿಸಲು ಹಿಂಜರಿಯುತ್ತಿಲ್ಲ. ಸರ್ಕಾರದ ಈ ಭಂಡತನವನ್ನು ಜನಸಾಮಾನ್ಯರು ಇನ್ನೆಷ್ಟು ದಿನ ಸಹಿಸಬಲ್ಲರು? ಜನ ಬೀದಿಗಿಳಿಯುವ ದಿನ ಇನ್ನು ಕೆಲದಿನಗಳಲ್ಲೇ ಪ್ರಾಪ್ತವಾಗುವುದಿದೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯನ್ನಾದರೂ ಹಿಂದಕ್ಕೆ ತೆಗೆದುಕೊಂಡು ಜನರಿಗೆ ನೆಮ್ಮದಿ ತರಬಹುದಿತ್ತು. 2014ಕ್ಕೆ ಮೊದಲು ಅಂದರೆ ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಅಂದಿನ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ ಶೇ.10 ರಷ್ಟು ಡೀಸೆಲ್ ಮೇಲೆ ಶೇ.5 ರಷ್ಟು ತೆರಿಗೆ ಹಾಕಿತ್ತು. ಮೋದಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್ ಮೇಲಿನ ತೆರಿಗೆ ಶೇ.10 ರಷ್ಟಿದ್ದದ್ದನ್ನು ಈಗ ಶೇ.32ಕ್ಕೆ, ಡೀಸೆಲ್ ಮೇಲಿನ ತೆರಿಗೆಯನ್ನು ಶೇ.5ರಿಂದ ಶೇ.31ಕ್ಕೆ ಏರಿಸಿದ್ದಾರೆ. ಇದು ಹಗಲು ದರೋಡೆ ಎಂದು ಕರೆಯದೇ ಬೇರೆ ಯಾವ ಹೆಸರಿನಿಂದ ಕರೆಯಬೇಕು?

PC : Prajavani

ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿಯವರು, ಕ್ರೂಡ್ ಆಯಿಲ್ ಬೆಲೆಗಿಂತ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯೇ ಜಾಸ್ತಿ ಎಂದು ಹೇಳಿ, ಅಂದಿನ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದರು. ಈಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ 3ಪಟ್ಟು ಏರಿದ್ದರೂ ಬಿಜೆಪಿ ರಾಜ್ಯ ಸರ್ಕಾರಗಳು ಮೋದಿ ಸರ್ಕಾರದ ಹಗಲು ದರೋಡೆಯ ವಿರುದ್ಧ ಒಂದು ಕೂಗನ್ನು ಹಾಕಿಲ್ಲ. ರಾಜ್ಯಾಂಗ ಮತ್ತು ಆಡಳಿತಾಂಗ ಈ ಬಗೆಗೆ ಉದಾಸೀನ ಭಾವನೆ ತೋರಬೇಕಾದರೆ, ನ್ಯಾಯಾಂಗವಾದರೂ ಮಧ್ಯೆಪ್ರವೇಶಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಾಗಿತ್ತು. ನ್ಯಾಯಾಂಗ ಈ ಜ್ವಲಂತ ಪ್ರಶ್ನೆಯ ಬಗೆಗೆ ಪರಿಹಾರ ರೂಪದಲ್ಲಿ ಸಲಹೆ ಸೂಚನೆಯನ್ನಾದರೂ ಸರ್ಕಾರಕ್ಕೆ ನೀಡಬೇಕಾಗಿತ್ತು. ಅದೂ ಈ ಬಗೆಗೆ ಮೈನ ತಳೆದಿರುವುದು ದೇಶದ ದೌರ್ಭಾಗ್ಯ.

ಮೋದಿ ಷಾ ಸರ್ಕಾರಕ್ಕೆ ಜನರ ಸಮಸ್ಯೆಗಳನ್ನು ಹೆಚ್ಚಿಸುವುದಕ್ಕಿರುವ ಆಸಕ್ತಿ ಜನರ ಬವಣೆಯನ್ನು ಕಡಿತಗೊಳಿಸುವುದರಲ್ಲಿ ಇಲ್ಲ. ಅವರೀಗ ಭಾರತವನ್ನೆಲ್ಲ ಬಿಜೆಪಿ ವಶಮಾಡಿಕೊಳ್ಳುವ ಅವೇಶದಲ್ಲಿದ್ದಾರೆ. ಪುದುಚೇರಿಯಲ್ಲಿ ಸಮಸ್ಯೆ ಹುಟ್ಟಿ ಹಾಕಿ ವಿದ್ಯುಕ್ತ ಸರ್ಕಾರವನ್ನು ಕೆಡವಿ, ರಾಷ್ಟ್ರಾಧ್ಯಕ್ಷರ ಆಡಳಿತ ಜಾರಿಗೆ ಬರುವಂತೆ ಮಾಡಲಾಯಿತು. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಡಿಎಂಕೆ ಪಕ್ಷವನ್ನು ತನ್ನ ವಶ ಮಾಡಿಕೊಂಡು ಅಧಿಕಾರ ಹಿಡಿಯುವ ಪ್ರಯತ್ನದಲ್ಲಿದೆ. ಮೊದಲು ಪಶ್ಚಿಮ ಬಂಗಾಳವನ್ನು ಶತಾಯುಗತಾಯು ತೆಕ್ಕೆಗೆ ತೆಗೆದುಕೊಳ್ಳುವ ತವಕದಲ್ಲಿ ನಿರತರಾಗಿದ್ದಾರೆ. ತಮಿಳುನಾಡು ಇಲ್ಲಿಯವರೆಗೂ ತಮಿಳರ ಸಾರ್ವಭೌಮತ್ವದಲ್ಲಿ ನಡೆಯುತ್ತಿತ್ತು. ಪಶ್ಚಿಮ ಬಂಗಾಳದಲ್ಲಿ ಬಂಗಾಳಿಗಳ ಐಕ್ಯತೆಯಲ್ಲಿ ರಾಜ್ಯಭಾರ ನಡೆಯುತ್ತಿತ್ತು. ಈಗ ಬಂಗಾಳದಲ್ಲಿ ಬಂಗಾಳಿಗಳಲ್ಲಿ ಒಡಕು ಉಂಟು ಮಾಡಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ತೊಡಗಿದ್ದಾರೆ. ಇದು ಅನೀತಿಯುತ ನಡವಳಿಕೆ ಎಂದು ಮೋದಿ ಷಾಗಳಿಗೆ ಅನಿಸುತ್ತಿಲ್ಲ. ಭಾರತದ ಸಾರ್ವಭೌಮರಾಗುವ ಆತುರದಲ್ಲಿ ಮೋದಿ ಮತ್ತು ಷಾ ಎಲ್ಲ ಮಾನವೀಯ ಮೌಲ್ಯಗಳನ್ನೂ ಗಾಳಿಗೆ ತೂರುತ್ತಿದ್ದಾರೆ. ಸಂಚು ಪಿತೂರಿ ಇವು ಅವರ ರಾಜಕೀಯ ಮೌಲ್ಯಗಳಾಗಿವೆ.

’ಸಬ್ ಕೆ ಲಿಯೆ ಹಮ್ ಎಂದು ಘೋಷಣೆ ಕೂಗುತ್ತಾ, ಹಿಂದುತ್ವ ಪ್ರತಿಪಾದನೆಗೆ ಮಾತ್ರ ಅವರು ಬದ್ಧರು. ವಿರೋಧ ಪಕ್ಷವಾದ ಕಾಂಗ್ರೆಸ್‌ಅನ್ನು ದುರ್ಬಲಗೊಳಿಸುವುದು, ನಾಮಾವಶೇಷ ಮಾಡುವುದಾಗಿ ಘೋಷಣೆ ಕೂಗುವುದು, ವಿರೋಧ ಪಕ್ಷಗಳಲ್ಲಿರುವವರನ್ನು ತಮ್ಮ ವಶ ಮಾಡಿಕೊಳ್ಳುವುದು, ಅನೈತಿಕವಾಗಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದು, ರಾಜ್ಯಗಳಲ್ಲಿರುವ ಅನ್ಯ ಆಡಳಿತಾರೂಢ ಪಕ್ಷವನ್ನು ದುರ್ಬಲಗೊಳಿಸುವುದು ಇವೆಲ್ಲ ರಾಜನೀತಿಯೇ?

ಒಟ್ಟಿನಲ್ಲಿ ಕಚ್ಚಾ ಪೆಟ್ರೋಲಿಯಂ ಬೆಲೆ ಇಳಿಸಬೇಕೆಂದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಾಯಿ ಬಡಿದುಕೊಳ್ಳುತ್ತಿದ್ದ ಬೆಜಿಪಿ, ಮೋದಿ ಷಾ ಅಧಿಕಾರಕ್ಕೆ ಬಂದು 7 ವರ್ಷಗಳೇ ಕಳೆದಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದೇ ಸಮನೆ ಏರುತ್ತಿದ್ದರೂ, ಕ್ರೂಡ್ ಆಯಿಲ್ ಬೆಲೆ ಕಡಿಮೆಯಾದ ಸಂದರ್ಭಗಳಲ್ಲೂ ಸುಂಕದ ದರವನ್ನು ಹೆಚ್ಚಿಸಿಕೊಂಡು ಹೋಗುತ್ತಿದ್ದರೂ, ಬಾಯಿ ಮುಚ್ಚಿಕೊಂಡು ಕೂತಿದೆ. ಜನತೆಯೊಡನೆ ಚೆಲ್ಲಾಟವಾಡುತ್ತಿದೆ.


ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...