Homeಅಂಕಣಗಳುನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

ನೂರರ ನೋಟ: ಬೆಲೆ ವಿಪರೀತ; ಸಾಮಾನ್ಯರ ದಿನನಿತ್ಯದ ಬದುಕು ಮೂರಾಬಟ್ಟೆ; ಇವ್ಯಾವುದರ ಪರಿವೇ ಇಲ್ಲದ ಸರ್ಕಾರ

- Advertisement -
- Advertisement -

ಪೆಟ್ರೋಲ್ ಮತ್ತು ಡೀಸೆಲ್ ದರ ದಿನದಿನಕ್ಕೆ ಬೇಸಿಗೆಯ ಬಿಸಿಲಿನಂತೆ ಏರುತ್ತಲೇ ಇದೆ. ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ ನೂರು ಮುಟ್ಟಿದೆ. ಇದರಿಂದ ಪ್ರಯಾಣ ದರ ಹೆಚ್ಚುತ್ತದೆ. ಸರಕು ಸಾಗಣೆ ಖರ್ಚು ಹೆಚ್ಚುತ್ತದೆ. ಆ ಮೂಲಕ ಜೀವನಾಧಾರಕ್ಕೆ ಅಗತ್ಯವಾದ ಆಹಾರ ಪದಾರ್ಥಗಳು, ತರಕಾರಿ ಎಲ್ಲದರ ದರ ಹೆಚ್ಚುತ್ತದೆ. ಸರ್ಕಾರ ಆಹಾರ ಧಾನ್ಯಗಳ ಬೆಲೆ ಇಳಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಧ್ಯಮವರ್ಗದ ಜನ, ಬಡವರು ಈ ಬೆಲೆ ಏರಿಕೆಯ ಬವಣೆಯನ್ನು ಹತ್ತಾರು ವರ್ಷಗಳಿಂದ ಅನುಭವಿಸುತ್ತಿದ್ದಾರೆ. ಈ ಗೋಳನ್ನು ನಿವಾರಿಸಬೇಕೆಂದು ಸರ್ಕಾರಕ್ಕೆ ಅನ್ನಿಸುತ್ತಲೇ ಇಲ್ಲ. ಇದೇ ರೀತಿ ಅಡುಗೆ ಅನಿಲದ ಬೆಲೆಯೂ ಪ್ರತಿಸಾರಿ ನೂರು, ಇನ್ನೂರು ರೂಗಳಷ್ಟು ಹೆಚ್ಚುತ್ತಲೇ ಹೋಗುತ್ತಿದೆ. ಜನ ಸಾಮಾನ್ಯರ ಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಲೇ ಇಲ್ಲ ಜಡ್ಡುಕಟ್ಟಿದ ಸರ್ಕಾರ ಬಡವರ ಬವಣೆಗೆ ಕಿವುಡಾಗಿದೆ, ಕುರುಡಾಗಿದೆ.

ಎರಡನೆ ಮಹಾಯುದ್ಧದ ಸಂದರ್ಭದಲ್ಲಿ ಬ್ರಿಟಿಷರು ಭಾರತೀಯರನ್ನು ಹೀಗೆಯೇ ನಡೆಸಿಕೊಂಡರು. ಆಹಾರಧಾನ್ಯಗಳು ಅಂಗಡಿಗಳಲ್ಲಿ ತುಂಬಿ ತುಳುಕುತ್ತಿತ್ತು. ಆದರೆ ಅದು ದುಬಾರಿ ಬೆಲೆ ಕೊಡಲಾರದ ಬಡವರು ಹಸಿವಿನಿಂದ ಕಲ್ಕತ್ತದ ಬೀದಿ ಬೀದಿಗಳಲ್ಲಿ ಸತ್ತುಬಿದ್ದರು.

ಸ್ವಾತಂತ್ರ್ಯ ಪ್ರಾಪ್ತವಾದ ಹೊಸದರಲ್ಲಿ ಕೆಲ ವರ್ಷಗಳ ಕಾಲ ಕಾಂಗ್ರೆಸ್ ಬೆಲೆಗಳನ್ನು ಹತೋಟಿಯಲ್ಲಿಡಲು ಅನೇಕ ಕ್ರಮಗಳನ್ನು ಕೈಗೊಂಡವು. ಕಳ್ಳದಾಸ್ತಾನು ಇಟ್ಟಿರುವ ವರ್ತಕರ ರಹಸ್ಯ ಮಳಿಗೆಗಳ ಮೇಲೆ ದಾಳಿ ಮಾಡಿ, ಆ ಬಚ್ಚಿಟ್ಟ ಪದಾರ್ಥಗಳನ್ನು ಬಡವರಿಗೆ ನ್ಯಾಯ ಬೆಲೆಯಲ್ಲಿ ಒದಗಿಸುವ ಪ್ರಯತ್ನ ಮಾಡಿತು. ಹೆಚ್ಚು ಬೆಲೆಗೆ ಆಹಾರ ಧಾನ್ಯವನ್ನು ಮಾರಾಟ ಮಾಡುತ್ತಿದ್ದ ವರ್ತಕರ ವಿರುದ್ಧ ಖಟ್ಳೆ ಹೂಡಿ ಅವರನ್ನು ಸೆರೆಮನೆಗೆ ಅಟ್ಟಿತು. ಸರ್ಕಾರ ಬಡವರ ದಲಿತರ ಪರವಾಗಿದೆ ಎಂದು ಸಾಬೀತು ಮಾಡಿತು.

ಇಂದಿನ ಮೋದಿ, ಯಡಿಯೂರಪ್ಪನವರ ಸರ್ಕಾರಗಳು ತಾವು ಕಾಳಸಂತೆಕೋರರ, ಧನಪಿಶಾಚಿಗಳ ಪರವಾಗಿದೆ ಎಂದು ರಾಜಾರೋಷವಾಗಿ ಘೋಷಿಸಲು ಹಿಂಜರಿಯುತ್ತಿಲ್ಲ. ಸರ್ಕಾರದ ಈ ಭಂಡತನವನ್ನು ಜನಸಾಮಾನ್ಯರು ಇನ್ನೆಷ್ಟು ದಿನ ಸಹಿಸಬಲ್ಲರು? ಜನ ಬೀದಿಗಿಳಿಯುವ ದಿನ ಇನ್ನು ಕೆಲದಿನಗಳಲ್ಲೇ ಪ್ರಾಪ್ತವಾಗುವುದಿದೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯನ್ನಾದರೂ ಹಿಂದಕ್ಕೆ ತೆಗೆದುಕೊಂಡು ಜನರಿಗೆ ನೆಮ್ಮದಿ ತರಬಹುದಿತ್ತು. 2014ಕ್ಕೆ ಮೊದಲು ಅಂದರೆ ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಅಂದಿನ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ ಶೇ.10 ರಷ್ಟು ಡೀಸೆಲ್ ಮೇಲೆ ಶೇ.5 ರಷ್ಟು ತೆರಿಗೆ ಹಾಕಿತ್ತು. ಮೋದಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್ ಮೇಲಿನ ತೆರಿಗೆ ಶೇ.10 ರಷ್ಟಿದ್ದದ್ದನ್ನು ಈಗ ಶೇ.32ಕ್ಕೆ, ಡೀಸೆಲ್ ಮೇಲಿನ ತೆರಿಗೆಯನ್ನು ಶೇ.5ರಿಂದ ಶೇ.31ಕ್ಕೆ ಏರಿಸಿದ್ದಾರೆ. ಇದು ಹಗಲು ದರೋಡೆ ಎಂದು ಕರೆಯದೇ ಬೇರೆ ಯಾವ ಹೆಸರಿನಿಂದ ಕರೆಯಬೇಕು?

PC : Prajavani

ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿಯವರು, ಕ್ರೂಡ್ ಆಯಿಲ್ ಬೆಲೆಗಿಂತ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವ ತೆರಿಗೆಯೇ ಜಾಸ್ತಿ ಎಂದು ಹೇಳಿ, ಅಂದಿನ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದರು. ಈಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ 3ಪಟ್ಟು ಏರಿದ್ದರೂ ಬಿಜೆಪಿ ರಾಜ್ಯ ಸರ್ಕಾರಗಳು ಮೋದಿ ಸರ್ಕಾರದ ಹಗಲು ದರೋಡೆಯ ವಿರುದ್ಧ ಒಂದು ಕೂಗನ್ನು ಹಾಕಿಲ್ಲ. ರಾಜ್ಯಾಂಗ ಮತ್ತು ಆಡಳಿತಾಂಗ ಈ ಬಗೆಗೆ ಉದಾಸೀನ ಭಾವನೆ ತೋರಬೇಕಾದರೆ, ನ್ಯಾಯಾಂಗವಾದರೂ ಮಧ್ಯೆಪ್ರವೇಶಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಾಗಿತ್ತು. ನ್ಯಾಯಾಂಗ ಈ ಜ್ವಲಂತ ಪ್ರಶ್ನೆಯ ಬಗೆಗೆ ಪರಿಹಾರ ರೂಪದಲ್ಲಿ ಸಲಹೆ ಸೂಚನೆಯನ್ನಾದರೂ ಸರ್ಕಾರಕ್ಕೆ ನೀಡಬೇಕಾಗಿತ್ತು. ಅದೂ ಈ ಬಗೆಗೆ ಮೈನ ತಳೆದಿರುವುದು ದೇಶದ ದೌರ್ಭಾಗ್ಯ.

ಮೋದಿ ಷಾ ಸರ್ಕಾರಕ್ಕೆ ಜನರ ಸಮಸ್ಯೆಗಳನ್ನು ಹೆಚ್ಚಿಸುವುದಕ್ಕಿರುವ ಆಸಕ್ತಿ ಜನರ ಬವಣೆಯನ್ನು ಕಡಿತಗೊಳಿಸುವುದರಲ್ಲಿ ಇಲ್ಲ. ಅವರೀಗ ಭಾರತವನ್ನೆಲ್ಲ ಬಿಜೆಪಿ ವಶಮಾಡಿಕೊಳ್ಳುವ ಅವೇಶದಲ್ಲಿದ್ದಾರೆ. ಪುದುಚೇರಿಯಲ್ಲಿ ಸಮಸ್ಯೆ ಹುಟ್ಟಿ ಹಾಕಿ ವಿದ್ಯುಕ್ತ ಸರ್ಕಾರವನ್ನು ಕೆಡವಿ, ರಾಷ್ಟ್ರಾಧ್ಯಕ್ಷರ ಆಡಳಿತ ಜಾರಿಗೆ ಬರುವಂತೆ ಮಾಡಲಾಯಿತು. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಡಿಎಂಕೆ ಪಕ್ಷವನ್ನು ತನ್ನ ವಶ ಮಾಡಿಕೊಂಡು ಅಧಿಕಾರ ಹಿಡಿಯುವ ಪ್ರಯತ್ನದಲ್ಲಿದೆ. ಮೊದಲು ಪಶ್ಚಿಮ ಬಂಗಾಳವನ್ನು ಶತಾಯುಗತಾಯು ತೆಕ್ಕೆಗೆ ತೆಗೆದುಕೊಳ್ಳುವ ತವಕದಲ್ಲಿ ನಿರತರಾಗಿದ್ದಾರೆ. ತಮಿಳುನಾಡು ಇಲ್ಲಿಯವರೆಗೂ ತಮಿಳರ ಸಾರ್ವಭೌಮತ್ವದಲ್ಲಿ ನಡೆಯುತ್ತಿತ್ತು. ಪಶ್ಚಿಮ ಬಂಗಾಳದಲ್ಲಿ ಬಂಗಾಳಿಗಳ ಐಕ್ಯತೆಯಲ್ಲಿ ರಾಜ್ಯಭಾರ ನಡೆಯುತ್ತಿತ್ತು. ಈಗ ಬಂಗಾಳದಲ್ಲಿ ಬಂಗಾಳಿಗಳಲ್ಲಿ ಒಡಕು ಉಂಟು ಮಾಡಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ತೊಡಗಿದ್ದಾರೆ. ಇದು ಅನೀತಿಯುತ ನಡವಳಿಕೆ ಎಂದು ಮೋದಿ ಷಾಗಳಿಗೆ ಅನಿಸುತ್ತಿಲ್ಲ. ಭಾರತದ ಸಾರ್ವಭೌಮರಾಗುವ ಆತುರದಲ್ಲಿ ಮೋದಿ ಮತ್ತು ಷಾ ಎಲ್ಲ ಮಾನವೀಯ ಮೌಲ್ಯಗಳನ್ನೂ ಗಾಳಿಗೆ ತೂರುತ್ತಿದ್ದಾರೆ. ಸಂಚು ಪಿತೂರಿ ಇವು ಅವರ ರಾಜಕೀಯ ಮೌಲ್ಯಗಳಾಗಿವೆ.

’ಸಬ್ ಕೆ ಲಿಯೆ ಹಮ್ ಎಂದು ಘೋಷಣೆ ಕೂಗುತ್ತಾ, ಹಿಂದುತ್ವ ಪ್ರತಿಪಾದನೆಗೆ ಮಾತ್ರ ಅವರು ಬದ್ಧರು. ವಿರೋಧ ಪಕ್ಷವಾದ ಕಾಂಗ್ರೆಸ್‌ಅನ್ನು ದುರ್ಬಲಗೊಳಿಸುವುದು, ನಾಮಾವಶೇಷ ಮಾಡುವುದಾಗಿ ಘೋಷಣೆ ಕೂಗುವುದು, ವಿರೋಧ ಪಕ್ಷಗಳಲ್ಲಿರುವವರನ್ನು ತಮ್ಮ ವಶ ಮಾಡಿಕೊಳ್ಳುವುದು, ಅನೈತಿಕವಾಗಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದು, ರಾಜ್ಯಗಳಲ್ಲಿರುವ ಅನ್ಯ ಆಡಳಿತಾರೂಢ ಪಕ್ಷವನ್ನು ದುರ್ಬಲಗೊಳಿಸುವುದು ಇವೆಲ್ಲ ರಾಜನೀತಿಯೇ?

ಒಟ್ಟಿನಲ್ಲಿ ಕಚ್ಚಾ ಪೆಟ್ರೋಲಿಯಂ ಬೆಲೆ ಇಳಿಸಬೇಕೆಂದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಾಯಿ ಬಡಿದುಕೊಳ್ಳುತ್ತಿದ್ದ ಬೆಜಿಪಿ, ಮೋದಿ ಷಾ ಅಧಿಕಾರಕ್ಕೆ ಬಂದು 7 ವರ್ಷಗಳೇ ಕಳೆದಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದೇ ಸಮನೆ ಏರುತ್ತಿದ್ದರೂ, ಕ್ರೂಡ್ ಆಯಿಲ್ ಬೆಲೆ ಕಡಿಮೆಯಾದ ಸಂದರ್ಭಗಳಲ್ಲೂ ಸುಂಕದ ದರವನ್ನು ಹೆಚ್ಚಿಸಿಕೊಂಡು ಹೋಗುತ್ತಿದ್ದರೂ, ಬಾಯಿ ಮುಚ್ಚಿಕೊಂಡು ಕೂತಿದೆ. ಜನತೆಯೊಡನೆ ಚೆಲ್ಲಾಟವಾಡುತ್ತಿದೆ.


ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...