Homeಮುಖಪುಟಹ್ಯಾಕ್ ಆಗುವ ಸಾಧ್ಯತೆ: ಇವಿಎಂ ನಿಷೇಧಿಸಬೇಕು ಎಂದ ಎಲಾನ್‌ ಮಸ್ಕ್‌

ಹ್ಯಾಕ್ ಆಗುವ ಸಾಧ್ಯತೆ: ಇವಿಎಂ ನಿಷೇಧಿಸಬೇಕು ಎಂದ ಎಲಾನ್‌ ಮಸ್ಕ್‌

- Advertisement -
- Advertisement -

ಕೃತಕ ಬುದ್ಧಿಮತ್ತೆ (ಎಐ) ಅಥವಾ ಮಾನವರಿಂದ ಹ್ಯಾಕ್‌ ಆಗುವ ಸಾಧ್ಯತೆಗಳು ಇರುವುದರಿಂದ ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಷೇಧಿಸಬೇಕು ಎಂದು ಟೆಸ್ಲಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಎಲಾನ್ ಮಸ್ಕ್ ಆಗ್ರಹಿಸಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಸ್ಥಾನಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಬರ್ಟ್ ಎಫ್ ಕೆನಡಿ ಜೂನಿಯರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಎಲಾನ್‌ ಮಸ್ಕ್‌, ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಮಸ್ಕ್‌ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಭಾರತದ ವಿಪಕ್ಷ ನಾಯಕರೂ ಧನಿಗೂಡಿಸಿದ್ದಾರೆ.

ಮಾಧ್ಯಮ ವರದಿಯ ಬಗ್ಗೆ ಪೋಸ್ಟ್‌ ಮಾಡಿದ್ದ ರಾಬರ್ಟ್ ಎಫ್ ಕೆನಡಿ ಜೂನಿಯರ್ ಅವರು, “ಅಸೋಸಿಯೇಟೆಡ್ ಪ್ರೆಸ್ ಪ್ರಕಾರ ಪೋರ್ಟೊ ರಿಕೊದ ಪ್ರಾಥಮಿಕ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳಿಗೆ ಸಂಬಂಧಿಸಿದ ನೂರಾರು ಅಕ್ರಮಗಳು ನಡೆದಿವೆ. ಅದೃಷ್ಟವಶಾತ್, ಪೇಪರ್ ಟ್ರಯಲ್ ಇದ್ದುದರಿಂದ ಸಮಸ್ಯೆಯನ್ನು ಗುರುತಿಸಿ ಮತ ಎಣಿಕೆಯನ್ನು ಸರಿಪಡಿಸಲಾಗಿದೆ. ಪೇಪರ್ ಟ್ರಯಲ್ ಇಲ್ಲದಿದ್ದರೆ ಏನಾಗಬಹುದು?” ಎಂದು ಪ್ರಶ್ನಿಸಿದ್ದರು.

“ಯುಎಸ್‌ ನಾಗರಿಕರು ತಮ್ಮ ಪ್ರತಿಯೊಂದು ಮತಗಳನ್ನು ಎಣಿಸಲಾಗಿದೆ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂಬುವುದನ್ನು ತಿಳಿದಿರಬೇಕು. ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಹಸ್ತಕ್ಷೇಪವನ್ನು ತಪ್ಪಿಸಲು ನಾವು ಪೇಪರ್ ಬ್ಯಾಲೆಟ್‌ಗಳಿಗೆ ಹಿಂತಿರುಗಬೇಕಾಗಿದೆ. ನನ್ನ ಆಡಳಿತ ಬ್ಯಾಲೆಟ್‌ ಪೇಪರ್ ಚುನಾವಣೆಗೆ ಹಿಂದಿರುಗಲಿದೆ ಮತ್ತು ಪ್ರಾಮಾಣಿಕ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಾತರಿಪಡಿಸಲಿದೆ” ಎಂದಿದ್ದರು.

ಜೂನ್ 2 ರಂದು ನ್ಯೂ ಪ್ರೋಗ್ರೆಸಿವ್ ಪಾರ್ಟಿ (ಪಿಎನ್‌ಪಿ) ಮತ್ತು ಪಾಪ್ಯುಲರ್ ಡೆಮಾಕ್ರಟಿಕ್ ಪಾರ್ಟಿ (ಪಿಪಿಡಿ) ಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪೋರ್ಟೊ ರಿಕೊದಲ್ಲಿ ಪ್ರಾಥಮಿಕ ಚುನಾವಣೆ ನಡೆದಿದೆ. ಮತ ಎಣಿಕೆಯ ಬಳಿಕ ಎರಡೂ ಪಕ್ಷಗಳು ಬ್ಯಾಲೆಟ್ ಪೇಪರ್ ತಪ್ಪಾದ ಫಲಿತಾಂಶ ತೋರಿಸಿದೆ ಎಂದು ಹೇಳಿಕೊಂಡಿವೆ. ಪಿಎನ್‌ಪಿ 700 ದೋಷಗಳ ಬಗ್ಗೆ ವರದಿ ಮಾಡಿದ್ದು,ಪಿಪಿಡಿ 350 ವ್ಯತ್ಯಾಸಗಳನ್ನು ತೋರಿಸಿದೆ.

ಬಳಿಕ, ಚುನಾವಣಾ ಆಯೋಗ ನೂರಾರು ಮತ ಎಣಿಕೆ ಯಂತ್ರಗಳಿಂದ ವೋಟರ್ ಸ್ಲಿಪ್ ಲೆಕ್ಕ ಹಾಕುವ ಮೂಲಕ ಸಮಸ್ಯೆ ಸರಿಪಡಿಸಿದ್ದಾರೆ.

ಎಲಾನ್ ಮಸ್ಕ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, “ಚೆನ್ನಾಗಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇವಿಎಂಗಳ ಬಗ್ಗೆ ಇವರಿಗೆ ಕಲಿಸಿಕೊಡುವ ಅಗತ್ಯತೆಯಿದೆ” ಎಂದಿದ್ದಾರೆ.

ಇದನ್ನೂ ಓದಿ : ಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...