Homeಮುಖಪುಟಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಗುಂಡೇಟು: ಆಸ್ಪತ್ರೆಗೆ ದಾಖಲು

- Advertisement -
- Advertisement -

2021ರ ನವೆಂಬರ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುವ ಮೂಲಕ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತೆ ರೀತಾ ಯಾದವ್‌ರವರಿಗೆ ಸೋಮವಾರ ಸಂಜೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅವರನ್ನು ಸದ್ಯ ಸುಲ್ತಾನ್‌ಪುರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

2021ರ ನವೆಂಬರ್ ತಿಂಗಳಿನಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಯೋಗಿ ಮುರ್ದಾಬಾದ್ ಎಂಬು ಘೋಷಣೆ ಕೂಗಿದ್ದ ರೀತಾ ಯಾದವ್ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಅವರು ಸೋಮವಾರ ಸಂಜೆ 6.30ರ ಸಮಯದಲ್ಲಿ ಪಕ್ಷದ ಕಚೇರಿಯಿಂದ ಮನೆಗೆ ತೆರಳಿದ್ದ ವೇಳೆ ಲಕ್ನೋ-ವಾರಣಾಸಿ ಚತುಷ್ಪತ ಹೆದ್ದಾರಿ ಸುಲ್ತಾನ್‌ಪುರದ ಬಳಿ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಒಳಗಾಗಿದ್ದಾರೆ.

ರೀತಾ ಯಾದವ್‌ರವರು ತಮ್ಮ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ 3 ಜನ ಗೂಂಡಾಗಳು ಪಲ್ಸರ್ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿಯು ವಾಹನದಲ್ಲಿದ್ದ ಅವರ ಕಾಲಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ನಂತರ ಅವರ ಡ್ರೈವರ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ರೀತಾ ಯಾದವ್ ಚಿಕಿತ್ಸೆ ಪಡೆಯುತ್ತಿದ್ದು ಅವರ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ರೀತಾ ಯಾದವ್ ಪ್ರಕಾರ, “ದುಷ್ಕರ್ಮಿಗಳು ಯಾರು ಎಂಬುದನ್ನು ಪತ್ತೆ ಹಚ್ಚಲಾಗಿಲ್ಲ. ಅವರ ಕಾರು ಅಡ್ಡಗಟ್ಟಿ ಆಕ್ಷೇಪಾರ್ಹ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದರು. ನಂತರ ಡ್ರೈವರ್‌ಗೆ ಗನ್ ತೋರಿಸಿದಾಗ ನಾನು ಒಬ್ಬರ ಕಪಾಳಕ್ಕೆ ಹೊಡೆದೆ. ಆಗ ಆತ ಗುಂಡು ಹಾರಿಸಿ ಪರಾರಿಯಾದ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರೀತಾ ಯಾದವ್ 2021ರ ನವೆಂಬರ್ 16 ರಂದು ಪ್ರಧಾನಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದಾಗ ಬಂಧನಕ್ಕೊಳಗಾಗಿದ್ದರು. ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಆರಂಭದಲ್ಲಿ ಸಮಾಜವಾದಿ ಪಕ್ಷದಲ್ಲಿದ್ದ ಅವರು ನಂತರ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಪಕ್ಷದ “ನಾನು ಹುಡುಗಿ, ನಾನು ಹೋರಾಡಬಲ್ಲೆ” ಅಭಿಯಾನದಲ್ಲಿ ಸಕ್ರಿಯರಾಗಿದ್ದರು. ಜಾನ್ಸಿಯಲ್ಲಿ ಡಿಸೆಂಬರ್‌ ನಲ್ಲಿ ನಡೆದ ಹೆಣ್ಣುಮಕ್ಕಳ ಬೃಹತ್ ಮ್ಯಾರಥಾನ್ ಆಯೋಜಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.


ಇದನ್ನೂ ಓದಿ: “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ”: ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ದಾಳಿ ಕಂಡನಾರ್ಹ. ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು.

  2. ದೇಶದಲ್ಲಿ ವೈಚಾರಿಕ ಭಿನ್ನಮತವನ್ನು ವೈಚಾರಿಕವಾಗಿ ಎದುರಿಸಲಾಗದ ಪ್ರತಿಗಾಮಿ ಶಕ್ತಿಗಳು ಆಳುವ ವರ್ಗದ ಅಕ್ರಮ, ಅನ್ಯಾಯಗಳನ್ನು ಪ್ರಜಾತಾಂತ್ರಿಕ ವಿಧಾನದ ಮೂಲಕ ವಿರೋಧ ವ್ಯಕ್ತಪಡಿಸುವ ಪ್ರಜೆಗಳ ಅಧಿಕಾರವನ್ನು ಕಸಿದುಕೊಳ್ಳುವ ಪ್ರಯತ್ನದ ಅಂಗವಾಗಿ ತಮ್ಮ ಕಾಲಾಳುಗಳ ಮೂಲಕ ಈ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಇದು ಖಂಡನೀಯ, ಆದ್ದರಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ದೇಶದ ಹಿತಬಯಸುವ ಪ್ರಜಾಸತ್ತೆಯ ಪರ ನಾಗರಿಕರು ಮತ್ತು ಸಂಘಟನೆಗಳು ಒಂದಾಗಿ ಹೋರಾಡುವ ಮೂಲಕ ದೇಶದ ಸಂವಿಧಾನದ ಆಶಯಗಳನ್ನು ರಕ್ಷಿಸಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...