Homeಮುಖಪುಟಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಗುಂಡೇಟು: ಆಸ್ಪತ್ರೆಗೆ ದಾಖಲು

- Advertisement -
- Advertisement -

2021ರ ನವೆಂಬರ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುವ ಮೂಲಕ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತೆ ರೀತಾ ಯಾದವ್‌ರವರಿಗೆ ಸೋಮವಾರ ಸಂಜೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅವರನ್ನು ಸದ್ಯ ಸುಲ್ತಾನ್‌ಪುರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

2021ರ ನವೆಂಬರ್ ತಿಂಗಳಿನಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಯೋಗಿ ಮುರ್ದಾಬಾದ್ ಎಂಬು ಘೋಷಣೆ ಕೂಗಿದ್ದ ರೀತಾ ಯಾದವ್ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಅವರು ಸೋಮವಾರ ಸಂಜೆ 6.30ರ ಸಮಯದಲ್ಲಿ ಪಕ್ಷದ ಕಚೇರಿಯಿಂದ ಮನೆಗೆ ತೆರಳಿದ್ದ ವೇಳೆ ಲಕ್ನೋ-ವಾರಣಾಸಿ ಚತುಷ್ಪತ ಹೆದ್ದಾರಿ ಸುಲ್ತಾನ್‌ಪುರದ ಬಳಿ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಒಳಗಾಗಿದ್ದಾರೆ.

ರೀತಾ ಯಾದವ್‌ರವರು ತಮ್ಮ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ 3 ಜನ ಗೂಂಡಾಗಳು ಪಲ್ಸರ್ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿಯು ವಾಹನದಲ್ಲಿದ್ದ ಅವರ ಕಾಲಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ನಂತರ ಅವರ ಡ್ರೈವರ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ರೀತಾ ಯಾದವ್ ಚಿಕಿತ್ಸೆ ಪಡೆಯುತ್ತಿದ್ದು ಅವರ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ರೀತಾ ಯಾದವ್ ಪ್ರಕಾರ, “ದುಷ್ಕರ್ಮಿಗಳು ಯಾರು ಎಂಬುದನ್ನು ಪತ್ತೆ ಹಚ್ಚಲಾಗಿಲ್ಲ. ಅವರ ಕಾರು ಅಡ್ಡಗಟ್ಟಿ ಆಕ್ಷೇಪಾರ್ಹ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದರು. ನಂತರ ಡ್ರೈವರ್‌ಗೆ ಗನ್ ತೋರಿಸಿದಾಗ ನಾನು ಒಬ್ಬರ ಕಪಾಳಕ್ಕೆ ಹೊಡೆದೆ. ಆಗ ಆತ ಗುಂಡು ಹಾರಿಸಿ ಪರಾರಿಯಾದ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರೀತಾ ಯಾದವ್ 2021ರ ನವೆಂಬರ್ 16 ರಂದು ಪ್ರಧಾನಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದಾಗ ಬಂಧನಕ್ಕೊಳಗಾಗಿದ್ದರು. ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಆರಂಭದಲ್ಲಿ ಸಮಾಜವಾದಿ ಪಕ್ಷದಲ್ಲಿದ್ದ ಅವರು ನಂತರ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಪಕ್ಷದ “ನಾನು ಹುಡುಗಿ, ನಾನು ಹೋರಾಡಬಲ್ಲೆ” ಅಭಿಯಾನದಲ್ಲಿ ಸಕ್ರಿಯರಾಗಿದ್ದರು. ಜಾನ್ಸಿಯಲ್ಲಿ ಡಿಸೆಂಬರ್‌ ನಲ್ಲಿ ನಡೆದ ಹೆಣ್ಣುಮಕ್ಕಳ ಬೃಹತ್ ಮ್ಯಾರಥಾನ್ ಆಯೋಜಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.


ಇದನ್ನೂ ಓದಿ: “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ”: ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ದಾಳಿ ಕಂಡನಾರ್ಹ. ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು.

  2. ದೇಶದಲ್ಲಿ ವೈಚಾರಿಕ ಭಿನ್ನಮತವನ್ನು ವೈಚಾರಿಕವಾಗಿ ಎದುರಿಸಲಾಗದ ಪ್ರತಿಗಾಮಿ ಶಕ್ತಿಗಳು ಆಳುವ ವರ್ಗದ ಅಕ್ರಮ, ಅನ್ಯಾಯಗಳನ್ನು ಪ್ರಜಾತಾಂತ್ರಿಕ ವಿಧಾನದ ಮೂಲಕ ವಿರೋಧ ವ್ಯಕ್ತಪಡಿಸುವ ಪ್ರಜೆಗಳ ಅಧಿಕಾರವನ್ನು ಕಸಿದುಕೊಳ್ಳುವ ಪ್ರಯತ್ನದ ಅಂಗವಾಗಿ ತಮ್ಮ ಕಾಲಾಳುಗಳ ಮೂಲಕ ಈ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಇದು ಖಂಡನೀಯ, ಆದ್ದರಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ದೇಶದ ಹಿತಬಯಸುವ ಪ್ರಜಾಸತ್ತೆಯ ಪರ ನಾಗರಿಕರು ಮತ್ತು ಸಂಘಟನೆಗಳು ಒಂದಾಗಿ ಹೋರಾಡುವ ಮೂಲಕ ದೇಶದ ಸಂವಿಧಾನದ ಆಶಯಗಳನ್ನು ರಕ್ಷಿಸಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...