Homeಮುಖಪುಟಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಋತುರಾಜ್‌ ನೇಮಕ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಋತುರಾಜ್‌ ನೇಮಕ

- Advertisement -
- Advertisement -

ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಋತುರಾಜ್ ಅವಸ್ಥಿ ನೇಮಕವಾಗಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಅವರನ್ನು ಕರ್ನಾಟಕಕ್ಕೆ ವರ್ಗಾಯಿಸಿ, ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

1960ರಲ್ಲಿ ಜನಿಸಿರುವ ಋತುರಾಜ್‌ ಅವರು, ಲಖನೌ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದು, ನ್ಯಾಯಾಂಗದಲ್ಲಿ ಸುದೀರ್ಘ ಸೇವೆ ಮಾಡಿದ್ದಾರೆ. 1987ರಲ್ಲಿ ವಕೀಲ ವೃತ್ತಿ ಆರಂಭಿಸಿ, ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ. 2009ರ ಏಪ್ರಿಲ್‌ 13ರಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠದ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. 2010ರ ಡಿಸೆಂಬರ್ 24ರಂದು ಖಾಯಂ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿರಿ: ನ್ಯಾಯಾಂಗದಲ್ಲಿ ಶೇ. 50 ಮಹಿಳಾ ಮೀಸಲಾತಿಗೆ ಸಿಜೆಐ ಕರೆ

ಏಳು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇಮಕ ಹಾಗೂ ಐದು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲ್ಲಿಸುತ್ತಿದ್ದ ಆರ್.ವಿ. ಮಳಿಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸತೀಶಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಕೊಲಿಜಿಯಂ, ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಶಿಫಾರಸ್ಸು ಮಾಡಿತ್ತು. ನೇಮಕಾತಿ ವಿಳಂಬವೂ ಆಗಿದೆ. ಈ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಆಕ್ಷೇಪಗಳೂ ವ್ಯಕ್ತವಾಗಿವೆ.

12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಕೊಲಿಜಿಯಂ ನೀಡಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ಈ ಹಿಂದೆಯೇ ಆರೋಪಿಸಿವೆ.

ಒಟ್ಟು 68 ನ್ಯಾಯಮೂರ್ತಿಗಳ ನೇಮಕ ಮಾಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕೆಗಳು ವ್ಯಕ್ತವಾಗಿರುವುದು ಈಗಾಗಲೇ ವರದಿಯಾಗಿದೆ. ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ನ್ಯಾಯಾವಾದಿ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲ ಹೆಸರುಗಳಿಗೆ ಕೇಂದ್ರ ಸರ್ಕಾರ ತ್ವರಿತವಾಗಿ ಅನುಮೋದನೆ ನೀಡಿತ್ತು. ಆಗಸ್ಟ್‌ 31ರಂದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ್ದರು. ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿದ್ದು, ಅಪೂತಪೂರ್ವ ಕ್ಷಣವೆಂದೇ ವಿಶ್ಲೇಷಿಸಲಾಗಿತ್ತು.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿತ್ತು. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ಕೊಲಿಂಜಿಯಂ ಶಿಫಾರಸ್ಸು ಮಾಡಿತ್ತು.

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...