Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...