Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...