Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...