Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...