Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...