Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...