Homeಸಿನಿಮಾಕ್ರೀಡೆಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

- Advertisement -
- Advertisement -

 

 

| ಅಂತಃಕರಣ |

ಅಸ್ಸಾಮ್‍ನ ಆಲ್‍ರೌಂಡರ್ ಆಗಿರುವ ರಿಯಾನ್ ಪರಾಗ್‍ರ ಹೆಸರು ಐಪಿಎಲ್‍ಗೂ ಮೊದಲು ಕ್ರಿಕೆಟ್ ಜಗತ್ತಿಗೆ ಒಂದು ರೀತಿ ಅಪರಿಚಿತವೇ ಆಗಿತ್ತು. 2018ರ ವಿಶ್ವಕಪ್ ಗೆದ್ದಿದ್ದ ತಂಡದ ಭಾಗವಾಗಿ ರಿಯಾನ್‍ರವರಿದ್ದರೂ ಸಹ ಗಾಯದ ಕಾರಣ ಬೆಂಚ್ ಬಿಸಿ ಮಾಡುತ್ತಲೇ ಕಾಲ ಕಳೆದರು. ಅಸ್ಸಾಂಪರ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಕಾರಣ ರಾಜಸ್ಥಾನರಾಯಲ್ಸ್ ತಂಡ ಇವರನ್ನು ಈ ಬಾರಿಯ ಹರಾಜಿನಲ್ಲಿ ಅವರ ಮೂಲಬೆಲೆ 20ಲಕ್ಷ ನೀಡಿ ಖರೀದಿಸಿತು. ರಾಜಸ್ಥಾನ ತಂಡದ ಪರವೂ ಸಹ ಮೊದಲ ಕೆಲವು ಪಂದ್ಯಗಳಲ್ಲಿ ಅವರಿಗೆ ಆಡಲು ಅವಕಾಶ ಸಿಗಲಿಲ್ಲ.

ತಂಡದ ಆರನೇ ಪಂದ್ಯದಲ್ಲಿ ರಿಯಾನ್ ಪರಾಗ್ ಫಾರ್ಮ್ ಕಳೆದುಕೊಂಡಿದ್ದ ಕೃಷ್ಣಪ್ಪಗೌತಮ್‍ರವರ ಬದಲಿಗೆ ಆಡಲು ತಂಡದ ಪ್ಲೇಯಿಂಗ್ 11ನಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಚೆನ್ನೈಸೂಪರ್‍ಕಿಂಗ್ಸ್ ಎದುರಿನ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡದ ಪರ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ರಿಯಾನ್ ಪರಾಗ್ ಎರಡು ಬೌಂಡರಿಗಳ ಮೂಲಕ 16 ರನ್‍ಗಳಿಸಿ ಶಾರ್ದೂಲ್ ಠಾಕೂರ್‍ರ ಎಸೆತದಲ್ಲಿ ಧೋನಿಯವರಿಗೆ ಕ್ಯಾಚಿತ್ತು ಔಟಾದರು. ವಿಶೇಷವೇನೆಂದರೆ 19 ವರ್ಷಗಳ ಮುಂಚೆ ರಿಯಾನ್ ಪರಾಗ್‍ರ ತಂದೆ ಪರಾಗ್‍ದಾಸ್‍ಕೂಡ ರಣಜಿ ಪಂದ್ಯವೊಂದರಲ್ಲಿ ಧೋನಿಯವರಿಂದ ಸ್ಟಂಪ್ಡ್ ಆಗಿ ಔಟಾಗಿದ್ದರು! ಹೌದು ! 1999-2000ರ ರಣಜಿ ಸೀಸನ್‍ನ ಬಿಹಾರ್ ಹಾಗೂ ಅಸ್ಸಾಮ್ ನಡುವಿನ ಪಂದ್ಯದಲ್ಲಿ ಪರಾಗ್‍ದಾಸ್‍ರನ್ನು ಧೋನಿ ಸ್ಟಂಪ್ಡ್ ಮಾಡಿದ್ದರು. 19 ವರ್ಷಗಳ ನಂತರ ಅವರ ಮಗ ರಿಯಾನ್ ಪರಾಗ್ ಸಹ ಧೋನಿಗೆ ಕ್ಯಾಚಿತ್ತು ಔಟಾಗಿದ್ದು ಒಂದು ಅಚ್ಚರಿಯೇ ಸರಿ.

ಆ ಪಂದ್ಯದಲ್ಲಿ ಓವರ್ ಬೌಲ್ ಮಾಡಿ ಪರಾಗ್ ಕೇವಲ 24 ರನ್ ಬಿಟ್ಟುಕೊಟ್ಟರು. ನಂತರದ ಎರಡು ಪಂದ್ಯಗಳಲ್ಲಿ ಪರಾಗ್‍ರನ್ನು ರಾಜಸ್ಥಾನ ತಂಡ ಆಡಿಸಲಿಲ್ಲ. ಅವರ ಬದಲಿಗೆ ಕ್ರಮವಾಗಿ ಕರ್ನಾಟಕದ ಗೌತಮ್ ಹಾಗೂ ಬಿನ್ನಿ ಒಂದೊಂದು ಪಂದ್ಯದಲ್ಲಿ ಆಡಿದರು. ಎರಡು ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯದಲ್ಲಿ ಪರಾಗ್ ವಾಪಸಾತಿ ಮಾಡಿದರು. ಆ ಪಂದ್ಯದಲ್ಲಿ ಅವರು ಒಂದು ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 162ರ ಮೊತ್ತವನ್ನು ಬೆನ್ನತ್ತಿದ್ದ ರಾಜಸ್ಥಾನ 77ಕ್ಕೆ ಮೂರು ಜನ ಟಾಪ್‍ಆರ್ಡರ್ ಬ್ಯಾಟ್ಸ್‍ಮನ್‍ಗಳನ್ನು ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿತ್ತು. ಆಗ ಕ್ರೀಸ್‍ಗೆ ಬಂದ ಪರಾಗ್ ನಾಯಕ ಸ್ಮಿತ್‍ರೊಂದಿಗೆ ಒಂದು ಅತ್ಯುತ್ತಮ ಜೊತೆಯಾಟವಾಡಿದರು. ಸ್ಮಿತ್ ಹಾಗೂ ಪರಾಗ್ ಆಡಿದ 70 ರನ್‍ಗಳ ಜೊತೆಯಾಟದಲ್ಲಿ ಪರಾಗ್‍ರದ್ದೇ ಸಿಂಹಪಾಲು! ತಮ್ಮ ಎರಡನೇ ಐಪಿಎಲ್ ಇನ್ನಿಂಗ್ಸ್‍ನಲ್ಲಿಯೇ ಮುಂಬೈ ಬೌಲರ್‍ಗಳನ್ನು ಬೆಚ್ಚಿಬೀಳಿಸಿದರು. 29 ಎಸೆತಗಳಲ್ಲಿ 43ರನ್ ಗಳಿಸಿ ಪರಾಗ್ ತಂಡವನ್ನು ಗೆಲುವಿನ ಗಡಿಯವರೆಗೆ ತಂದು ಔಟಾದರು! ಅದರ ಮೂಲಕ ಐಪಿಎಲ್‍ನ ಅತ್ಯಂತ ಕಿರಿಯ ಅರ್ಧಶತಕಧಾರಿಯಾಗುವ ಅವಕಾಶ ತಪ್ಪಿಸಿಕೊಂಡರು. ಪರಾಗ್‍ರ ಸಾಮಥ್ರ್ಯಕ್ಕೆ ಈ ಇನ್ನಿಂಗ್ಸ್ ಒಂದು ಕನ್ನಡಿಯಾಗಿತ್ತು ಅಷ್ಟೇ !ಮುಂದಿನ ಪಂದ್ಯದಲ್ಲಿ ಕೊನೆಗೆ ಬ್ಯಾಟಿಂಗ್‍ಗೆ ಬಂದ ಪರಾಗ್ ಒಂದು ಬೌಂಡರಿ ಹೊಡೆದು ಒಂದು ಉತ್ತಮ ಅಂತ್ಯಕೊಟ್ಟರು.

ಇಲ್ಲಿಯವರೆಗಿನ ಅವರ ಅತ್ಯುತ್ತಮ ಇನ್ನಿಂಗ್ಸ್ ಬಂದಿದ್ದು ನಂತರದ ಪಂದ್ಯದಲ್ಲಿ. ಕೊಲ್ಕತ್ತಾ ನೈಟ್‍ರೈಡರ್ಸ್ ತಂಡ ಮೊದಲು ಬ್ಯಾಟ್ ನಾಯಕ ಕಾರ್ತಿಕ್‍ರ ಅತ್ಯುತ್ತಮ ಆಟದ ಬಲದಿಂದ 175 ರನ್ ಗಳಿಸಿತ್ತು. ಅದಕ್ಕೆ ಉತ್ತರವಾಗಿ ರಾಜಸ್ಥಾನ ಸಹ ಉತ್ತಮ ಆರಂಭ ಹೊಂದಿತು. ರಹಾನೆ ಹಾಗೂ ಸ್ಯಾಮ್ಸನ್ 53 ರನ್‍ಗಳ ಬುನಾದಿಯನ್ನು ರಾಜಸ್ಥಾನಕ್ಕೆ ಹಾಕಿಕೊಟ್ಟರು. ಆದರೆ ನಂತರದ 7ಓವರ್‍ಗಳಲ್ಲಿ ರನ್‍ರೇಟ್ ಕೂಡ ಕಡಿಮೆಯಾಗಿ ರಾಜಸ್ಥಾನ 5ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ ಕಷ್ಟವೆನಿಸುತ್ತಿದ್ದ ಚೇಸ್‍ಅನ್ನು ರಿಯಾನ್ ಪರಾಗ್ ಸುಲಭ ಮಾಡಿದರು. ಗೋಪಾಲ್ ಹಾಗೂ ಆರ್ಚರ್‍ರೊಂದಿಗೆ ಜೊತೆಯಾಟಗಳನ್ನು ಮಾಡಿ ಪರಾಗ್ 19ನೇ ಓವರ್‍ನ 5ನೇ ಎಸೆತದಲ್ಲಿ ಹಿಟ್ ವಿಕೆಟ್ ಆಗಿ ಔಟಾದರು. ಈ ಬಾರಿಯೂ ಸಹ ಕೇವಲ 3 ರನ್‍ಗಳಿಂದ ಅರ್ಧಶತಕ ತಪ್ಪಿಸಿಕೊಂಡರು. 31ಎಸೆತಗಳಲ್ಲಿ 47 ರನ್‍ಗಳಿಸಿದ ಪರಾಗ್ ರಾಜಸ್ಥಾನದ ಪಾಲಿಗೆ ಹೀರೋ ಆದರು. ಕೊನೆಯ ಓವರ್‍ನಲ್ಲಿ ಆರ್ಚರ್ ತಂಡವನ್ನು ಗೆಲ್ಲಿಸಿದರು.

ಸಾರಾಂಶದ ಮಾತೆಂದರೆ ರಿಯಾನ್ ಪರಾಗ್ ಭಾರತೀಯ ಕ್ರಿಕೆಟ್‍ನ ಸದ್ಯದ ಅತ್ಯುತ್ತಮ ಉದಯೋನ್ಮುಖ ಆಟಗಾರರಲ್ಲಿ ಒಬ್ಬರು ಎನ್ನುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...