Homeಸಿನಿಮಾಕ್ರೀಡೆಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

- Advertisement -
- Advertisement -

 

 

| ಅಂತಃಕರಣ |

ಅಸ್ಸಾಮ್‍ನ ಆಲ್‍ರೌಂಡರ್ ಆಗಿರುವ ರಿಯಾನ್ ಪರಾಗ್‍ರ ಹೆಸರು ಐಪಿಎಲ್‍ಗೂ ಮೊದಲು ಕ್ರಿಕೆಟ್ ಜಗತ್ತಿಗೆ ಒಂದು ರೀತಿ ಅಪರಿಚಿತವೇ ಆಗಿತ್ತು. 2018ರ ವಿಶ್ವಕಪ್ ಗೆದ್ದಿದ್ದ ತಂಡದ ಭಾಗವಾಗಿ ರಿಯಾನ್‍ರವರಿದ್ದರೂ ಸಹ ಗಾಯದ ಕಾರಣ ಬೆಂಚ್ ಬಿಸಿ ಮಾಡುತ್ತಲೇ ಕಾಲ ಕಳೆದರು. ಅಸ್ಸಾಂಪರ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಕಾರಣ ರಾಜಸ್ಥಾನರಾಯಲ್ಸ್ ತಂಡ ಇವರನ್ನು ಈ ಬಾರಿಯ ಹರಾಜಿನಲ್ಲಿ ಅವರ ಮೂಲಬೆಲೆ 20ಲಕ್ಷ ನೀಡಿ ಖರೀದಿಸಿತು. ರಾಜಸ್ಥಾನ ತಂಡದ ಪರವೂ ಸಹ ಮೊದಲ ಕೆಲವು ಪಂದ್ಯಗಳಲ್ಲಿ ಅವರಿಗೆ ಆಡಲು ಅವಕಾಶ ಸಿಗಲಿಲ್ಲ.

ತಂಡದ ಆರನೇ ಪಂದ್ಯದಲ್ಲಿ ರಿಯಾನ್ ಪರಾಗ್ ಫಾರ್ಮ್ ಕಳೆದುಕೊಂಡಿದ್ದ ಕೃಷ್ಣಪ್ಪಗೌತಮ್‍ರವರ ಬದಲಿಗೆ ಆಡಲು ತಂಡದ ಪ್ಲೇಯಿಂಗ್ 11ನಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಚೆನ್ನೈಸೂಪರ್‍ಕಿಂಗ್ಸ್ ಎದುರಿನ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡದ ಪರ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ರಿಯಾನ್ ಪರಾಗ್ ಎರಡು ಬೌಂಡರಿಗಳ ಮೂಲಕ 16 ರನ್‍ಗಳಿಸಿ ಶಾರ್ದೂಲ್ ಠಾಕೂರ್‍ರ ಎಸೆತದಲ್ಲಿ ಧೋನಿಯವರಿಗೆ ಕ್ಯಾಚಿತ್ತು ಔಟಾದರು. ವಿಶೇಷವೇನೆಂದರೆ 19 ವರ್ಷಗಳ ಮುಂಚೆ ರಿಯಾನ್ ಪರಾಗ್‍ರ ತಂದೆ ಪರಾಗ್‍ದಾಸ್‍ಕೂಡ ರಣಜಿ ಪಂದ್ಯವೊಂದರಲ್ಲಿ ಧೋನಿಯವರಿಂದ ಸ್ಟಂಪ್ಡ್ ಆಗಿ ಔಟಾಗಿದ್ದರು! ಹೌದು ! 1999-2000ರ ರಣಜಿ ಸೀಸನ್‍ನ ಬಿಹಾರ್ ಹಾಗೂ ಅಸ್ಸಾಮ್ ನಡುವಿನ ಪಂದ್ಯದಲ್ಲಿ ಪರಾಗ್‍ದಾಸ್‍ರನ್ನು ಧೋನಿ ಸ್ಟಂಪ್ಡ್ ಮಾಡಿದ್ದರು. 19 ವರ್ಷಗಳ ನಂತರ ಅವರ ಮಗ ರಿಯಾನ್ ಪರಾಗ್ ಸಹ ಧೋನಿಗೆ ಕ್ಯಾಚಿತ್ತು ಔಟಾಗಿದ್ದು ಒಂದು ಅಚ್ಚರಿಯೇ ಸರಿ.

ಆ ಪಂದ್ಯದಲ್ಲಿ ಓವರ್ ಬೌಲ್ ಮಾಡಿ ಪರಾಗ್ ಕೇವಲ 24 ರನ್ ಬಿಟ್ಟುಕೊಟ್ಟರು. ನಂತರದ ಎರಡು ಪಂದ್ಯಗಳಲ್ಲಿ ಪರಾಗ್‍ರನ್ನು ರಾಜಸ್ಥಾನ ತಂಡ ಆಡಿಸಲಿಲ್ಲ. ಅವರ ಬದಲಿಗೆ ಕ್ರಮವಾಗಿ ಕರ್ನಾಟಕದ ಗೌತಮ್ ಹಾಗೂ ಬಿನ್ನಿ ಒಂದೊಂದು ಪಂದ್ಯದಲ್ಲಿ ಆಡಿದರು. ಎರಡು ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯದಲ್ಲಿ ಪರಾಗ್ ವಾಪಸಾತಿ ಮಾಡಿದರು. ಆ ಪಂದ್ಯದಲ್ಲಿ ಅವರು ಒಂದು ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 162ರ ಮೊತ್ತವನ್ನು ಬೆನ್ನತ್ತಿದ್ದ ರಾಜಸ್ಥಾನ 77ಕ್ಕೆ ಮೂರು ಜನ ಟಾಪ್‍ಆರ್ಡರ್ ಬ್ಯಾಟ್ಸ್‍ಮನ್‍ಗಳನ್ನು ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿತ್ತು. ಆಗ ಕ್ರೀಸ್‍ಗೆ ಬಂದ ಪರಾಗ್ ನಾಯಕ ಸ್ಮಿತ್‍ರೊಂದಿಗೆ ಒಂದು ಅತ್ಯುತ್ತಮ ಜೊತೆಯಾಟವಾಡಿದರು. ಸ್ಮಿತ್ ಹಾಗೂ ಪರಾಗ್ ಆಡಿದ 70 ರನ್‍ಗಳ ಜೊತೆಯಾಟದಲ್ಲಿ ಪರಾಗ್‍ರದ್ದೇ ಸಿಂಹಪಾಲು! ತಮ್ಮ ಎರಡನೇ ಐಪಿಎಲ್ ಇನ್ನಿಂಗ್ಸ್‍ನಲ್ಲಿಯೇ ಮುಂಬೈ ಬೌಲರ್‍ಗಳನ್ನು ಬೆಚ್ಚಿಬೀಳಿಸಿದರು. 29 ಎಸೆತಗಳಲ್ಲಿ 43ರನ್ ಗಳಿಸಿ ಪರಾಗ್ ತಂಡವನ್ನು ಗೆಲುವಿನ ಗಡಿಯವರೆಗೆ ತಂದು ಔಟಾದರು! ಅದರ ಮೂಲಕ ಐಪಿಎಲ್‍ನ ಅತ್ಯಂತ ಕಿರಿಯ ಅರ್ಧಶತಕಧಾರಿಯಾಗುವ ಅವಕಾಶ ತಪ್ಪಿಸಿಕೊಂಡರು. ಪರಾಗ್‍ರ ಸಾಮಥ್ರ್ಯಕ್ಕೆ ಈ ಇನ್ನಿಂಗ್ಸ್ ಒಂದು ಕನ್ನಡಿಯಾಗಿತ್ತು ಅಷ್ಟೇ !ಮುಂದಿನ ಪಂದ್ಯದಲ್ಲಿ ಕೊನೆಗೆ ಬ್ಯಾಟಿಂಗ್‍ಗೆ ಬಂದ ಪರಾಗ್ ಒಂದು ಬೌಂಡರಿ ಹೊಡೆದು ಒಂದು ಉತ್ತಮ ಅಂತ್ಯಕೊಟ್ಟರು.

ಇಲ್ಲಿಯವರೆಗಿನ ಅವರ ಅತ್ಯುತ್ತಮ ಇನ್ನಿಂಗ್ಸ್ ಬಂದಿದ್ದು ನಂತರದ ಪಂದ್ಯದಲ್ಲಿ. ಕೊಲ್ಕತ್ತಾ ನೈಟ್‍ರೈಡರ್ಸ್ ತಂಡ ಮೊದಲು ಬ್ಯಾಟ್ ನಾಯಕ ಕಾರ್ತಿಕ್‍ರ ಅತ್ಯುತ್ತಮ ಆಟದ ಬಲದಿಂದ 175 ರನ್ ಗಳಿಸಿತ್ತು. ಅದಕ್ಕೆ ಉತ್ತರವಾಗಿ ರಾಜಸ್ಥಾನ ಸಹ ಉತ್ತಮ ಆರಂಭ ಹೊಂದಿತು. ರಹಾನೆ ಹಾಗೂ ಸ್ಯಾಮ್ಸನ್ 53 ರನ್‍ಗಳ ಬುನಾದಿಯನ್ನು ರಾಜಸ್ಥಾನಕ್ಕೆ ಹಾಕಿಕೊಟ್ಟರು. ಆದರೆ ನಂತರದ 7ಓವರ್‍ಗಳಲ್ಲಿ ರನ್‍ರೇಟ್ ಕೂಡ ಕಡಿಮೆಯಾಗಿ ರಾಜಸ್ಥಾನ 5ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ ಕಷ್ಟವೆನಿಸುತ್ತಿದ್ದ ಚೇಸ್‍ಅನ್ನು ರಿಯಾನ್ ಪರಾಗ್ ಸುಲಭ ಮಾಡಿದರು. ಗೋಪಾಲ್ ಹಾಗೂ ಆರ್ಚರ್‍ರೊಂದಿಗೆ ಜೊತೆಯಾಟಗಳನ್ನು ಮಾಡಿ ಪರಾಗ್ 19ನೇ ಓವರ್‍ನ 5ನೇ ಎಸೆತದಲ್ಲಿ ಹಿಟ್ ವಿಕೆಟ್ ಆಗಿ ಔಟಾದರು. ಈ ಬಾರಿಯೂ ಸಹ ಕೇವಲ 3 ರನ್‍ಗಳಿಂದ ಅರ್ಧಶತಕ ತಪ್ಪಿಸಿಕೊಂಡರು. 31ಎಸೆತಗಳಲ್ಲಿ 47 ರನ್‍ಗಳಿಸಿದ ಪರಾಗ್ ರಾಜಸ್ಥಾನದ ಪಾಲಿಗೆ ಹೀರೋ ಆದರು. ಕೊನೆಯ ಓವರ್‍ನಲ್ಲಿ ಆರ್ಚರ್ ತಂಡವನ್ನು ಗೆಲ್ಲಿಸಿದರು.

ಸಾರಾಂಶದ ಮಾತೆಂದರೆ ರಿಯಾನ್ ಪರಾಗ್ ಭಾರತೀಯ ಕ್ರಿಕೆಟ್‍ನ ಸದ್ಯದ ಅತ್ಯುತ್ತಮ ಉದಯೋನ್ಮುಖ ಆಟಗಾರರಲ್ಲಿ ಒಬ್ಬರು ಎನ್ನುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...