Homeಸಿನಿಮಾಕ್ರೀಡೆಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

- Advertisement -
- Advertisement -

 

 

| ಅಂತಃಕರಣ |

ಅಸ್ಸಾಮ್‍ನ ಆಲ್‍ರೌಂಡರ್ ಆಗಿರುವ ರಿಯಾನ್ ಪರಾಗ್‍ರ ಹೆಸರು ಐಪಿಎಲ್‍ಗೂ ಮೊದಲು ಕ್ರಿಕೆಟ್ ಜಗತ್ತಿಗೆ ಒಂದು ರೀತಿ ಅಪರಿಚಿತವೇ ಆಗಿತ್ತು. 2018ರ ವಿಶ್ವಕಪ್ ಗೆದ್ದಿದ್ದ ತಂಡದ ಭಾಗವಾಗಿ ರಿಯಾನ್‍ರವರಿದ್ದರೂ ಸಹ ಗಾಯದ ಕಾರಣ ಬೆಂಚ್ ಬಿಸಿ ಮಾಡುತ್ತಲೇ ಕಾಲ ಕಳೆದರು. ಅಸ್ಸಾಂಪರ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಕಾರಣ ರಾಜಸ್ಥಾನರಾಯಲ್ಸ್ ತಂಡ ಇವರನ್ನು ಈ ಬಾರಿಯ ಹರಾಜಿನಲ್ಲಿ ಅವರ ಮೂಲಬೆಲೆ 20ಲಕ್ಷ ನೀಡಿ ಖರೀದಿಸಿತು. ರಾಜಸ್ಥಾನ ತಂಡದ ಪರವೂ ಸಹ ಮೊದಲ ಕೆಲವು ಪಂದ್ಯಗಳಲ್ಲಿ ಅವರಿಗೆ ಆಡಲು ಅವಕಾಶ ಸಿಗಲಿಲ್ಲ.

ತಂಡದ ಆರನೇ ಪಂದ್ಯದಲ್ಲಿ ರಿಯಾನ್ ಪರಾಗ್ ಫಾರ್ಮ್ ಕಳೆದುಕೊಂಡಿದ್ದ ಕೃಷ್ಣಪ್ಪಗೌತಮ್‍ರವರ ಬದಲಿಗೆ ಆಡಲು ತಂಡದ ಪ್ಲೇಯಿಂಗ್ 11ನಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಚೆನ್ನೈಸೂಪರ್‍ಕಿಂಗ್ಸ್ ಎದುರಿನ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡದ ಪರ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ರಿಯಾನ್ ಪರಾಗ್ ಎರಡು ಬೌಂಡರಿಗಳ ಮೂಲಕ 16 ರನ್‍ಗಳಿಸಿ ಶಾರ್ದೂಲ್ ಠಾಕೂರ್‍ರ ಎಸೆತದಲ್ಲಿ ಧೋನಿಯವರಿಗೆ ಕ್ಯಾಚಿತ್ತು ಔಟಾದರು. ವಿಶೇಷವೇನೆಂದರೆ 19 ವರ್ಷಗಳ ಮುಂಚೆ ರಿಯಾನ್ ಪರಾಗ್‍ರ ತಂದೆ ಪರಾಗ್‍ದಾಸ್‍ಕೂಡ ರಣಜಿ ಪಂದ್ಯವೊಂದರಲ್ಲಿ ಧೋನಿಯವರಿಂದ ಸ್ಟಂಪ್ಡ್ ಆಗಿ ಔಟಾಗಿದ್ದರು! ಹೌದು ! 1999-2000ರ ರಣಜಿ ಸೀಸನ್‍ನ ಬಿಹಾರ್ ಹಾಗೂ ಅಸ್ಸಾಮ್ ನಡುವಿನ ಪಂದ್ಯದಲ್ಲಿ ಪರಾಗ್‍ದಾಸ್‍ರನ್ನು ಧೋನಿ ಸ್ಟಂಪ್ಡ್ ಮಾಡಿದ್ದರು. 19 ವರ್ಷಗಳ ನಂತರ ಅವರ ಮಗ ರಿಯಾನ್ ಪರಾಗ್ ಸಹ ಧೋನಿಗೆ ಕ್ಯಾಚಿತ್ತು ಔಟಾಗಿದ್ದು ಒಂದು ಅಚ್ಚರಿಯೇ ಸರಿ.

ಆ ಪಂದ್ಯದಲ್ಲಿ ಓವರ್ ಬೌಲ್ ಮಾಡಿ ಪರಾಗ್ ಕೇವಲ 24 ರನ್ ಬಿಟ್ಟುಕೊಟ್ಟರು. ನಂತರದ ಎರಡು ಪಂದ್ಯಗಳಲ್ಲಿ ಪರಾಗ್‍ರನ್ನು ರಾಜಸ್ಥಾನ ತಂಡ ಆಡಿಸಲಿಲ್ಲ. ಅವರ ಬದಲಿಗೆ ಕ್ರಮವಾಗಿ ಕರ್ನಾಟಕದ ಗೌತಮ್ ಹಾಗೂ ಬಿನ್ನಿ ಒಂದೊಂದು ಪಂದ್ಯದಲ್ಲಿ ಆಡಿದರು. ಎರಡು ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯದಲ್ಲಿ ಪರಾಗ್ ವಾಪಸಾತಿ ಮಾಡಿದರು. ಆ ಪಂದ್ಯದಲ್ಲಿ ಅವರು ಒಂದು ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 162ರ ಮೊತ್ತವನ್ನು ಬೆನ್ನತ್ತಿದ್ದ ರಾಜಸ್ಥಾನ 77ಕ್ಕೆ ಮೂರು ಜನ ಟಾಪ್‍ಆರ್ಡರ್ ಬ್ಯಾಟ್ಸ್‍ಮನ್‍ಗಳನ್ನು ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿತ್ತು. ಆಗ ಕ್ರೀಸ್‍ಗೆ ಬಂದ ಪರಾಗ್ ನಾಯಕ ಸ್ಮಿತ್‍ರೊಂದಿಗೆ ಒಂದು ಅತ್ಯುತ್ತಮ ಜೊತೆಯಾಟವಾಡಿದರು. ಸ್ಮಿತ್ ಹಾಗೂ ಪರಾಗ್ ಆಡಿದ 70 ರನ್‍ಗಳ ಜೊತೆಯಾಟದಲ್ಲಿ ಪರಾಗ್‍ರದ್ದೇ ಸಿಂಹಪಾಲು! ತಮ್ಮ ಎರಡನೇ ಐಪಿಎಲ್ ಇನ್ನಿಂಗ್ಸ್‍ನಲ್ಲಿಯೇ ಮುಂಬೈ ಬೌಲರ್‍ಗಳನ್ನು ಬೆಚ್ಚಿಬೀಳಿಸಿದರು. 29 ಎಸೆತಗಳಲ್ಲಿ 43ರನ್ ಗಳಿಸಿ ಪರಾಗ್ ತಂಡವನ್ನು ಗೆಲುವಿನ ಗಡಿಯವರೆಗೆ ತಂದು ಔಟಾದರು! ಅದರ ಮೂಲಕ ಐಪಿಎಲ್‍ನ ಅತ್ಯಂತ ಕಿರಿಯ ಅರ್ಧಶತಕಧಾರಿಯಾಗುವ ಅವಕಾಶ ತಪ್ಪಿಸಿಕೊಂಡರು. ಪರಾಗ್‍ರ ಸಾಮಥ್ರ್ಯಕ್ಕೆ ಈ ಇನ್ನಿಂಗ್ಸ್ ಒಂದು ಕನ್ನಡಿಯಾಗಿತ್ತು ಅಷ್ಟೇ !ಮುಂದಿನ ಪಂದ್ಯದಲ್ಲಿ ಕೊನೆಗೆ ಬ್ಯಾಟಿಂಗ್‍ಗೆ ಬಂದ ಪರಾಗ್ ಒಂದು ಬೌಂಡರಿ ಹೊಡೆದು ಒಂದು ಉತ್ತಮ ಅಂತ್ಯಕೊಟ್ಟರು.

ಇಲ್ಲಿಯವರೆಗಿನ ಅವರ ಅತ್ಯುತ್ತಮ ಇನ್ನಿಂಗ್ಸ್ ಬಂದಿದ್ದು ನಂತರದ ಪಂದ್ಯದಲ್ಲಿ. ಕೊಲ್ಕತ್ತಾ ನೈಟ್‍ರೈಡರ್ಸ್ ತಂಡ ಮೊದಲು ಬ್ಯಾಟ್ ನಾಯಕ ಕಾರ್ತಿಕ್‍ರ ಅತ್ಯುತ್ತಮ ಆಟದ ಬಲದಿಂದ 175 ರನ್ ಗಳಿಸಿತ್ತು. ಅದಕ್ಕೆ ಉತ್ತರವಾಗಿ ರಾಜಸ್ಥಾನ ಸಹ ಉತ್ತಮ ಆರಂಭ ಹೊಂದಿತು. ರಹಾನೆ ಹಾಗೂ ಸ್ಯಾಮ್ಸನ್ 53 ರನ್‍ಗಳ ಬುನಾದಿಯನ್ನು ರಾಜಸ್ಥಾನಕ್ಕೆ ಹಾಕಿಕೊಟ್ಟರು. ಆದರೆ ನಂತರದ 7ಓವರ್‍ಗಳಲ್ಲಿ ರನ್‍ರೇಟ್ ಕೂಡ ಕಡಿಮೆಯಾಗಿ ರಾಜಸ್ಥಾನ 5ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ ಕಷ್ಟವೆನಿಸುತ್ತಿದ್ದ ಚೇಸ್‍ಅನ್ನು ರಿಯಾನ್ ಪರಾಗ್ ಸುಲಭ ಮಾಡಿದರು. ಗೋಪಾಲ್ ಹಾಗೂ ಆರ್ಚರ್‍ರೊಂದಿಗೆ ಜೊತೆಯಾಟಗಳನ್ನು ಮಾಡಿ ಪರಾಗ್ 19ನೇ ಓವರ್‍ನ 5ನೇ ಎಸೆತದಲ್ಲಿ ಹಿಟ್ ವಿಕೆಟ್ ಆಗಿ ಔಟಾದರು. ಈ ಬಾರಿಯೂ ಸಹ ಕೇವಲ 3 ರನ್‍ಗಳಿಂದ ಅರ್ಧಶತಕ ತಪ್ಪಿಸಿಕೊಂಡರು. 31ಎಸೆತಗಳಲ್ಲಿ 47 ರನ್‍ಗಳಿಸಿದ ಪರಾಗ್ ರಾಜಸ್ಥಾನದ ಪಾಲಿಗೆ ಹೀರೋ ಆದರು. ಕೊನೆಯ ಓವರ್‍ನಲ್ಲಿ ಆರ್ಚರ್ ತಂಡವನ್ನು ಗೆಲ್ಲಿಸಿದರು.

ಸಾರಾಂಶದ ಮಾತೆಂದರೆ ರಿಯಾನ್ ಪರಾಗ್ ಭಾರತೀಯ ಕ್ರಿಕೆಟ್‍ನ ಸದ್ಯದ ಅತ್ಯುತ್ತಮ ಉದಯೋನ್ಮುಖ ಆಟಗಾರರಲ್ಲಿ ಒಬ್ಬರು ಎನ್ನುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...