Homeಸಿನಿಮಾಕ್ರೀಡೆಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

- Advertisement -
- Advertisement -

 

 

| ಅಂತಃಕರಣ |

ಅಸ್ಸಾಮ್‍ನ ಆಲ್‍ರೌಂಡರ್ ಆಗಿರುವ ರಿಯಾನ್ ಪರಾಗ್‍ರ ಹೆಸರು ಐಪಿಎಲ್‍ಗೂ ಮೊದಲು ಕ್ರಿಕೆಟ್ ಜಗತ್ತಿಗೆ ಒಂದು ರೀತಿ ಅಪರಿಚಿತವೇ ಆಗಿತ್ತು. 2018ರ ವಿಶ್ವಕಪ್ ಗೆದ್ದಿದ್ದ ತಂಡದ ಭಾಗವಾಗಿ ರಿಯಾನ್‍ರವರಿದ್ದರೂ ಸಹ ಗಾಯದ ಕಾರಣ ಬೆಂಚ್ ಬಿಸಿ ಮಾಡುತ್ತಲೇ ಕಾಲ ಕಳೆದರು. ಅಸ್ಸಾಂಪರ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಕಾರಣ ರಾಜಸ್ಥಾನರಾಯಲ್ಸ್ ತಂಡ ಇವರನ್ನು ಈ ಬಾರಿಯ ಹರಾಜಿನಲ್ಲಿ ಅವರ ಮೂಲಬೆಲೆ 20ಲಕ್ಷ ನೀಡಿ ಖರೀದಿಸಿತು. ರಾಜಸ್ಥಾನ ತಂಡದ ಪರವೂ ಸಹ ಮೊದಲ ಕೆಲವು ಪಂದ್ಯಗಳಲ್ಲಿ ಅವರಿಗೆ ಆಡಲು ಅವಕಾಶ ಸಿಗಲಿಲ್ಲ.

ತಂಡದ ಆರನೇ ಪಂದ್ಯದಲ್ಲಿ ರಿಯಾನ್ ಪರಾಗ್ ಫಾರ್ಮ್ ಕಳೆದುಕೊಂಡಿದ್ದ ಕೃಷ್ಣಪ್ಪಗೌತಮ್‍ರವರ ಬದಲಿಗೆ ಆಡಲು ತಂಡದ ಪ್ಲೇಯಿಂಗ್ 11ನಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಚೆನ್ನೈಸೂಪರ್‍ಕಿಂಗ್ಸ್ ಎದುರಿನ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡದ ಪರ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ರಿಯಾನ್ ಪರಾಗ್ ಎರಡು ಬೌಂಡರಿಗಳ ಮೂಲಕ 16 ರನ್‍ಗಳಿಸಿ ಶಾರ್ದೂಲ್ ಠಾಕೂರ್‍ರ ಎಸೆತದಲ್ಲಿ ಧೋನಿಯವರಿಗೆ ಕ್ಯಾಚಿತ್ತು ಔಟಾದರು. ವಿಶೇಷವೇನೆಂದರೆ 19 ವರ್ಷಗಳ ಮುಂಚೆ ರಿಯಾನ್ ಪರಾಗ್‍ರ ತಂದೆ ಪರಾಗ್‍ದಾಸ್‍ಕೂಡ ರಣಜಿ ಪಂದ್ಯವೊಂದರಲ್ಲಿ ಧೋನಿಯವರಿಂದ ಸ್ಟಂಪ್ಡ್ ಆಗಿ ಔಟಾಗಿದ್ದರು! ಹೌದು ! 1999-2000ರ ರಣಜಿ ಸೀಸನ್‍ನ ಬಿಹಾರ್ ಹಾಗೂ ಅಸ್ಸಾಮ್ ನಡುವಿನ ಪಂದ್ಯದಲ್ಲಿ ಪರಾಗ್‍ದಾಸ್‍ರನ್ನು ಧೋನಿ ಸ್ಟಂಪ್ಡ್ ಮಾಡಿದ್ದರು. 19 ವರ್ಷಗಳ ನಂತರ ಅವರ ಮಗ ರಿಯಾನ್ ಪರಾಗ್ ಸಹ ಧೋನಿಗೆ ಕ್ಯಾಚಿತ್ತು ಔಟಾಗಿದ್ದು ಒಂದು ಅಚ್ಚರಿಯೇ ಸರಿ.

ಆ ಪಂದ್ಯದಲ್ಲಿ ಓವರ್ ಬೌಲ್ ಮಾಡಿ ಪರಾಗ್ ಕೇವಲ 24 ರನ್ ಬಿಟ್ಟುಕೊಟ್ಟರು. ನಂತರದ ಎರಡು ಪಂದ್ಯಗಳಲ್ಲಿ ಪರಾಗ್‍ರನ್ನು ರಾಜಸ್ಥಾನ ತಂಡ ಆಡಿಸಲಿಲ್ಲ. ಅವರ ಬದಲಿಗೆ ಕ್ರಮವಾಗಿ ಕರ್ನಾಟಕದ ಗೌತಮ್ ಹಾಗೂ ಬಿನ್ನಿ ಒಂದೊಂದು ಪಂದ್ಯದಲ್ಲಿ ಆಡಿದರು. ಎರಡು ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯದಲ್ಲಿ ಪರಾಗ್ ವಾಪಸಾತಿ ಮಾಡಿದರು. ಆ ಪಂದ್ಯದಲ್ಲಿ ಅವರು ಒಂದು ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 162ರ ಮೊತ್ತವನ್ನು ಬೆನ್ನತ್ತಿದ್ದ ರಾಜಸ್ಥಾನ 77ಕ್ಕೆ ಮೂರು ಜನ ಟಾಪ್‍ಆರ್ಡರ್ ಬ್ಯಾಟ್ಸ್‍ಮನ್‍ಗಳನ್ನು ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿತ್ತು. ಆಗ ಕ್ರೀಸ್‍ಗೆ ಬಂದ ಪರಾಗ್ ನಾಯಕ ಸ್ಮಿತ್‍ರೊಂದಿಗೆ ಒಂದು ಅತ್ಯುತ್ತಮ ಜೊತೆಯಾಟವಾಡಿದರು. ಸ್ಮಿತ್ ಹಾಗೂ ಪರಾಗ್ ಆಡಿದ 70 ರನ್‍ಗಳ ಜೊತೆಯಾಟದಲ್ಲಿ ಪರಾಗ್‍ರದ್ದೇ ಸಿಂಹಪಾಲು! ತಮ್ಮ ಎರಡನೇ ಐಪಿಎಲ್ ಇನ್ನಿಂಗ್ಸ್‍ನಲ್ಲಿಯೇ ಮುಂಬೈ ಬೌಲರ್‍ಗಳನ್ನು ಬೆಚ್ಚಿಬೀಳಿಸಿದರು. 29 ಎಸೆತಗಳಲ್ಲಿ 43ರನ್ ಗಳಿಸಿ ಪರಾಗ್ ತಂಡವನ್ನು ಗೆಲುವಿನ ಗಡಿಯವರೆಗೆ ತಂದು ಔಟಾದರು! ಅದರ ಮೂಲಕ ಐಪಿಎಲ್‍ನ ಅತ್ಯಂತ ಕಿರಿಯ ಅರ್ಧಶತಕಧಾರಿಯಾಗುವ ಅವಕಾಶ ತಪ್ಪಿಸಿಕೊಂಡರು. ಪರಾಗ್‍ರ ಸಾಮಥ್ರ್ಯಕ್ಕೆ ಈ ಇನ್ನಿಂಗ್ಸ್ ಒಂದು ಕನ್ನಡಿಯಾಗಿತ್ತು ಅಷ್ಟೇ !ಮುಂದಿನ ಪಂದ್ಯದಲ್ಲಿ ಕೊನೆಗೆ ಬ್ಯಾಟಿಂಗ್‍ಗೆ ಬಂದ ಪರಾಗ್ ಒಂದು ಬೌಂಡರಿ ಹೊಡೆದು ಒಂದು ಉತ್ತಮ ಅಂತ್ಯಕೊಟ್ಟರು.

ಇಲ್ಲಿಯವರೆಗಿನ ಅವರ ಅತ್ಯುತ್ತಮ ಇನ್ನಿಂಗ್ಸ್ ಬಂದಿದ್ದು ನಂತರದ ಪಂದ್ಯದಲ್ಲಿ. ಕೊಲ್ಕತ್ತಾ ನೈಟ್‍ರೈಡರ್ಸ್ ತಂಡ ಮೊದಲು ಬ್ಯಾಟ್ ನಾಯಕ ಕಾರ್ತಿಕ್‍ರ ಅತ್ಯುತ್ತಮ ಆಟದ ಬಲದಿಂದ 175 ರನ್ ಗಳಿಸಿತ್ತು. ಅದಕ್ಕೆ ಉತ್ತರವಾಗಿ ರಾಜಸ್ಥಾನ ಸಹ ಉತ್ತಮ ಆರಂಭ ಹೊಂದಿತು. ರಹಾನೆ ಹಾಗೂ ಸ್ಯಾಮ್ಸನ್ 53 ರನ್‍ಗಳ ಬುನಾದಿಯನ್ನು ರಾಜಸ್ಥಾನಕ್ಕೆ ಹಾಕಿಕೊಟ್ಟರು. ಆದರೆ ನಂತರದ 7ಓವರ್‍ಗಳಲ್ಲಿ ರನ್‍ರೇಟ್ ಕೂಡ ಕಡಿಮೆಯಾಗಿ ರಾಜಸ್ಥಾನ 5ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ ಕಷ್ಟವೆನಿಸುತ್ತಿದ್ದ ಚೇಸ್‍ಅನ್ನು ರಿಯಾನ್ ಪರಾಗ್ ಸುಲಭ ಮಾಡಿದರು. ಗೋಪಾಲ್ ಹಾಗೂ ಆರ್ಚರ್‍ರೊಂದಿಗೆ ಜೊತೆಯಾಟಗಳನ್ನು ಮಾಡಿ ಪರಾಗ್ 19ನೇ ಓವರ್‍ನ 5ನೇ ಎಸೆತದಲ್ಲಿ ಹಿಟ್ ವಿಕೆಟ್ ಆಗಿ ಔಟಾದರು. ಈ ಬಾರಿಯೂ ಸಹ ಕೇವಲ 3 ರನ್‍ಗಳಿಂದ ಅರ್ಧಶತಕ ತಪ್ಪಿಸಿಕೊಂಡರು. 31ಎಸೆತಗಳಲ್ಲಿ 47 ರನ್‍ಗಳಿಸಿದ ಪರಾಗ್ ರಾಜಸ್ಥಾನದ ಪಾಲಿಗೆ ಹೀರೋ ಆದರು. ಕೊನೆಯ ಓವರ್‍ನಲ್ಲಿ ಆರ್ಚರ್ ತಂಡವನ್ನು ಗೆಲ್ಲಿಸಿದರು.

ಸಾರಾಂಶದ ಮಾತೆಂದರೆ ರಿಯಾನ್ ಪರಾಗ್ ಭಾರತೀಯ ಕ್ರಿಕೆಟ್‍ನ ಸದ್ಯದ ಅತ್ಯುತ್ತಮ ಉದಯೋನ್ಮುಖ ಆಟಗಾರರಲ್ಲಿ ಒಬ್ಬರು ಎನ್ನುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...