Homeಸಿನಿಮಾಕ್ರೀಡೆಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

- Advertisement -
- Advertisement -

 

 

| ಅಂತಃಕರಣ |

ಅಸ್ಸಾಮ್‍ನ ಆಲ್‍ರೌಂಡರ್ ಆಗಿರುವ ರಿಯಾನ್ ಪರಾಗ್‍ರ ಹೆಸರು ಐಪಿಎಲ್‍ಗೂ ಮೊದಲು ಕ್ರಿಕೆಟ್ ಜಗತ್ತಿಗೆ ಒಂದು ರೀತಿ ಅಪರಿಚಿತವೇ ಆಗಿತ್ತು. 2018ರ ವಿಶ್ವಕಪ್ ಗೆದ್ದಿದ್ದ ತಂಡದ ಭಾಗವಾಗಿ ರಿಯಾನ್‍ರವರಿದ್ದರೂ ಸಹ ಗಾಯದ ಕಾರಣ ಬೆಂಚ್ ಬಿಸಿ ಮಾಡುತ್ತಲೇ ಕಾಲ ಕಳೆದರು. ಅಸ್ಸಾಂಪರ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಕಾರಣ ರಾಜಸ್ಥಾನರಾಯಲ್ಸ್ ತಂಡ ಇವರನ್ನು ಈ ಬಾರಿಯ ಹರಾಜಿನಲ್ಲಿ ಅವರ ಮೂಲಬೆಲೆ 20ಲಕ್ಷ ನೀಡಿ ಖರೀದಿಸಿತು. ರಾಜಸ್ಥಾನ ತಂಡದ ಪರವೂ ಸಹ ಮೊದಲ ಕೆಲವು ಪಂದ್ಯಗಳಲ್ಲಿ ಅವರಿಗೆ ಆಡಲು ಅವಕಾಶ ಸಿಗಲಿಲ್ಲ.

ತಂಡದ ಆರನೇ ಪಂದ್ಯದಲ್ಲಿ ರಿಯಾನ್ ಪರಾಗ್ ಫಾರ್ಮ್ ಕಳೆದುಕೊಂಡಿದ್ದ ಕೃಷ್ಣಪ್ಪಗೌತಮ್‍ರವರ ಬದಲಿಗೆ ಆಡಲು ತಂಡದ ಪ್ಲೇಯಿಂಗ್ 11ನಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಚೆನ್ನೈಸೂಪರ್‍ಕಿಂಗ್ಸ್ ಎದುರಿನ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡದ ಪರ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ರಿಯಾನ್ ಪರಾಗ್ ಎರಡು ಬೌಂಡರಿಗಳ ಮೂಲಕ 16 ರನ್‍ಗಳಿಸಿ ಶಾರ್ದೂಲ್ ಠಾಕೂರ್‍ರ ಎಸೆತದಲ್ಲಿ ಧೋನಿಯವರಿಗೆ ಕ್ಯಾಚಿತ್ತು ಔಟಾದರು. ವಿಶೇಷವೇನೆಂದರೆ 19 ವರ್ಷಗಳ ಮುಂಚೆ ರಿಯಾನ್ ಪರಾಗ್‍ರ ತಂದೆ ಪರಾಗ್‍ದಾಸ್‍ಕೂಡ ರಣಜಿ ಪಂದ್ಯವೊಂದರಲ್ಲಿ ಧೋನಿಯವರಿಂದ ಸ್ಟಂಪ್ಡ್ ಆಗಿ ಔಟಾಗಿದ್ದರು! ಹೌದು ! 1999-2000ರ ರಣಜಿ ಸೀಸನ್‍ನ ಬಿಹಾರ್ ಹಾಗೂ ಅಸ್ಸಾಮ್ ನಡುವಿನ ಪಂದ್ಯದಲ್ಲಿ ಪರಾಗ್‍ದಾಸ್‍ರನ್ನು ಧೋನಿ ಸ್ಟಂಪ್ಡ್ ಮಾಡಿದ್ದರು. 19 ವರ್ಷಗಳ ನಂತರ ಅವರ ಮಗ ರಿಯಾನ್ ಪರಾಗ್ ಸಹ ಧೋನಿಗೆ ಕ್ಯಾಚಿತ್ತು ಔಟಾಗಿದ್ದು ಒಂದು ಅಚ್ಚರಿಯೇ ಸರಿ.

ಆ ಪಂದ್ಯದಲ್ಲಿ ಓವರ್ ಬೌಲ್ ಮಾಡಿ ಪರಾಗ್ ಕೇವಲ 24 ರನ್ ಬಿಟ್ಟುಕೊಟ್ಟರು. ನಂತರದ ಎರಡು ಪಂದ್ಯಗಳಲ್ಲಿ ಪರಾಗ್‍ರನ್ನು ರಾಜಸ್ಥಾನ ತಂಡ ಆಡಿಸಲಿಲ್ಲ. ಅವರ ಬದಲಿಗೆ ಕ್ರಮವಾಗಿ ಕರ್ನಾಟಕದ ಗೌತಮ್ ಹಾಗೂ ಬಿನ್ನಿ ಒಂದೊಂದು ಪಂದ್ಯದಲ್ಲಿ ಆಡಿದರು. ಎರಡು ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯದಲ್ಲಿ ಪರಾಗ್ ವಾಪಸಾತಿ ಮಾಡಿದರು. ಆ ಪಂದ್ಯದಲ್ಲಿ ಅವರು ಒಂದು ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 162ರ ಮೊತ್ತವನ್ನು ಬೆನ್ನತ್ತಿದ್ದ ರಾಜಸ್ಥಾನ 77ಕ್ಕೆ ಮೂರು ಜನ ಟಾಪ್‍ಆರ್ಡರ್ ಬ್ಯಾಟ್ಸ್‍ಮನ್‍ಗಳನ್ನು ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿತ್ತು. ಆಗ ಕ್ರೀಸ್‍ಗೆ ಬಂದ ಪರಾಗ್ ನಾಯಕ ಸ್ಮಿತ್‍ರೊಂದಿಗೆ ಒಂದು ಅತ್ಯುತ್ತಮ ಜೊತೆಯಾಟವಾಡಿದರು. ಸ್ಮಿತ್ ಹಾಗೂ ಪರಾಗ್ ಆಡಿದ 70 ರನ್‍ಗಳ ಜೊತೆಯಾಟದಲ್ಲಿ ಪರಾಗ್‍ರದ್ದೇ ಸಿಂಹಪಾಲು! ತಮ್ಮ ಎರಡನೇ ಐಪಿಎಲ್ ಇನ್ನಿಂಗ್ಸ್‍ನಲ್ಲಿಯೇ ಮುಂಬೈ ಬೌಲರ್‍ಗಳನ್ನು ಬೆಚ್ಚಿಬೀಳಿಸಿದರು. 29 ಎಸೆತಗಳಲ್ಲಿ 43ರನ್ ಗಳಿಸಿ ಪರಾಗ್ ತಂಡವನ್ನು ಗೆಲುವಿನ ಗಡಿಯವರೆಗೆ ತಂದು ಔಟಾದರು! ಅದರ ಮೂಲಕ ಐಪಿಎಲ್‍ನ ಅತ್ಯಂತ ಕಿರಿಯ ಅರ್ಧಶತಕಧಾರಿಯಾಗುವ ಅವಕಾಶ ತಪ್ಪಿಸಿಕೊಂಡರು. ಪರಾಗ್‍ರ ಸಾಮಥ್ರ್ಯಕ್ಕೆ ಈ ಇನ್ನಿಂಗ್ಸ್ ಒಂದು ಕನ್ನಡಿಯಾಗಿತ್ತು ಅಷ್ಟೇ !ಮುಂದಿನ ಪಂದ್ಯದಲ್ಲಿ ಕೊನೆಗೆ ಬ್ಯಾಟಿಂಗ್‍ಗೆ ಬಂದ ಪರಾಗ್ ಒಂದು ಬೌಂಡರಿ ಹೊಡೆದು ಒಂದು ಉತ್ತಮ ಅಂತ್ಯಕೊಟ್ಟರು.

ಇಲ್ಲಿಯವರೆಗಿನ ಅವರ ಅತ್ಯುತ್ತಮ ಇನ್ನಿಂಗ್ಸ್ ಬಂದಿದ್ದು ನಂತರದ ಪಂದ್ಯದಲ್ಲಿ. ಕೊಲ್ಕತ್ತಾ ನೈಟ್‍ರೈಡರ್ಸ್ ತಂಡ ಮೊದಲು ಬ್ಯಾಟ್ ನಾಯಕ ಕಾರ್ತಿಕ್‍ರ ಅತ್ಯುತ್ತಮ ಆಟದ ಬಲದಿಂದ 175 ರನ್ ಗಳಿಸಿತ್ತು. ಅದಕ್ಕೆ ಉತ್ತರವಾಗಿ ರಾಜಸ್ಥಾನ ಸಹ ಉತ್ತಮ ಆರಂಭ ಹೊಂದಿತು. ರಹಾನೆ ಹಾಗೂ ಸ್ಯಾಮ್ಸನ್ 53 ರನ್‍ಗಳ ಬುನಾದಿಯನ್ನು ರಾಜಸ್ಥಾನಕ್ಕೆ ಹಾಕಿಕೊಟ್ಟರು. ಆದರೆ ನಂತರದ 7ಓವರ್‍ಗಳಲ್ಲಿ ರನ್‍ರೇಟ್ ಕೂಡ ಕಡಿಮೆಯಾಗಿ ರಾಜಸ್ಥಾನ 5ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ ಕಷ್ಟವೆನಿಸುತ್ತಿದ್ದ ಚೇಸ್‍ಅನ್ನು ರಿಯಾನ್ ಪರಾಗ್ ಸುಲಭ ಮಾಡಿದರು. ಗೋಪಾಲ್ ಹಾಗೂ ಆರ್ಚರ್‍ರೊಂದಿಗೆ ಜೊತೆಯಾಟಗಳನ್ನು ಮಾಡಿ ಪರಾಗ್ 19ನೇ ಓವರ್‍ನ 5ನೇ ಎಸೆತದಲ್ಲಿ ಹಿಟ್ ವಿಕೆಟ್ ಆಗಿ ಔಟಾದರು. ಈ ಬಾರಿಯೂ ಸಹ ಕೇವಲ 3 ರನ್‍ಗಳಿಂದ ಅರ್ಧಶತಕ ತಪ್ಪಿಸಿಕೊಂಡರು. 31ಎಸೆತಗಳಲ್ಲಿ 47 ರನ್‍ಗಳಿಸಿದ ಪರಾಗ್ ರಾಜಸ್ಥಾನದ ಪಾಲಿಗೆ ಹೀರೋ ಆದರು. ಕೊನೆಯ ಓವರ್‍ನಲ್ಲಿ ಆರ್ಚರ್ ತಂಡವನ್ನು ಗೆಲ್ಲಿಸಿದರು.

ಸಾರಾಂಶದ ಮಾತೆಂದರೆ ರಿಯಾನ್ ಪರಾಗ್ ಭಾರತೀಯ ಕ್ರಿಕೆಟ್‍ನ ಸದ್ಯದ ಅತ್ಯುತ್ತಮ ಉದಯೋನ್ಮುಖ ಆಟಗಾರರಲ್ಲಿ ಒಬ್ಬರು ಎನ್ನುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...