Homeಸಿನಿಮಾಕ್ರೀಡೆಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

- Advertisement -
- Advertisement -

 

 

| ಅಂತಃಕರಣ |

ಅಸ್ಸಾಮ್‍ನ ಆಲ್‍ರೌಂಡರ್ ಆಗಿರುವ ರಿಯಾನ್ ಪರಾಗ್‍ರ ಹೆಸರು ಐಪಿಎಲ್‍ಗೂ ಮೊದಲು ಕ್ರಿಕೆಟ್ ಜಗತ್ತಿಗೆ ಒಂದು ರೀತಿ ಅಪರಿಚಿತವೇ ಆಗಿತ್ತು. 2018ರ ವಿಶ್ವಕಪ್ ಗೆದ್ದಿದ್ದ ತಂಡದ ಭಾಗವಾಗಿ ರಿಯಾನ್‍ರವರಿದ್ದರೂ ಸಹ ಗಾಯದ ಕಾರಣ ಬೆಂಚ್ ಬಿಸಿ ಮಾಡುತ್ತಲೇ ಕಾಲ ಕಳೆದರು. ಅಸ್ಸಾಂಪರ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಕಾರಣ ರಾಜಸ್ಥಾನರಾಯಲ್ಸ್ ತಂಡ ಇವರನ್ನು ಈ ಬಾರಿಯ ಹರಾಜಿನಲ್ಲಿ ಅವರ ಮೂಲಬೆಲೆ 20ಲಕ್ಷ ನೀಡಿ ಖರೀದಿಸಿತು. ರಾಜಸ್ಥಾನ ತಂಡದ ಪರವೂ ಸಹ ಮೊದಲ ಕೆಲವು ಪಂದ್ಯಗಳಲ್ಲಿ ಅವರಿಗೆ ಆಡಲು ಅವಕಾಶ ಸಿಗಲಿಲ್ಲ.

ತಂಡದ ಆರನೇ ಪಂದ್ಯದಲ್ಲಿ ರಿಯಾನ್ ಪರಾಗ್ ಫಾರ್ಮ್ ಕಳೆದುಕೊಂಡಿದ್ದ ಕೃಷ್ಣಪ್ಪಗೌತಮ್‍ರವರ ಬದಲಿಗೆ ಆಡಲು ತಂಡದ ಪ್ಲೇಯಿಂಗ್ 11ನಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಚೆನ್ನೈಸೂಪರ್‍ಕಿಂಗ್ಸ್ ಎದುರಿನ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡದ ಪರ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಬಂದ ರಿಯಾನ್ ಪರಾಗ್ ಎರಡು ಬೌಂಡರಿಗಳ ಮೂಲಕ 16 ರನ್‍ಗಳಿಸಿ ಶಾರ್ದೂಲ್ ಠಾಕೂರ್‍ರ ಎಸೆತದಲ್ಲಿ ಧೋನಿಯವರಿಗೆ ಕ್ಯಾಚಿತ್ತು ಔಟಾದರು. ವಿಶೇಷವೇನೆಂದರೆ 19 ವರ್ಷಗಳ ಮುಂಚೆ ರಿಯಾನ್ ಪರಾಗ್‍ರ ತಂದೆ ಪರಾಗ್‍ದಾಸ್‍ಕೂಡ ರಣಜಿ ಪಂದ್ಯವೊಂದರಲ್ಲಿ ಧೋನಿಯವರಿಂದ ಸ್ಟಂಪ್ಡ್ ಆಗಿ ಔಟಾಗಿದ್ದರು! ಹೌದು ! 1999-2000ರ ರಣಜಿ ಸೀಸನ್‍ನ ಬಿಹಾರ್ ಹಾಗೂ ಅಸ್ಸಾಮ್ ನಡುವಿನ ಪಂದ್ಯದಲ್ಲಿ ಪರಾಗ್‍ದಾಸ್‍ರನ್ನು ಧೋನಿ ಸ್ಟಂಪ್ಡ್ ಮಾಡಿದ್ದರು. 19 ವರ್ಷಗಳ ನಂತರ ಅವರ ಮಗ ರಿಯಾನ್ ಪರಾಗ್ ಸಹ ಧೋನಿಗೆ ಕ್ಯಾಚಿತ್ತು ಔಟಾಗಿದ್ದು ಒಂದು ಅಚ್ಚರಿಯೇ ಸರಿ.

ಆ ಪಂದ್ಯದಲ್ಲಿ ಓವರ್ ಬೌಲ್ ಮಾಡಿ ಪರಾಗ್ ಕೇವಲ 24 ರನ್ ಬಿಟ್ಟುಕೊಟ್ಟರು. ನಂತರದ ಎರಡು ಪಂದ್ಯಗಳಲ್ಲಿ ಪರಾಗ್‍ರನ್ನು ರಾಜಸ್ಥಾನ ತಂಡ ಆಡಿಸಲಿಲ್ಲ. ಅವರ ಬದಲಿಗೆ ಕ್ರಮವಾಗಿ ಕರ್ನಾಟಕದ ಗೌತಮ್ ಹಾಗೂ ಬಿನ್ನಿ ಒಂದೊಂದು ಪಂದ್ಯದಲ್ಲಿ ಆಡಿದರು. ಎರಡು ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯದಲ್ಲಿ ಪರಾಗ್ ವಾಪಸಾತಿ ಮಾಡಿದರು. ಆ ಪಂದ್ಯದಲ್ಲಿ ಅವರು ಒಂದು ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 162ರ ಮೊತ್ತವನ್ನು ಬೆನ್ನತ್ತಿದ್ದ ರಾಜಸ್ಥಾನ 77ಕ್ಕೆ ಮೂರು ಜನ ಟಾಪ್‍ಆರ್ಡರ್ ಬ್ಯಾಟ್ಸ್‍ಮನ್‍ಗಳನ್ನು ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿತ್ತು. ಆಗ ಕ್ರೀಸ್‍ಗೆ ಬಂದ ಪರಾಗ್ ನಾಯಕ ಸ್ಮಿತ್‍ರೊಂದಿಗೆ ಒಂದು ಅತ್ಯುತ್ತಮ ಜೊತೆಯಾಟವಾಡಿದರು. ಸ್ಮಿತ್ ಹಾಗೂ ಪರಾಗ್ ಆಡಿದ 70 ರನ್‍ಗಳ ಜೊತೆಯಾಟದಲ್ಲಿ ಪರಾಗ್‍ರದ್ದೇ ಸಿಂಹಪಾಲು! ತಮ್ಮ ಎರಡನೇ ಐಪಿಎಲ್ ಇನ್ನಿಂಗ್ಸ್‍ನಲ್ಲಿಯೇ ಮುಂಬೈ ಬೌಲರ್‍ಗಳನ್ನು ಬೆಚ್ಚಿಬೀಳಿಸಿದರು. 29 ಎಸೆತಗಳಲ್ಲಿ 43ರನ್ ಗಳಿಸಿ ಪರಾಗ್ ತಂಡವನ್ನು ಗೆಲುವಿನ ಗಡಿಯವರೆಗೆ ತಂದು ಔಟಾದರು! ಅದರ ಮೂಲಕ ಐಪಿಎಲ್‍ನ ಅತ್ಯಂತ ಕಿರಿಯ ಅರ್ಧಶತಕಧಾರಿಯಾಗುವ ಅವಕಾಶ ತಪ್ಪಿಸಿಕೊಂಡರು. ಪರಾಗ್‍ರ ಸಾಮಥ್ರ್ಯಕ್ಕೆ ಈ ಇನ್ನಿಂಗ್ಸ್ ಒಂದು ಕನ್ನಡಿಯಾಗಿತ್ತು ಅಷ್ಟೇ !ಮುಂದಿನ ಪಂದ್ಯದಲ್ಲಿ ಕೊನೆಗೆ ಬ್ಯಾಟಿಂಗ್‍ಗೆ ಬಂದ ಪರಾಗ್ ಒಂದು ಬೌಂಡರಿ ಹೊಡೆದು ಒಂದು ಉತ್ತಮ ಅಂತ್ಯಕೊಟ್ಟರು.

ಇಲ್ಲಿಯವರೆಗಿನ ಅವರ ಅತ್ಯುತ್ತಮ ಇನ್ನಿಂಗ್ಸ್ ಬಂದಿದ್ದು ನಂತರದ ಪಂದ್ಯದಲ್ಲಿ. ಕೊಲ್ಕತ್ತಾ ನೈಟ್‍ರೈಡರ್ಸ್ ತಂಡ ಮೊದಲು ಬ್ಯಾಟ್ ನಾಯಕ ಕಾರ್ತಿಕ್‍ರ ಅತ್ಯುತ್ತಮ ಆಟದ ಬಲದಿಂದ 175 ರನ್ ಗಳಿಸಿತ್ತು. ಅದಕ್ಕೆ ಉತ್ತರವಾಗಿ ರಾಜಸ್ಥಾನ ಸಹ ಉತ್ತಮ ಆರಂಭ ಹೊಂದಿತು. ರಹಾನೆ ಹಾಗೂ ಸ್ಯಾಮ್ಸನ್ 53 ರನ್‍ಗಳ ಬುನಾದಿಯನ್ನು ರಾಜಸ್ಥಾನಕ್ಕೆ ಹಾಕಿಕೊಟ್ಟರು. ಆದರೆ ನಂತರದ 7ಓವರ್‍ಗಳಲ್ಲಿ ರನ್‍ರೇಟ್ ಕೂಡ ಕಡಿಮೆಯಾಗಿ ರಾಜಸ್ಥಾನ 5ವಿಕೆಟ್ ಕಳೆದುಕೊಂಡಿತು. ಒಂದು ಹಂತದಲ್ಲಿ ಕಷ್ಟವೆನಿಸುತ್ತಿದ್ದ ಚೇಸ್‍ಅನ್ನು ರಿಯಾನ್ ಪರಾಗ್ ಸುಲಭ ಮಾಡಿದರು. ಗೋಪಾಲ್ ಹಾಗೂ ಆರ್ಚರ್‍ರೊಂದಿಗೆ ಜೊತೆಯಾಟಗಳನ್ನು ಮಾಡಿ ಪರಾಗ್ 19ನೇ ಓವರ್‍ನ 5ನೇ ಎಸೆತದಲ್ಲಿ ಹಿಟ್ ವಿಕೆಟ್ ಆಗಿ ಔಟಾದರು. ಈ ಬಾರಿಯೂ ಸಹ ಕೇವಲ 3 ರನ್‍ಗಳಿಂದ ಅರ್ಧಶತಕ ತಪ್ಪಿಸಿಕೊಂಡರು. 31ಎಸೆತಗಳಲ್ಲಿ 47 ರನ್‍ಗಳಿಸಿದ ಪರಾಗ್ ರಾಜಸ್ಥಾನದ ಪಾಲಿಗೆ ಹೀರೋ ಆದರು. ಕೊನೆಯ ಓವರ್‍ನಲ್ಲಿ ಆರ್ಚರ್ ತಂಡವನ್ನು ಗೆಲ್ಲಿಸಿದರು.

ಸಾರಾಂಶದ ಮಾತೆಂದರೆ ರಿಯಾನ್ ಪರಾಗ್ ಭಾರತೀಯ ಕ್ರಿಕೆಟ್‍ನ ಸದ್ಯದ ಅತ್ಯುತ್ತಮ ಉದಯೋನ್ಮುಖ ಆಟಗಾರರಲ್ಲಿ ಒಬ್ಬರು ಎನ್ನುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...