Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...