Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...