Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...