Homeಮುಖಪುಟಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಜಾಮೀನು ಮಂಜೂರಾಗಿದ್ದರೂ, ಲಾಲೂ ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ಬೇಕಾಗುತ್ತವೆ ಎಂದು ತಿಳಿಸಲಾಗಿದೆ.

- Advertisement -
- Advertisement -

ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು (ಏಪ್ರಿಲ್ 17) ಜಾಮೀನು ನೀಡಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ದುಮ್ಕಾ ಖಜಾನೆ ಪ್ರಕರಣ ಎಂದು ಕರೆಯಲ್ಪಡುವ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜಾರ್ಖಂಡ್ ನಗರದ ಖಜಾನೆಯಿಂದ 3.13 ಕೋಟಿ ರೂಪಾಯಿ ಹಣವನ್ನು ವಿತ್ ಡ್ರಾ ಮಾಡಿದ ಪ್ರಕರಣ ಇದಾಗಿದೆ.

ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ಜಾಮೀನು ಮಂಜೂರಾಗಿದ್ದರೂ, ಲಾಲು ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿನ ನಿಯಮದಿಂದಾಗಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸ್ವಲ್ಪ ವಿಳಂಬವಾಗಬಹುದು. ಬೆಲ್ ಬಾಂಡ್‌ಗಳು ತುಂಬಿದ ನಂತರ ಜೈಲಿನಿಂದ ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎನ್ನಲಾಗಿದೆ.

ಪ್ರಸ್ತುತ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್‌ನಲ್ಲಿರುವ ಯಾದವ್ ಅವರು ಬಿಹಾರದ ಮೇವಿನ ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಪಡೆದಿದ್ದರು. ದುಮ್ಕಾ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಕಾರಣ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮನೆಗೆ ಮರಳಬಹುದು.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲೂ ಪ್ರಸಾದ್ ಯಾದವ್,. ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಮ್ಮ ಜೈಲು ಶಿಕ್ಷೆಯ ಹೆಚ್ಚಿನ ಭಾಗವನ್ನು ಕಳೆದಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಜನವರಿಯಲ್ಲಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

“ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿದೆ. ಸುಪ್ರೀಂ ಕೋರ್ಟ್ ಮಾಡಿದ ನಿಯಮದಡಿಯಲ್ಲಿ ಜಾಮೀನು ನೀಡಲಾಗಿದೆ. ಬೆಲ್ ಬಾಂಡ್ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯನ್ನು ಗಮನಿಸಿದರೆ, ಲಾಲೂ ಪ್ರಸಾದ್ ಯಾದವ್ ಹೊರಬರಲು 3-4 ದಿನಗಳು ತೆಗೆದುಕೊಳ್ಳಬಹುದು” ಎಂದು ಆರ್‌ಜೆಡಿ ಮುಖಂಡ ಶಿವಾನಂದ್ ತಿವಾರಿ ಹೇಳಿದ್ದಾರೆ.

ಲಾಲೂ ಯಾದವ್ ಅವರ ಅನುಪಸ್ಥಿತಿಯಲ್ಲಿ, ಅವರ ಮಗ ತೇಜಶ್ವಿ ಯಾದವ್ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಕಳೆದ ವರ್ಷ ಬಿಹಾರ ಚುನಾವಣೆಯಲ್ಲಿ ಪಕ್ಷ ತೇಜಶ್ವಿ ಯಾದವ್ ನೇತೃತ್ವದಲ್ಲಿ ಉತ್ತಮ ಸಾಧನ ಮಾಡಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...