Homeಮುಖಪುಟಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಜಾಮೀನು ಮಂಜೂರಾಗಿದ್ದರೂ, ಲಾಲೂ ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ಬೇಕಾಗುತ್ತವೆ ಎಂದು ತಿಳಿಸಲಾಗಿದೆ.

- Advertisement -
- Advertisement -

ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು (ಏಪ್ರಿಲ್ 17) ಜಾಮೀನು ನೀಡಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ದುಮ್ಕಾ ಖಜಾನೆ ಪ್ರಕರಣ ಎಂದು ಕರೆಯಲ್ಪಡುವ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜಾರ್ಖಂಡ್ ನಗರದ ಖಜಾನೆಯಿಂದ 3.13 ಕೋಟಿ ರೂಪಾಯಿ ಹಣವನ್ನು ವಿತ್ ಡ್ರಾ ಮಾಡಿದ ಪ್ರಕರಣ ಇದಾಗಿದೆ.

ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ಜಾಮೀನು ಮಂಜೂರಾಗಿದ್ದರೂ, ಲಾಲು ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿನ ನಿಯಮದಿಂದಾಗಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸ್ವಲ್ಪ ವಿಳಂಬವಾಗಬಹುದು. ಬೆಲ್ ಬಾಂಡ್‌ಗಳು ತುಂಬಿದ ನಂತರ ಜೈಲಿನಿಂದ ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎನ್ನಲಾಗಿದೆ.

ಪ್ರಸ್ತುತ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್‌ನಲ್ಲಿರುವ ಯಾದವ್ ಅವರು ಬಿಹಾರದ ಮೇವಿನ ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಪಡೆದಿದ್ದರು. ದುಮ್ಕಾ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಕಾರಣ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮನೆಗೆ ಮರಳಬಹುದು.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲೂ ಪ್ರಸಾದ್ ಯಾದವ್,. ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಮ್ಮ ಜೈಲು ಶಿಕ್ಷೆಯ ಹೆಚ್ಚಿನ ಭಾಗವನ್ನು ಕಳೆದಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಜನವರಿಯಲ್ಲಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

“ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿದೆ. ಸುಪ್ರೀಂ ಕೋರ್ಟ್ ಮಾಡಿದ ನಿಯಮದಡಿಯಲ್ಲಿ ಜಾಮೀನು ನೀಡಲಾಗಿದೆ. ಬೆಲ್ ಬಾಂಡ್ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯನ್ನು ಗಮನಿಸಿದರೆ, ಲಾಲೂ ಪ್ರಸಾದ್ ಯಾದವ್ ಹೊರಬರಲು 3-4 ದಿನಗಳು ತೆಗೆದುಕೊಳ್ಳಬಹುದು” ಎಂದು ಆರ್‌ಜೆಡಿ ಮುಖಂಡ ಶಿವಾನಂದ್ ತಿವಾರಿ ಹೇಳಿದ್ದಾರೆ.

ಲಾಲೂ ಯಾದವ್ ಅವರ ಅನುಪಸ್ಥಿತಿಯಲ್ಲಿ, ಅವರ ಮಗ ತೇಜಶ್ವಿ ಯಾದವ್ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಕಳೆದ ವರ್ಷ ಬಿಹಾರ ಚುನಾವಣೆಯಲ್ಲಿ ಪಕ್ಷ ತೇಜಶ್ವಿ ಯಾದವ್ ನೇತೃತ್ವದಲ್ಲಿ ಉತ್ತಮ ಸಾಧನ ಮಾಡಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...