Homeಮುಖಪುಟ'ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ': ಆರ್‌ಜೆಡಿ ನಾಯಕ

‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳುವ ಮೂಲಕ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಕ್ಕೆ ತುತ್ತಾಗಿದ್ದಾರೆ.

ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ”ಹಿಂದುಳಿದ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ, ‘ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.

ವಿವಾದಕ್ಕಿಡಾದ ಬಳಿಕ ಮಾತನಾಡಿದ ಅವರು, ”ಆರ್‌ಜೆಡಿ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ರ‍್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು, ಹಾಗಾಗಿ ಜನರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡಿದೆ. ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕು. ಹೊಸ ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೆ ಅರ್ಥಮಾಡಿಕೊಳ್ಳಲಿ ಎಂದು ನಾನು ವಿಶಿಷ್ಟವಾದ ಗ್ರಾಮೀಣ ಭಾಷೆಯನ್ನು ಬಳಸಿರುವುದಾಗಿ” ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ”ಆರ್‌ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ” ಎಂದು ಹೇಳಿದ್ದಾರೆ.

”ಇದು ಅವರ ಸಂಕುಚಿತ  ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್​​ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದರು.

ಸಿದ್ದಿಕಿ ಅವರ ಹೇಳಿಕೆಯನ್ನು INDIA ಮೈತ್ರಿಕೂಟದ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ”ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.

”ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.

ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್‌ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್‌ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ”ಈ ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ” ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.

2012 ರಲ್ಲಿ ಮೀಸಲಾತಿ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ)” ಎಂದಿದ್ದರು.

ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.

ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಕೋರುವ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಯಿಂದ ಅಂತಿಮ ಮುದ್ರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...