Homeಮುಖಪುಟ'ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ': ಆರ್‌ಜೆಡಿ ನಾಯಕ

‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳುವ ಮೂಲಕ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಕ್ಕೆ ತುತ್ತಾಗಿದ್ದಾರೆ.

ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ”ಹಿಂದುಳಿದ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ, ‘ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.

ವಿವಾದಕ್ಕಿಡಾದ ಬಳಿಕ ಮಾತನಾಡಿದ ಅವರು, ”ಆರ್‌ಜೆಡಿ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ರ‍್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು, ಹಾಗಾಗಿ ಜನರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡಿದೆ. ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕು. ಹೊಸ ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೆ ಅರ್ಥಮಾಡಿಕೊಳ್ಳಲಿ ಎಂದು ನಾನು ವಿಶಿಷ್ಟವಾದ ಗ್ರಾಮೀಣ ಭಾಷೆಯನ್ನು ಬಳಸಿರುವುದಾಗಿ” ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ”ಆರ್‌ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ” ಎಂದು ಹೇಳಿದ್ದಾರೆ.

”ಇದು ಅವರ ಸಂಕುಚಿತ  ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್​​ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದರು.

ಸಿದ್ದಿಕಿ ಅವರ ಹೇಳಿಕೆಯನ್ನು INDIA ಮೈತ್ರಿಕೂಟದ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ”ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.

”ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.

ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್‌ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್‌ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ”ಈ ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ” ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.

2012 ರಲ್ಲಿ ಮೀಸಲಾತಿ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ)” ಎಂದಿದ್ದರು.

ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.

ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಕೋರುವ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಯಿಂದ ಅಂತಿಮ ಮುದ್ರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...