ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಲಿಪ್ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳುವ ಮೂಲಕ ಆರ್ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಕ್ಕೆ ತುತ್ತಾಗಿದ್ದಾರೆ.
ಬಿಹಾರದ ಮುಜಾಫರ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ”ಹಿಂದುಳಿದ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ, ‘ಲಿಪ್ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.
ವಿವಾದಕ್ಕಿಡಾದ ಬಳಿಕ ಮಾತನಾಡಿದ ಅವರು, ”ಆರ್ಜೆಡಿ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ರ್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು, ಹಾಗಾಗಿ ಜನರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡಿದೆ. ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕು. ಹೊಸ ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೆ ಅರ್ಥಮಾಡಿಕೊಳ್ಳಲಿ ಎಂದು ನಾನು ವಿಶಿಷ್ಟವಾದ ಗ್ರಾಮೀಣ ಭಾಷೆಯನ್ನು ಬಳಸಿರುವುದಾಗಿ” ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.
ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ”ಆರ್ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ” ಎಂದು ಹೇಳಿದ್ದಾರೆ.
”ಇದು ಅವರ ಸಂಕುಚಿತ ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದರು.
ಸಿದ್ದಿಕಿ ಅವರ ಹೇಳಿಕೆಯನ್ನು INDIA ಮೈತ್ರಿಕೂಟದ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ”ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.
”ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.
ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ”ಈ ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ” ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.
2012 ರಲ್ಲಿ ಮೀಸಲಾತಿ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ)” ಎಂದಿದ್ದರು.
ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.
ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಕೋರುವ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದರು.
ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಯಿಂದ ಅಂತಿಮ ಮುದ್ರೆ..