Homeಮುಖಪುಟ'ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ': ಆರ್‌ಜೆಡಿ ನಾಯಕ

‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳುವ ಮೂಲಕ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಕ್ಕೆ ತುತ್ತಾಗಿದ್ದಾರೆ.

ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ”ಹಿಂದುಳಿದ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ, ‘ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.

ವಿವಾದಕ್ಕಿಡಾದ ಬಳಿಕ ಮಾತನಾಡಿದ ಅವರು, ”ಆರ್‌ಜೆಡಿ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ರ‍್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು, ಹಾಗಾಗಿ ಜನರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡಿದೆ. ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕು. ಹೊಸ ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೆ ಅರ್ಥಮಾಡಿಕೊಳ್ಳಲಿ ಎಂದು ನಾನು ವಿಶಿಷ್ಟವಾದ ಗ್ರಾಮೀಣ ಭಾಷೆಯನ್ನು ಬಳಸಿರುವುದಾಗಿ” ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ”ಆರ್‌ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ” ಎಂದು ಹೇಳಿದ್ದಾರೆ.

”ಇದು ಅವರ ಸಂಕುಚಿತ  ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್​​ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದರು.

ಸಿದ್ದಿಕಿ ಅವರ ಹೇಳಿಕೆಯನ್ನು INDIA ಮೈತ್ರಿಕೂಟದ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ”ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.

”ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.

ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್‌ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್‌ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ”ಈ ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ” ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.

2012 ರಲ್ಲಿ ಮೀಸಲಾತಿ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ)” ಎಂದಿದ್ದರು.

ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.

ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಕೋರುವ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಯಿಂದ ಅಂತಿಮ ಮುದ್ರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...