Homeಮುಖಪುಟ'ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ': ಆರ್‌ಜೆಡಿ ನಾಯಕ

‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳುವ ಮೂಲಕ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಕ್ಕೆ ತುತ್ತಾಗಿದ್ದಾರೆ.

ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ”ಹಿಂದುಳಿದ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ, ‘ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.

ವಿವಾದಕ್ಕಿಡಾದ ಬಳಿಕ ಮಾತನಾಡಿದ ಅವರು, ”ಆರ್‌ಜೆಡಿ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ರ‍್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು, ಹಾಗಾಗಿ ಜನರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡಿದೆ. ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕು. ಹೊಸ ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೆ ಅರ್ಥಮಾಡಿಕೊಳ್ಳಲಿ ಎಂದು ನಾನು ವಿಶಿಷ್ಟವಾದ ಗ್ರಾಮೀಣ ಭಾಷೆಯನ್ನು ಬಳಸಿರುವುದಾಗಿ” ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ”ಆರ್‌ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ” ಎಂದು ಹೇಳಿದ್ದಾರೆ.

”ಇದು ಅವರ ಸಂಕುಚಿತ  ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್​​ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದರು.

ಸಿದ್ದಿಕಿ ಅವರ ಹೇಳಿಕೆಯನ್ನು INDIA ಮೈತ್ರಿಕೂಟದ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ”ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.

”ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.

ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್‌ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್‌ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ”ಈ ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ” ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.

2012 ರಲ್ಲಿ ಮೀಸಲಾತಿ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ)” ಎಂದಿದ್ದರು.

ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.

ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಕೋರುವ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಯಿಂದ ಅಂತಿಮ ಮುದ್ರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...