Homeಮುಖಪುಟಅಯೋಧ್ಯೆಯಲ್ಲಿ 'ರಾಮ'ನಿಗಿಂತ 'ಮೋದಿ'ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

ಅಯೋಧ್ಯೆಯಲ್ಲಿ ‘ರಾಮ’ನಿಗಿಂತ ‘ಮೋದಿ’ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮನಿಗಿಂತ ಪ್ರಧಾನಿ ನರೇಂದ್ರ ಮೋದಿಯೇ ಹೆಚ್ಚು ಗೋಚರಿಸುತ್ತಿದ್ದಾರೆ ಎಂದು ಆರ್‌ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಹೇಳಿದ್ದು, ರಾಮಮಂದಿರ ಉದ್ಘಾಟಣೆಯನ್ನು ರಾಜಕೀಯ ಗೊಳಿಸಿದ್ದಕ್ಕೆ ಬಿಜೆಪಿ ಮತ್ತು ಮೋದಿಯನ್ನು ಟೀಕಿಸಿದ್ದಾರೆ.

ಹಿಂದುತ್ವದ ಅಜೆಂಡಾದಲ್ಲಿ ಕೆಲಸ ಮಾಡುತ್ತಿರುವವರು ದೇಶದಲ್ಲಿ ಹಿಂದುಳಿದ ವರ್ಗ, ದಲಿತ ಮತ್ತು ವಂಚಿತ ವರ್ಗದ ಜನರು ಗಳಿಸಿದ್ದ ಸಾಮಾಜಿಕ ನ್ಯಾಯವನ್ನು ಮುಗಿಸಲು ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ಜಾತಿಯಲ್ಲಿ ಹುಟ್ಟಿ ಹಿಂದುತ್ವದ ಅಜೆಂಡಾಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ತಿವಾರಿ ಹೇಳಿದ್ದಾರೆ.

ಬಿಜೆಪಿಯು ಈ ಸಮಾರಂಭದಲ್ಲಿ ಇಡೀ ಸರ್ಕಾರಿ ಯಂತ್ರವನ್ನು ಬಳಸುತ್ತಿದೆ ಇದು ನಮ್ಮ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ಬಿಜೆಪಿ ಮತ್ತು ನರೇಂದ್ರ ಮೋದಿಯವರ ರಾಜಕೀಯ ಪ್ರಚಾರವಾಗಿದೆ. ಏಕೆಂದರೆ ಅವರ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದಾರೆ ಅವರು ರಾಮ ಮತ್ತು ಮಂದಿರದ ಹೆಸರಿನಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ದೇಶದಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದ್ದಾರೆ. ಜನರು ಅವುಗಳನ್ನು ‘ಚಾರ್ ಧಾಮ್’ ಎಂದು ತಿಳಿದಿದ್ದಾರೆ. ನಾಲ್ಕು ಧಾಮಗಳ ಶಂಕರಾಚಾರ್ಯರು ಅಯೋಧ್ಯೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ತಾವು ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಅವುರನ್ನು ಹಿಂದೂ ವಿರೋಧಿ ಎಂದು ಘೋಷಿಸುವಷ್ಟು ಧೈರ್ಯ ಬಿಜೆಪಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಎಐಸಿಸಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿದ ಶಂಕರಾಚಾರ್ಯರ ವಿರುದ್ಧ ಆರೆಸ್ಸೆಸ್-ಬಿಜೆಪಿ ಪ್ರಚಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ಸಂಪೂರ್ಣ ಐಟಿ ಸೆಲ್ ನಾಲ್ಕು ಪೀಠಗಳ ಶಂಕರಾಚಾರ್ಯರ ವಿರುದ್ಧ ಅಭಿಯಾನವನ್ನು ನಡೆಸುತ್ತಿದೆ. ಈ ಇಡೀ ಸಮಾರಂಭದಲ್ಲಿ ಧರ್ಮ, ನೀತಿ ಮತ್ತು ನಂಬಿಕೆ ಎಲ್ಲಿಯೂ ಗೋಚರಿಸುವುದಿಲ್ಲ, ಕೇವಲ ರಾಜಕೀಯ ಗೋಚರಿಸುತ್ತದೆ. ದೇವಸ್ಥಾನದ ಪ್ರತಿಷ್ಠಾಪನೆಗೆ ಜನವರಿ 22ರ ದಿನಾಂಕವನ್ನು ಆಯ್ಕೆ ಮಾಡಲಾಗಿಲ್ಲ. ಬದಲಿಗೆ ಚುನಾವಣೆಗಳನ್ನು ಗಮನಿಸಿಕೊಂಡು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ರಾಜಕೀಯ ಪ್ರಚಾರಕ್ಕಾಗಿ ನಮ್ಮ ದೇವರು ಮತ್ತು ನಂಬಿಕೆಯೊಂದಿಗೆ ಆಟವಾಡುವುದನ್ನು ನಾವು ನೋಡಲಾಗುವುದಿಲ್ಲ. ದೇವಾಲಯದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು, ಆದರೆ ಅದರಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪವನ್ನು ಮಾಡುವುದನ್ನು ಯಾವುದೇ ಭಕ್ತರು ಸಹಿಸುವುದಿಲ್ಲ ಎಂದು ಪವನ್ ಖೇರಾ ಹೇಳಿದ್ದರು. ಮೋದಿ ರಾಮನ ಬೆರಳನ್ನು ಹಿಡಿದು ನಡೆಯುವ ಜಾಹೀರಾತಿನ ಬಗ್ಗೆ ಪ್ರಶ್ನಿಸಿದ ಅವರು, ಭಗವಾನ್ ರಾಮನಿಗೆ ಸಹಾಯ ಮಾಡಲು ನೀವು ಯಾರು, ನೀವು ದೇವರಿಗಿಂತ ಮೇಲಿದ್ದೀರಾ? ಎಂದು ಮೋದಿಗೆ ಖೇರಾ ಪ್ರಶ್ನಿಸಿದ್ದಾರೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...