Homeಮುಖಪುಟಅಯೋಧ್ಯೆಯಲ್ಲಿ 'ರಾಮ'ನಿಗಿಂತ 'ಮೋದಿ'ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

ಅಯೋಧ್ಯೆಯಲ್ಲಿ ‘ರಾಮ’ನಿಗಿಂತ ‘ಮೋದಿ’ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮನಿಗಿಂತ ಪ್ರಧಾನಿ ನರೇಂದ್ರ ಮೋದಿಯೇ ಹೆಚ್ಚು ಗೋಚರಿಸುತ್ತಿದ್ದಾರೆ ಎಂದು ಆರ್‌ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಹೇಳಿದ್ದು, ರಾಮಮಂದಿರ ಉದ್ಘಾಟಣೆಯನ್ನು ರಾಜಕೀಯ ಗೊಳಿಸಿದ್ದಕ್ಕೆ ಬಿಜೆಪಿ ಮತ್ತು ಮೋದಿಯನ್ನು ಟೀಕಿಸಿದ್ದಾರೆ.

ಹಿಂದುತ್ವದ ಅಜೆಂಡಾದಲ್ಲಿ ಕೆಲಸ ಮಾಡುತ್ತಿರುವವರು ದೇಶದಲ್ಲಿ ಹಿಂದುಳಿದ ವರ್ಗ, ದಲಿತ ಮತ್ತು ವಂಚಿತ ವರ್ಗದ ಜನರು ಗಳಿಸಿದ್ದ ಸಾಮಾಜಿಕ ನ್ಯಾಯವನ್ನು ಮುಗಿಸಲು ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ಜಾತಿಯಲ್ಲಿ ಹುಟ್ಟಿ ಹಿಂದುತ್ವದ ಅಜೆಂಡಾಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ತಿವಾರಿ ಹೇಳಿದ್ದಾರೆ.

ಬಿಜೆಪಿಯು ಈ ಸಮಾರಂಭದಲ್ಲಿ ಇಡೀ ಸರ್ಕಾರಿ ಯಂತ್ರವನ್ನು ಬಳಸುತ್ತಿದೆ ಇದು ನಮ್ಮ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ಬಿಜೆಪಿ ಮತ್ತು ನರೇಂದ್ರ ಮೋದಿಯವರ ರಾಜಕೀಯ ಪ್ರಚಾರವಾಗಿದೆ. ಏಕೆಂದರೆ ಅವರ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದಾರೆ ಅವರು ರಾಮ ಮತ್ತು ಮಂದಿರದ ಹೆಸರಿನಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ದೇಶದಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದ್ದಾರೆ. ಜನರು ಅವುಗಳನ್ನು ‘ಚಾರ್ ಧಾಮ್’ ಎಂದು ತಿಳಿದಿದ್ದಾರೆ. ನಾಲ್ಕು ಧಾಮಗಳ ಶಂಕರಾಚಾರ್ಯರು ಅಯೋಧ್ಯೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ತಾವು ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಅವುರನ್ನು ಹಿಂದೂ ವಿರೋಧಿ ಎಂದು ಘೋಷಿಸುವಷ್ಟು ಧೈರ್ಯ ಬಿಜೆಪಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಎಐಸಿಸಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿದ ಶಂಕರಾಚಾರ್ಯರ ವಿರುದ್ಧ ಆರೆಸ್ಸೆಸ್-ಬಿಜೆಪಿ ಪ್ರಚಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ಸಂಪೂರ್ಣ ಐಟಿ ಸೆಲ್ ನಾಲ್ಕು ಪೀಠಗಳ ಶಂಕರಾಚಾರ್ಯರ ವಿರುದ್ಧ ಅಭಿಯಾನವನ್ನು ನಡೆಸುತ್ತಿದೆ. ಈ ಇಡೀ ಸಮಾರಂಭದಲ್ಲಿ ಧರ್ಮ, ನೀತಿ ಮತ್ತು ನಂಬಿಕೆ ಎಲ್ಲಿಯೂ ಗೋಚರಿಸುವುದಿಲ್ಲ, ಕೇವಲ ರಾಜಕೀಯ ಗೋಚರಿಸುತ್ತದೆ. ದೇವಸ್ಥಾನದ ಪ್ರತಿಷ್ಠಾಪನೆಗೆ ಜನವರಿ 22ರ ದಿನಾಂಕವನ್ನು ಆಯ್ಕೆ ಮಾಡಲಾಗಿಲ್ಲ. ಬದಲಿಗೆ ಚುನಾವಣೆಗಳನ್ನು ಗಮನಿಸಿಕೊಂಡು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ರಾಜಕೀಯ ಪ್ರಚಾರಕ್ಕಾಗಿ ನಮ್ಮ ದೇವರು ಮತ್ತು ನಂಬಿಕೆಯೊಂದಿಗೆ ಆಟವಾಡುವುದನ್ನು ನಾವು ನೋಡಲಾಗುವುದಿಲ್ಲ. ದೇವಾಲಯದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು, ಆದರೆ ಅದರಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪವನ್ನು ಮಾಡುವುದನ್ನು ಯಾವುದೇ ಭಕ್ತರು ಸಹಿಸುವುದಿಲ್ಲ ಎಂದು ಪವನ್ ಖೇರಾ ಹೇಳಿದ್ದರು. ಮೋದಿ ರಾಮನ ಬೆರಳನ್ನು ಹಿಡಿದು ನಡೆಯುವ ಜಾಹೀರಾತಿನ ಬಗ್ಗೆ ಪ್ರಶ್ನಿಸಿದ ಅವರು, ಭಗವಾನ್ ರಾಮನಿಗೆ ಸಹಾಯ ಮಾಡಲು ನೀವು ಯಾರು, ನೀವು ದೇವರಿಗಿಂತ ಮೇಲಿದ್ದೀರಾ? ಎಂದು ಮೋದಿಗೆ ಖೇರಾ ಪ್ರಶ್ನಿಸಿದ್ದಾರೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...