Homeಮುಖಪುಟಅಯೋಧ್ಯೆಯಲ್ಲಿ 'ರಾಮ'ನಿಗಿಂತ 'ಮೋದಿ'ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

ಅಯೋಧ್ಯೆಯಲ್ಲಿ ‘ರಾಮ’ನಿಗಿಂತ ‘ಮೋದಿ’ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮನಿಗಿಂತ ಪ್ರಧಾನಿ ನರೇಂದ್ರ ಮೋದಿಯೇ ಹೆಚ್ಚು ಗೋಚರಿಸುತ್ತಿದ್ದಾರೆ ಎಂದು ಆರ್‌ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಹೇಳಿದ್ದು, ರಾಮಮಂದಿರ ಉದ್ಘಾಟಣೆಯನ್ನು ರಾಜಕೀಯ ಗೊಳಿಸಿದ್ದಕ್ಕೆ ಬಿಜೆಪಿ ಮತ್ತು ಮೋದಿಯನ್ನು ಟೀಕಿಸಿದ್ದಾರೆ.

ಹಿಂದುತ್ವದ ಅಜೆಂಡಾದಲ್ಲಿ ಕೆಲಸ ಮಾಡುತ್ತಿರುವವರು ದೇಶದಲ್ಲಿ ಹಿಂದುಳಿದ ವರ್ಗ, ದಲಿತ ಮತ್ತು ವಂಚಿತ ವರ್ಗದ ಜನರು ಗಳಿಸಿದ್ದ ಸಾಮಾಜಿಕ ನ್ಯಾಯವನ್ನು ಮುಗಿಸಲು ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ಜಾತಿಯಲ್ಲಿ ಹುಟ್ಟಿ ಹಿಂದುತ್ವದ ಅಜೆಂಡಾಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ತಿವಾರಿ ಹೇಳಿದ್ದಾರೆ.

ಬಿಜೆಪಿಯು ಈ ಸಮಾರಂಭದಲ್ಲಿ ಇಡೀ ಸರ್ಕಾರಿ ಯಂತ್ರವನ್ನು ಬಳಸುತ್ತಿದೆ ಇದು ನಮ್ಮ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ಬಿಜೆಪಿ ಮತ್ತು ನರೇಂದ್ರ ಮೋದಿಯವರ ರಾಜಕೀಯ ಪ್ರಚಾರವಾಗಿದೆ. ಏಕೆಂದರೆ ಅವರ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದಾರೆ ಅವರು ರಾಮ ಮತ್ತು ಮಂದಿರದ ಹೆಸರಿನಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ದೇಶದಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದ್ದಾರೆ. ಜನರು ಅವುಗಳನ್ನು ‘ಚಾರ್ ಧಾಮ್’ ಎಂದು ತಿಳಿದಿದ್ದಾರೆ. ನಾಲ್ಕು ಧಾಮಗಳ ಶಂಕರಾಚಾರ್ಯರು ಅಯೋಧ್ಯೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ತಾವು ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಅವುರನ್ನು ಹಿಂದೂ ವಿರೋಧಿ ಎಂದು ಘೋಷಿಸುವಷ್ಟು ಧೈರ್ಯ ಬಿಜೆಪಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಎಐಸಿಸಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿದ ಶಂಕರಾಚಾರ್ಯರ ವಿರುದ್ಧ ಆರೆಸ್ಸೆಸ್-ಬಿಜೆಪಿ ಪ್ರಚಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ಸಂಪೂರ್ಣ ಐಟಿ ಸೆಲ್ ನಾಲ್ಕು ಪೀಠಗಳ ಶಂಕರಾಚಾರ್ಯರ ವಿರುದ್ಧ ಅಭಿಯಾನವನ್ನು ನಡೆಸುತ್ತಿದೆ. ಈ ಇಡೀ ಸಮಾರಂಭದಲ್ಲಿ ಧರ್ಮ, ನೀತಿ ಮತ್ತು ನಂಬಿಕೆ ಎಲ್ಲಿಯೂ ಗೋಚರಿಸುವುದಿಲ್ಲ, ಕೇವಲ ರಾಜಕೀಯ ಗೋಚರಿಸುತ್ತದೆ. ದೇವಸ್ಥಾನದ ಪ್ರತಿಷ್ಠಾಪನೆಗೆ ಜನವರಿ 22ರ ದಿನಾಂಕವನ್ನು ಆಯ್ಕೆ ಮಾಡಲಾಗಿಲ್ಲ. ಬದಲಿಗೆ ಚುನಾವಣೆಗಳನ್ನು ಗಮನಿಸಿಕೊಂಡು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ರಾಜಕೀಯ ಪ್ರಚಾರಕ್ಕಾಗಿ ನಮ್ಮ ದೇವರು ಮತ್ತು ನಂಬಿಕೆಯೊಂದಿಗೆ ಆಟವಾಡುವುದನ್ನು ನಾವು ನೋಡಲಾಗುವುದಿಲ್ಲ. ದೇವಾಲಯದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು, ಆದರೆ ಅದರಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪವನ್ನು ಮಾಡುವುದನ್ನು ಯಾವುದೇ ಭಕ್ತರು ಸಹಿಸುವುದಿಲ್ಲ ಎಂದು ಪವನ್ ಖೇರಾ ಹೇಳಿದ್ದರು. ಮೋದಿ ರಾಮನ ಬೆರಳನ್ನು ಹಿಡಿದು ನಡೆಯುವ ಜಾಹೀರಾತಿನ ಬಗ್ಗೆ ಪ್ರಶ್ನಿಸಿದ ಅವರು, ಭಗವಾನ್ ರಾಮನಿಗೆ ಸಹಾಯ ಮಾಡಲು ನೀವು ಯಾರು, ನೀವು ದೇವರಿಗಿಂತ ಮೇಲಿದ್ದೀರಾ? ಎಂದು ಮೋದಿಗೆ ಖೇರಾ ಪ್ರಶ್ನಿಸಿದ್ದಾರೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...