Homeಮುಖಪುಟಅಯೋಧ್ಯೆಯಲ್ಲಿ 'ರಾಮ'ನಿಗಿಂತ 'ಮೋದಿ'ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

ಅಯೋಧ್ಯೆಯಲ್ಲಿ ‘ರಾಮ’ನಿಗಿಂತ ‘ಮೋದಿ’ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮನಿಗಿಂತ ಪ್ರಧಾನಿ ನರೇಂದ್ರ ಮೋದಿಯೇ ಹೆಚ್ಚು ಗೋಚರಿಸುತ್ತಿದ್ದಾರೆ ಎಂದು ಆರ್‌ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಹೇಳಿದ್ದು, ರಾಮಮಂದಿರ ಉದ್ಘಾಟಣೆಯನ್ನು ರಾಜಕೀಯ ಗೊಳಿಸಿದ್ದಕ್ಕೆ ಬಿಜೆಪಿ ಮತ್ತು ಮೋದಿಯನ್ನು ಟೀಕಿಸಿದ್ದಾರೆ.

ಹಿಂದುತ್ವದ ಅಜೆಂಡಾದಲ್ಲಿ ಕೆಲಸ ಮಾಡುತ್ತಿರುವವರು ದೇಶದಲ್ಲಿ ಹಿಂದುಳಿದ ವರ್ಗ, ದಲಿತ ಮತ್ತು ವಂಚಿತ ವರ್ಗದ ಜನರು ಗಳಿಸಿದ್ದ ಸಾಮಾಜಿಕ ನ್ಯಾಯವನ್ನು ಮುಗಿಸಲು ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ಜಾತಿಯಲ್ಲಿ ಹುಟ್ಟಿ ಹಿಂದುತ್ವದ ಅಜೆಂಡಾಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ತಿವಾರಿ ಹೇಳಿದ್ದಾರೆ.

ಬಿಜೆಪಿಯು ಈ ಸಮಾರಂಭದಲ್ಲಿ ಇಡೀ ಸರ್ಕಾರಿ ಯಂತ್ರವನ್ನು ಬಳಸುತ್ತಿದೆ ಇದು ನಮ್ಮ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ಬಿಜೆಪಿ ಮತ್ತು ನರೇಂದ್ರ ಮೋದಿಯವರ ರಾಜಕೀಯ ಪ್ರಚಾರವಾಗಿದೆ. ಏಕೆಂದರೆ ಅವರ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದಾರೆ ಅವರು ರಾಮ ಮತ್ತು ಮಂದಿರದ ಹೆಸರಿನಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ದೇಶದಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದ್ದಾರೆ. ಜನರು ಅವುಗಳನ್ನು ‘ಚಾರ್ ಧಾಮ್’ ಎಂದು ತಿಳಿದಿದ್ದಾರೆ. ನಾಲ್ಕು ಧಾಮಗಳ ಶಂಕರಾಚಾರ್ಯರು ಅಯೋಧ್ಯೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ತಾವು ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಅವುರನ್ನು ಹಿಂದೂ ವಿರೋಧಿ ಎಂದು ಘೋಷಿಸುವಷ್ಟು ಧೈರ್ಯ ಬಿಜೆಪಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಎಐಸಿಸಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿದ ಶಂಕರಾಚಾರ್ಯರ ವಿರುದ್ಧ ಆರೆಸ್ಸೆಸ್-ಬಿಜೆಪಿ ಪ್ರಚಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ಸಂಪೂರ್ಣ ಐಟಿ ಸೆಲ್ ನಾಲ್ಕು ಪೀಠಗಳ ಶಂಕರಾಚಾರ್ಯರ ವಿರುದ್ಧ ಅಭಿಯಾನವನ್ನು ನಡೆಸುತ್ತಿದೆ. ಈ ಇಡೀ ಸಮಾರಂಭದಲ್ಲಿ ಧರ್ಮ, ನೀತಿ ಮತ್ತು ನಂಬಿಕೆ ಎಲ್ಲಿಯೂ ಗೋಚರಿಸುವುದಿಲ್ಲ, ಕೇವಲ ರಾಜಕೀಯ ಗೋಚರಿಸುತ್ತದೆ. ದೇವಸ್ಥಾನದ ಪ್ರತಿಷ್ಠಾಪನೆಗೆ ಜನವರಿ 22ರ ದಿನಾಂಕವನ್ನು ಆಯ್ಕೆ ಮಾಡಲಾಗಿಲ್ಲ. ಬದಲಿಗೆ ಚುನಾವಣೆಗಳನ್ನು ಗಮನಿಸಿಕೊಂಡು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ರಾಜಕೀಯ ಪ್ರಚಾರಕ್ಕಾಗಿ ನಮ್ಮ ದೇವರು ಮತ್ತು ನಂಬಿಕೆಯೊಂದಿಗೆ ಆಟವಾಡುವುದನ್ನು ನಾವು ನೋಡಲಾಗುವುದಿಲ್ಲ. ದೇವಾಲಯದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು, ಆದರೆ ಅದರಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪವನ್ನು ಮಾಡುವುದನ್ನು ಯಾವುದೇ ಭಕ್ತರು ಸಹಿಸುವುದಿಲ್ಲ ಎಂದು ಪವನ್ ಖೇರಾ ಹೇಳಿದ್ದರು. ಮೋದಿ ರಾಮನ ಬೆರಳನ್ನು ಹಿಡಿದು ನಡೆಯುವ ಜಾಹೀರಾತಿನ ಬಗ್ಗೆ ಪ್ರಶ್ನಿಸಿದ ಅವರು, ಭಗವಾನ್ ರಾಮನಿಗೆ ಸಹಾಯ ಮಾಡಲು ನೀವು ಯಾರು, ನೀವು ದೇವರಿಗಿಂತ ಮೇಲಿದ್ದೀರಾ? ಎಂದು ಮೋದಿಗೆ ಖೇರಾ ಪ್ರಶ್ನಿಸಿದ್ದಾರೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...