Homeಮುಖಪುಟಅಯೋಧ್ಯೆಯಲ್ಲಿ 'ರಾಮ'ನಿಗಿಂತ 'ಮೋದಿ'ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

ಅಯೋಧ್ಯೆಯಲ್ಲಿ ‘ರಾಮ’ನಿಗಿಂತ ‘ಮೋದಿ’ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮನಿಗಿಂತ ಪ್ರಧಾನಿ ನರೇಂದ್ರ ಮೋದಿಯೇ ಹೆಚ್ಚು ಗೋಚರಿಸುತ್ತಿದ್ದಾರೆ ಎಂದು ಆರ್‌ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಹೇಳಿದ್ದು, ರಾಮಮಂದಿರ ಉದ್ಘಾಟಣೆಯನ್ನು ರಾಜಕೀಯ ಗೊಳಿಸಿದ್ದಕ್ಕೆ ಬಿಜೆಪಿ ಮತ್ತು ಮೋದಿಯನ್ನು ಟೀಕಿಸಿದ್ದಾರೆ.

ಹಿಂದುತ್ವದ ಅಜೆಂಡಾದಲ್ಲಿ ಕೆಲಸ ಮಾಡುತ್ತಿರುವವರು ದೇಶದಲ್ಲಿ ಹಿಂದುಳಿದ ವರ್ಗ, ದಲಿತ ಮತ್ತು ವಂಚಿತ ವರ್ಗದ ಜನರು ಗಳಿಸಿದ್ದ ಸಾಮಾಜಿಕ ನ್ಯಾಯವನ್ನು ಮುಗಿಸಲು ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ಜಾತಿಯಲ್ಲಿ ಹುಟ್ಟಿ ಹಿಂದುತ್ವದ ಅಜೆಂಡಾಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ತಿವಾರಿ ಹೇಳಿದ್ದಾರೆ.

ಬಿಜೆಪಿಯು ಈ ಸಮಾರಂಭದಲ್ಲಿ ಇಡೀ ಸರ್ಕಾರಿ ಯಂತ್ರವನ್ನು ಬಳಸುತ್ತಿದೆ ಇದು ನಮ್ಮ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ಬಿಜೆಪಿ ಮತ್ತು ನರೇಂದ್ರ ಮೋದಿಯವರ ರಾಜಕೀಯ ಪ್ರಚಾರವಾಗಿದೆ. ಏಕೆಂದರೆ ಅವರ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದಾರೆ ಅವರು ರಾಮ ಮತ್ತು ಮಂದಿರದ ಹೆಸರಿನಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ದೇಶದಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದ್ದಾರೆ. ಜನರು ಅವುಗಳನ್ನು ‘ಚಾರ್ ಧಾಮ್’ ಎಂದು ತಿಳಿದಿದ್ದಾರೆ. ನಾಲ್ಕು ಧಾಮಗಳ ಶಂಕರಾಚಾರ್ಯರು ಅಯೋಧ್ಯೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ತಾವು ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಅವುರನ್ನು ಹಿಂದೂ ವಿರೋಧಿ ಎಂದು ಘೋಷಿಸುವಷ್ಟು ಧೈರ್ಯ ಬಿಜೆಪಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಎಐಸಿಸಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿದ ಶಂಕರಾಚಾರ್ಯರ ವಿರುದ್ಧ ಆರೆಸ್ಸೆಸ್-ಬಿಜೆಪಿ ಪ್ರಚಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ಸಂಪೂರ್ಣ ಐಟಿ ಸೆಲ್ ನಾಲ್ಕು ಪೀಠಗಳ ಶಂಕರಾಚಾರ್ಯರ ವಿರುದ್ಧ ಅಭಿಯಾನವನ್ನು ನಡೆಸುತ್ತಿದೆ. ಈ ಇಡೀ ಸಮಾರಂಭದಲ್ಲಿ ಧರ್ಮ, ನೀತಿ ಮತ್ತು ನಂಬಿಕೆ ಎಲ್ಲಿಯೂ ಗೋಚರಿಸುವುದಿಲ್ಲ, ಕೇವಲ ರಾಜಕೀಯ ಗೋಚರಿಸುತ್ತದೆ. ದೇವಸ್ಥಾನದ ಪ್ರತಿಷ್ಠಾಪನೆಗೆ ಜನವರಿ 22ರ ದಿನಾಂಕವನ್ನು ಆಯ್ಕೆ ಮಾಡಲಾಗಿಲ್ಲ. ಬದಲಿಗೆ ಚುನಾವಣೆಗಳನ್ನು ಗಮನಿಸಿಕೊಂಡು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ರಾಜಕೀಯ ಪ್ರಚಾರಕ್ಕಾಗಿ ನಮ್ಮ ದೇವರು ಮತ್ತು ನಂಬಿಕೆಯೊಂದಿಗೆ ಆಟವಾಡುವುದನ್ನು ನಾವು ನೋಡಲಾಗುವುದಿಲ್ಲ. ದೇವಾಲಯದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು, ಆದರೆ ಅದರಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪವನ್ನು ಮಾಡುವುದನ್ನು ಯಾವುದೇ ಭಕ್ತರು ಸಹಿಸುವುದಿಲ್ಲ ಎಂದು ಪವನ್ ಖೇರಾ ಹೇಳಿದ್ದರು. ಮೋದಿ ರಾಮನ ಬೆರಳನ್ನು ಹಿಡಿದು ನಡೆಯುವ ಜಾಹೀರಾತಿನ ಬಗ್ಗೆ ಪ್ರಶ್ನಿಸಿದ ಅವರು, ಭಗವಾನ್ ರಾಮನಿಗೆ ಸಹಾಯ ಮಾಡಲು ನೀವು ಯಾರು, ನೀವು ದೇವರಿಗಿಂತ ಮೇಲಿದ್ದೀರಾ? ಎಂದು ಮೋದಿಗೆ ಖೇರಾ ಪ್ರಶ್ನಿಸಿದ್ದಾರೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...