Homeಮುಖಪುಟಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ

- Advertisement -
- Advertisement -

ಬಿಹಾರ ಚುನಾವಣೆಯಲ್ಲಿನ ಸೋಲಿನ ನಂತರ ಮಹಾಘಟಬಂಧನ್ ಸೌಹಾರ್ದತೆಯ ನಡುವಿನ ಬಿರುಕುಗಳು ಭಾನುವಾರ ಬೆಳಕಿಗೆ ಬಂದಿದ್ದು, ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾದಳದ (RJD) ಹಿರಿಯ ಮುಖಂಡರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ. ರಾಹುಲ್ ಗಾಂಧಿ ಮೂರು ದಿನಗಳ ಕಾಲ ಬಂದರು, ಪ್ರಿಯಾಂಕಾ ಗಾಂಧಿ ಬರಲೇ ಇಲ್ಲ. ಬಿಹಾರದ ಪರಿಚಯವೇ ಇಲ್ಲದವರು ಇಲ್ಲಿಗೆ ಬಂದರು. ಇದು ಸರಿಯಲ್ಲ” ಎಂದು ಶಿವಾನಂದ್ ತಿವಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

RJD, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಮಹಾ ಮೈತ್ರಿ ಅಥವಾ ಮಹಾಘಟಬಂಧನ್‌ ಬಹುಮತದ ಕೊರತೆಯಿಂದಾಗಿ ಸೋಲನ್ನು ಅನುಭವಿಸಿದೆ. ಚುನಾವಣಾ ಎಕ್ಸಿಟ್‌ ಪೋಲ್ ಸಮೀಕ್ಷೆಗಳು ತಲೆಕೆಳಗಾಗಿವೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

243 ಸ್ಥಾನಗಳ ಪೈಕಿ 70 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 19 ಸ್ಥಾನಗಳನ್ನು ಮಾತ್ರ ಪಡೆದುಕೊಂಡು, ಮೈತ್ರಿಯ ಹಿನ್ನಡೆಗೆ ಕಾರಣವಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವು ವ್ಯಾಪಕ ಟೀಕೆಗೆ ಒಳಗಾಯಿತು.

“ಇದು ಬಿಹಾರದಲ್ಲಿ ಮಾತ್ರ ಅಲ್ಲ ಎಂದು ನಾನು ಭಾವಿಸುತ್ತೇನೆ. ಇತರ ರಾಜ್ಯಗಳಲ್ಲಿಯೂ ಸಹ ಕಾಂಗ್ರೆಸ್ ಗರಿಷ್ಠ ಸಂಖ್ಯೆಯ ಸ್ಥಾನಗಳಿಗೆ ಸ್ಪರ್ಧಿಸಲು ಹೆಚ್ಚಿನ ಒತ್ತು ನೀಡುತ್ತದೆ. ಆದರೆ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವಲ್ಲಿ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಈ ಬಗ್ಗೆ ಯೋಚಿಸಬೇಕು” ಎಂದು ತಿವಾರಿ ಹೇಳಿದರು.

ಇದನ್ನೂ ಓದಿ: ಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

“ಇಲ್ಲಿ ಚುನಾವಣೆಗಳು ಭರದಿಂದ ಸಾಗಿತ್ತು. ಆದರೆ ರಾಹುಲ್ ಗಾಂಧಿ ಶಿಮ್ಲಾದ ಪ್ರಿಯಾಂಕಾ ಜಿ ಅವರ ಮನೆಯಲ್ಲಿ ಪಿಕ್‌ನಿಕ್ ಮಾಡುತ್ತಿದ್ದರು. ಪಕ್ಷವು ಹಾಗೇ ನಡೆಯುತ್ತದೆಯೇ? ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿರುವ ರೀತಿ ಬಿಜೆಪಿಗೆ ಲಾಭವಾಗುತ್ತಿದೆ” ಎಂದು ಆರೋಪಿಸಿದರು.

ಇದೇ ರೀತಿಯ ಅಭಿಪ್ರಾಯವನ್ನು RJD ಮುಖಂಡ ತಾರಿಖ್ ಅನ್ವರ್ ಕೂಡ ವ್ಯಕ್ತಪಡಿಸಿದ್ದರು. ನಿನ್ನೆ ಎನ್‌ಡಿಎ ಕೂಡದಿಂದ ನಿತೀಶ್‌ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಮ್ಮತದಿಂದ ಘೊಷಿಸಲಾಯಿತು. ಇದಾದ ನಂತರ ಈ ಬಿರುಕು ಬೆಳಕಿಗೆ ಬಂದಿದೆ.


ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...