Homeಮುಖಪುಟಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ

- Advertisement -
- Advertisement -

ಬಿಹಾರ ಚುನಾವಣೆಯಲ್ಲಿನ ಸೋಲಿನ ನಂತರ ಮಹಾಘಟಬಂಧನ್ ಸೌಹಾರ್ದತೆಯ ನಡುವಿನ ಬಿರುಕುಗಳು ಭಾನುವಾರ ಬೆಳಕಿಗೆ ಬಂದಿದ್ದು, ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾದಳದ (RJD) ಹಿರಿಯ ಮುಖಂಡರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ. ರಾಹುಲ್ ಗಾಂಧಿ ಮೂರು ದಿನಗಳ ಕಾಲ ಬಂದರು, ಪ್ರಿಯಾಂಕಾ ಗಾಂಧಿ ಬರಲೇ ಇಲ್ಲ. ಬಿಹಾರದ ಪರಿಚಯವೇ ಇಲ್ಲದವರು ಇಲ್ಲಿಗೆ ಬಂದರು. ಇದು ಸರಿಯಲ್ಲ” ಎಂದು ಶಿವಾನಂದ್ ತಿವಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

RJD, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಮಹಾ ಮೈತ್ರಿ ಅಥವಾ ಮಹಾಘಟಬಂಧನ್‌ ಬಹುಮತದ ಕೊರತೆಯಿಂದಾಗಿ ಸೋಲನ್ನು ಅನುಭವಿಸಿದೆ. ಚುನಾವಣಾ ಎಕ್ಸಿಟ್‌ ಪೋಲ್ ಸಮೀಕ್ಷೆಗಳು ತಲೆಕೆಳಗಾಗಿವೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

243 ಸ್ಥಾನಗಳ ಪೈಕಿ 70 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 19 ಸ್ಥಾನಗಳನ್ನು ಮಾತ್ರ ಪಡೆದುಕೊಂಡು, ಮೈತ್ರಿಯ ಹಿನ್ನಡೆಗೆ ಕಾರಣವಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವು ವ್ಯಾಪಕ ಟೀಕೆಗೆ ಒಳಗಾಯಿತು.

“ಇದು ಬಿಹಾರದಲ್ಲಿ ಮಾತ್ರ ಅಲ್ಲ ಎಂದು ನಾನು ಭಾವಿಸುತ್ತೇನೆ. ಇತರ ರಾಜ್ಯಗಳಲ್ಲಿಯೂ ಸಹ ಕಾಂಗ್ರೆಸ್ ಗರಿಷ್ಠ ಸಂಖ್ಯೆಯ ಸ್ಥಾನಗಳಿಗೆ ಸ್ಪರ್ಧಿಸಲು ಹೆಚ್ಚಿನ ಒತ್ತು ನೀಡುತ್ತದೆ. ಆದರೆ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವಲ್ಲಿ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಈ ಬಗ್ಗೆ ಯೋಚಿಸಬೇಕು” ಎಂದು ತಿವಾರಿ ಹೇಳಿದರು.

ಇದನ್ನೂ ಓದಿ: ಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

“ಇಲ್ಲಿ ಚುನಾವಣೆಗಳು ಭರದಿಂದ ಸಾಗಿತ್ತು. ಆದರೆ ರಾಹುಲ್ ಗಾಂಧಿ ಶಿಮ್ಲಾದ ಪ್ರಿಯಾಂಕಾ ಜಿ ಅವರ ಮನೆಯಲ್ಲಿ ಪಿಕ್‌ನಿಕ್ ಮಾಡುತ್ತಿದ್ದರು. ಪಕ್ಷವು ಹಾಗೇ ನಡೆಯುತ್ತದೆಯೇ? ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿರುವ ರೀತಿ ಬಿಜೆಪಿಗೆ ಲಾಭವಾಗುತ್ತಿದೆ” ಎಂದು ಆರೋಪಿಸಿದರು.

ಇದೇ ರೀತಿಯ ಅಭಿಪ್ರಾಯವನ್ನು RJD ಮುಖಂಡ ತಾರಿಖ್ ಅನ್ವರ್ ಕೂಡ ವ್ಯಕ್ತಪಡಿಸಿದ್ದರು. ನಿನ್ನೆ ಎನ್‌ಡಿಎ ಕೂಡದಿಂದ ನಿತೀಶ್‌ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಮ್ಮತದಿಂದ ಘೊಷಿಸಲಾಯಿತು. ಇದಾದ ನಂತರ ಈ ಬಿರುಕು ಬೆಳಕಿಗೆ ಬಂದಿದೆ.


ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...