Homeಮುಖಪುಟಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಎಂದು ಶಿವಸೇನೆ ಸೂಚಿಸಿದೆ

- Advertisement -
- Advertisement -

ಸಂಖ್ಯಾಶಾಸ್ತ್ರೀಯ ಆಟದಲ್ಲಿ, ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿರಬಹುದು ಆದರೆ ನಿಜವಾದ ವಿಜೇತ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಆಗಿದ್ದಾರೆ, ಅವರ ಪಕ್ಷವು ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಿವಸೇನೆ ತಿಳಿಸಿದೆ .

ಶಿವಸೇನೆ, ಪಕ್ಷದ ಮುಖವಾಣಿ ಸಾಮ್ನಾ ಮೂಲಕ, “ಬಿಹಾರದ ನಾಯಕತ್ವವು ಅಂತಿಮವಾಗಿ ಬಿಜೆಪಿ ಕೈಗೆ ಸಿಕ್ಕಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದಲ್ಲಿ ಬಿಜೆಪಿ ದೊಡ್ಡ ಜಯ ಸಾಧಿಸಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ. ಅಂಕಿಅಂಶಗಳ ಆಟದಲ್ಲಿ, ’ಎನ್‌ಡಿಎ’ ವಿಜಯಶಾಲಿಯಾಗಿದೆ ಆದರೆ ನಿಜವಾದ ವಿಜೇತ 31 ವರ್ಷದ ತೇಜಶ್ವಿ ಯಾದವ್” ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

“ತೇಜಸ್ವಿಯ ರಾಷ್ಟ್ರೀಯ ಜನತಾದಳ ಪಕ್ಷವು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಾಬೀತಾಯಿತು. ಬಿಜೆಪಿಗೆ ಈ ಅದೃಷ್ಟವನ್ನು ಪಡೆಯಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಧಿಕಾರವನ್ನು ಉಳಿಸಿದ ಸಂತೋಷವನ್ನು ಆಚರಿಸಬಹುದು ಆದರೆ ಗೆಲುವು ತೇಜಶ್ವಿ ಯಾದವ್ ಅವರ ತಲೆಯ ಮೇಲಿದೆ” ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

243 ಶಾಸಕರಿರುವ ವಿಧಾನ ಸಭೆಯಲ್ಲಿ, ಎನ್‌ಡಿಎಗೆ 125 ಸ್ಥಾನಗಳು ದೊರೆತಿದೆ, ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಗೆಲುವು ಎಷ್ಟು ಉತ್ತಮವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಅದು ಹೇಳಿದೆ.

“ತೇಜಶ್ವಿ ಯಾದವ್ ಅವರ ಮಹಾಘಟಬಂಧನ್ 110 ಸ್ಥಾನಗಳನ್ನು ಪಡೆದಿದ್ದಾರೆ. ಮತ ಎಣಿಕೆಯ ಕೊನೆಯ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ತೇಜಸ್ವಿ ಅವರ ಪಕ್ಷ ಆರೋಪಿಸಿದೆ. ಆರ್‌‌ಜೆಡಿ 119 ವಿಜೇತ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ಆದರೆ ಚುನಾವಣಾ ಅಧಿಕಾರಿಗಳು ನಿತೀಶ್  ಕುಮಾರ್‌ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೇಜಶ್ವಿ ಯಾದವ್ ಆರೋಪಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ, ಆದರೆ ಜನರ ನಡುವಿನ ಟ್ರೆಂಡ್ ಏನು?” ಎಂದು ಶಿವಸೇನೆ ಬಿಹಾರದ ಜನತೆ ತೇಜಸ್ವಿ ಯಾದವ್ ಪರ ಇದ್ದಾರೆ ಎಂದು ಸೂಚಿಸಿದೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

“ಸ್ಪಷ್ಟವಾಗಿ ಹೇಳುವುದಾದರೆ, ಬಿಹಾರದಲ್ಲಿ ಈ ಎರಡು ವಿರುದ್ಧ ಮನಸ್ಸಿನ ಪಕ್ಷಗಳಾದ ಬಿಜೆಪಿ ಮತ್ತು ರಾಷ್ಟ್ರೀಯ ಜನತಾದಳ ಯಶಸ್ಸು ಗಳಿಸಿವೆ. ಇದರಲ್ಲಿ ನಿತೀಶ್ ಕುಮಾರ್ ಮತ್ತು ಅವರ ಪಕ್ಷ ಎಲ್ಲಿಯೂ ಕಾಣುವುದಿಲ್ಲ. ಜನರು ನಿತೀಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ಮುಖ್ಯಮಂತ್ರಿ ಹುದ್ದೆಯತ್ತ ಹೊರಟಿದ್ದಾರೆ, ಇದು ಜನಾಭಿಪ್ರಾಯಕ್ಕೆ ಮಾಡುವ ಅವಮಾನ” ಎಂದು ಶಿವಸೇನೆ ಹೇಳಿದೆ.

ಜೆಡಿಯು ಅಭ್ಯರ್ಥಿಗಳ ವಿರುದ್ಧ ನಿಂತಿದ್ದ ಎಲ್‌ಜೆಪಿ ಅಭ್ಯರ್ಥಿಗಳಿಂದಾಗಿ ನಿತೀಶ್ ಕುಮಾರ್ ಅವರ ಇಪ್ಪತ್ತು ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು.

“ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಮತ್ತು ಚಿರಾಗ್ ಇನ್ನೂ ಎನ್‌ಡಿಎಯ ಮಿತ್ರರಾಗಿದ್ದಾರೆ” ಎಂದಿರುವ ಶಿವಸೇನೆ ಜೆಡಿಯು ಸೋಲಿಗೆ ಬಿಜೆಪಿ ತಂತ್ರ ರೂಪಿಸಿತ್ತು ಎಂದು ಸೂಚಿಸಿದೆ.

2020 ರ ಬಿಹಾರ ಚುನಾವಣೆಯ 243 ಸ್ಥಾನಗಳಲ್ಲಿ 125 ಸ್ಥಾನಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಪಡೆದಿದ್ದರೆ, 110 ಸ್ಥಾನಗಳಲ್ಲಿ ಪ್ರತಿಸ್ಪರ್ಧಿ ಮಹಾಘಟಬಂಧನ್ ಪಡೆಯಿತು. ಇದರಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳವು 75 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಇದನ್ನೂಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...