Homeಮುಖಪುಟಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಎಂದು ಶಿವಸೇನೆ ಸೂಚಿಸಿದೆ

- Advertisement -
- Advertisement -

ಸಂಖ್ಯಾಶಾಸ್ತ್ರೀಯ ಆಟದಲ್ಲಿ, ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿರಬಹುದು ಆದರೆ ನಿಜವಾದ ವಿಜೇತ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಆಗಿದ್ದಾರೆ, ಅವರ ಪಕ್ಷವು ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಿವಸೇನೆ ತಿಳಿಸಿದೆ .

ಶಿವಸೇನೆ, ಪಕ್ಷದ ಮುಖವಾಣಿ ಸಾಮ್ನಾ ಮೂಲಕ, “ಬಿಹಾರದ ನಾಯಕತ್ವವು ಅಂತಿಮವಾಗಿ ಬಿಜೆಪಿ ಕೈಗೆ ಸಿಕ್ಕಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದಲ್ಲಿ ಬಿಜೆಪಿ ದೊಡ್ಡ ಜಯ ಸಾಧಿಸಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ. ಅಂಕಿಅಂಶಗಳ ಆಟದಲ್ಲಿ, ’ಎನ್‌ಡಿಎ’ ವಿಜಯಶಾಲಿಯಾಗಿದೆ ಆದರೆ ನಿಜವಾದ ವಿಜೇತ 31 ವರ್ಷದ ತೇಜಶ್ವಿ ಯಾದವ್” ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

“ತೇಜಸ್ವಿಯ ರಾಷ್ಟ್ರೀಯ ಜನತಾದಳ ಪಕ್ಷವು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಾಬೀತಾಯಿತು. ಬಿಜೆಪಿಗೆ ಈ ಅದೃಷ್ಟವನ್ನು ಪಡೆಯಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಧಿಕಾರವನ್ನು ಉಳಿಸಿದ ಸಂತೋಷವನ್ನು ಆಚರಿಸಬಹುದು ಆದರೆ ಗೆಲುವು ತೇಜಶ್ವಿ ಯಾದವ್ ಅವರ ತಲೆಯ ಮೇಲಿದೆ” ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

243 ಶಾಸಕರಿರುವ ವಿಧಾನ ಸಭೆಯಲ್ಲಿ, ಎನ್‌ಡಿಎಗೆ 125 ಸ್ಥಾನಗಳು ದೊರೆತಿದೆ, ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಗೆಲುವು ಎಷ್ಟು ಉತ್ತಮವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಅದು ಹೇಳಿದೆ.

“ತೇಜಶ್ವಿ ಯಾದವ್ ಅವರ ಮಹಾಘಟಬಂಧನ್ 110 ಸ್ಥಾನಗಳನ್ನು ಪಡೆದಿದ್ದಾರೆ. ಮತ ಎಣಿಕೆಯ ಕೊನೆಯ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ತೇಜಸ್ವಿ ಅವರ ಪಕ್ಷ ಆರೋಪಿಸಿದೆ. ಆರ್‌‌ಜೆಡಿ 119 ವಿಜೇತ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ಆದರೆ ಚುನಾವಣಾ ಅಧಿಕಾರಿಗಳು ನಿತೀಶ್  ಕುಮಾರ್‌ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೇಜಶ್ವಿ ಯಾದವ್ ಆರೋಪಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ, ಆದರೆ ಜನರ ನಡುವಿನ ಟ್ರೆಂಡ್ ಏನು?” ಎಂದು ಶಿವಸೇನೆ ಬಿಹಾರದ ಜನತೆ ತೇಜಸ್ವಿ ಯಾದವ್ ಪರ ಇದ್ದಾರೆ ಎಂದು ಸೂಚಿಸಿದೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

“ಸ್ಪಷ್ಟವಾಗಿ ಹೇಳುವುದಾದರೆ, ಬಿಹಾರದಲ್ಲಿ ಈ ಎರಡು ವಿರುದ್ಧ ಮನಸ್ಸಿನ ಪಕ್ಷಗಳಾದ ಬಿಜೆಪಿ ಮತ್ತು ರಾಷ್ಟ್ರೀಯ ಜನತಾದಳ ಯಶಸ್ಸು ಗಳಿಸಿವೆ. ಇದರಲ್ಲಿ ನಿತೀಶ್ ಕುಮಾರ್ ಮತ್ತು ಅವರ ಪಕ್ಷ ಎಲ್ಲಿಯೂ ಕಾಣುವುದಿಲ್ಲ. ಜನರು ನಿತೀಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ಮುಖ್ಯಮಂತ್ರಿ ಹುದ್ದೆಯತ್ತ ಹೊರಟಿದ್ದಾರೆ, ಇದು ಜನಾಭಿಪ್ರಾಯಕ್ಕೆ ಮಾಡುವ ಅವಮಾನ” ಎಂದು ಶಿವಸೇನೆ ಹೇಳಿದೆ.

ಜೆಡಿಯು ಅಭ್ಯರ್ಥಿಗಳ ವಿರುದ್ಧ ನಿಂತಿದ್ದ ಎಲ್‌ಜೆಪಿ ಅಭ್ಯರ್ಥಿಗಳಿಂದಾಗಿ ನಿತೀಶ್ ಕುಮಾರ್ ಅವರ ಇಪ್ಪತ್ತು ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು.

“ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಮತ್ತು ಚಿರಾಗ್ ಇನ್ನೂ ಎನ್‌ಡಿಎಯ ಮಿತ್ರರಾಗಿದ್ದಾರೆ” ಎಂದಿರುವ ಶಿವಸೇನೆ ಜೆಡಿಯು ಸೋಲಿಗೆ ಬಿಜೆಪಿ ತಂತ್ರ ರೂಪಿಸಿತ್ತು ಎಂದು ಸೂಚಿಸಿದೆ.

2020 ರ ಬಿಹಾರ ಚುನಾವಣೆಯ 243 ಸ್ಥಾನಗಳಲ್ಲಿ 125 ಸ್ಥಾನಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಪಡೆದಿದ್ದರೆ, 110 ಸ್ಥಾನಗಳಲ್ಲಿ ಪ್ರತಿಸ್ಪರ್ಧಿ ಮಹಾಘಟಬಂಧನ್ ಪಡೆಯಿತು. ಇದರಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳವು 75 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಇದನ್ನೂಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...