Homeಮುಖಪುಟಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಎಂದು ಶಿವಸೇನೆ ಸೂಚಿಸಿದೆ

- Advertisement -
- Advertisement -

ಸಂಖ್ಯಾಶಾಸ್ತ್ರೀಯ ಆಟದಲ್ಲಿ, ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿರಬಹುದು ಆದರೆ ನಿಜವಾದ ವಿಜೇತ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಆಗಿದ್ದಾರೆ, ಅವರ ಪಕ್ಷವು ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಿವಸೇನೆ ತಿಳಿಸಿದೆ .

ಶಿವಸೇನೆ, ಪಕ್ಷದ ಮುಖವಾಣಿ ಸಾಮ್ನಾ ಮೂಲಕ, “ಬಿಹಾರದ ನಾಯಕತ್ವವು ಅಂತಿಮವಾಗಿ ಬಿಜೆಪಿ ಕೈಗೆ ಸಿಕ್ಕಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದಲ್ಲಿ ಬಿಜೆಪಿ ದೊಡ್ಡ ಜಯ ಸಾಧಿಸಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ. ಅಂಕಿಅಂಶಗಳ ಆಟದಲ್ಲಿ, ’ಎನ್‌ಡಿಎ’ ವಿಜಯಶಾಲಿಯಾಗಿದೆ ಆದರೆ ನಿಜವಾದ ವಿಜೇತ 31 ವರ್ಷದ ತೇಜಶ್ವಿ ಯಾದವ್” ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

“ತೇಜಸ್ವಿಯ ರಾಷ್ಟ್ರೀಯ ಜನತಾದಳ ಪಕ್ಷವು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಾಬೀತಾಯಿತು. ಬಿಜೆಪಿಗೆ ಈ ಅದೃಷ್ಟವನ್ನು ಪಡೆಯಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಧಿಕಾರವನ್ನು ಉಳಿಸಿದ ಸಂತೋಷವನ್ನು ಆಚರಿಸಬಹುದು ಆದರೆ ಗೆಲುವು ತೇಜಶ್ವಿ ಯಾದವ್ ಅವರ ತಲೆಯ ಮೇಲಿದೆ” ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

243 ಶಾಸಕರಿರುವ ವಿಧಾನ ಸಭೆಯಲ್ಲಿ, ಎನ್‌ಡಿಎಗೆ 125 ಸ್ಥಾನಗಳು ದೊರೆತಿದೆ, ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಗೆಲುವು ಎಷ್ಟು ಉತ್ತಮವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಅದು ಹೇಳಿದೆ.

“ತೇಜಶ್ವಿ ಯಾದವ್ ಅವರ ಮಹಾಘಟಬಂಧನ್ 110 ಸ್ಥಾನಗಳನ್ನು ಪಡೆದಿದ್ದಾರೆ. ಮತ ಎಣಿಕೆಯ ಕೊನೆಯ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ತೇಜಸ್ವಿ ಅವರ ಪಕ್ಷ ಆರೋಪಿಸಿದೆ. ಆರ್‌‌ಜೆಡಿ 119 ವಿಜೇತ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ಆದರೆ ಚುನಾವಣಾ ಅಧಿಕಾರಿಗಳು ನಿತೀಶ್  ಕುಮಾರ್‌ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೇಜಶ್ವಿ ಯಾದವ್ ಆರೋಪಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ, ಆದರೆ ಜನರ ನಡುವಿನ ಟ್ರೆಂಡ್ ಏನು?” ಎಂದು ಶಿವಸೇನೆ ಬಿಹಾರದ ಜನತೆ ತೇಜಸ್ವಿ ಯಾದವ್ ಪರ ಇದ್ದಾರೆ ಎಂದು ಸೂಚಿಸಿದೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

“ಸ್ಪಷ್ಟವಾಗಿ ಹೇಳುವುದಾದರೆ, ಬಿಹಾರದಲ್ಲಿ ಈ ಎರಡು ವಿರುದ್ಧ ಮನಸ್ಸಿನ ಪಕ್ಷಗಳಾದ ಬಿಜೆಪಿ ಮತ್ತು ರಾಷ್ಟ್ರೀಯ ಜನತಾದಳ ಯಶಸ್ಸು ಗಳಿಸಿವೆ. ಇದರಲ್ಲಿ ನಿತೀಶ್ ಕುಮಾರ್ ಮತ್ತು ಅವರ ಪಕ್ಷ ಎಲ್ಲಿಯೂ ಕಾಣುವುದಿಲ್ಲ. ಜನರು ನಿತೀಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ಮುಖ್ಯಮಂತ್ರಿ ಹುದ್ದೆಯತ್ತ ಹೊರಟಿದ್ದಾರೆ, ಇದು ಜನಾಭಿಪ್ರಾಯಕ್ಕೆ ಮಾಡುವ ಅವಮಾನ” ಎಂದು ಶಿವಸೇನೆ ಹೇಳಿದೆ.

ಜೆಡಿಯು ಅಭ್ಯರ್ಥಿಗಳ ವಿರುದ್ಧ ನಿಂತಿದ್ದ ಎಲ್‌ಜೆಪಿ ಅಭ್ಯರ್ಥಿಗಳಿಂದಾಗಿ ನಿತೀಶ್ ಕುಮಾರ್ ಅವರ ಇಪ್ಪತ್ತು ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು.

“ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಮತ್ತು ಚಿರಾಗ್ ಇನ್ನೂ ಎನ್‌ಡಿಎಯ ಮಿತ್ರರಾಗಿದ್ದಾರೆ” ಎಂದಿರುವ ಶಿವಸೇನೆ ಜೆಡಿಯು ಸೋಲಿಗೆ ಬಿಜೆಪಿ ತಂತ್ರ ರೂಪಿಸಿತ್ತು ಎಂದು ಸೂಚಿಸಿದೆ.

2020 ರ ಬಿಹಾರ ಚುನಾವಣೆಯ 243 ಸ್ಥಾನಗಳಲ್ಲಿ 125 ಸ್ಥಾನಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಪಡೆದಿದ್ದರೆ, 110 ಸ್ಥಾನಗಳಲ್ಲಿ ಪ್ರತಿಸ್ಪರ್ಧಿ ಮಹಾಘಟಬಂಧನ್ ಪಡೆಯಿತು. ಇದರಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳವು 75 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಇದನ್ನೂಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...