Homeಮುಖಪುಟಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಎಂದು ಶಿವಸೇನೆ ಸೂಚಿಸಿದೆ

- Advertisement -
- Advertisement -

ಸಂಖ್ಯಾಶಾಸ್ತ್ರೀಯ ಆಟದಲ್ಲಿ, ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿರಬಹುದು ಆದರೆ ನಿಜವಾದ ವಿಜೇತ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಆಗಿದ್ದಾರೆ, ಅವರ ಪಕ್ಷವು ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಿವಸೇನೆ ತಿಳಿಸಿದೆ .

ಶಿವಸೇನೆ, ಪಕ್ಷದ ಮುಖವಾಣಿ ಸಾಮ್ನಾ ಮೂಲಕ, “ಬಿಹಾರದ ನಾಯಕತ್ವವು ಅಂತಿಮವಾಗಿ ಬಿಜೆಪಿ ಕೈಗೆ ಸಿಕ್ಕಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದಲ್ಲಿ ಬಿಜೆಪಿ ದೊಡ್ಡ ಜಯ ಸಾಧಿಸಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ. ಅಂಕಿಅಂಶಗಳ ಆಟದಲ್ಲಿ, ’ಎನ್‌ಡಿಎ’ ವಿಜಯಶಾಲಿಯಾಗಿದೆ ಆದರೆ ನಿಜವಾದ ವಿಜೇತ 31 ವರ್ಷದ ತೇಜಶ್ವಿ ಯಾದವ್” ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

“ತೇಜಸ್ವಿಯ ರಾಷ್ಟ್ರೀಯ ಜನತಾದಳ ಪಕ್ಷವು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಾಬೀತಾಯಿತು. ಬಿಜೆಪಿಗೆ ಈ ಅದೃಷ್ಟವನ್ನು ಪಡೆಯಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಧಿಕಾರವನ್ನು ಉಳಿಸಿದ ಸಂತೋಷವನ್ನು ಆಚರಿಸಬಹುದು ಆದರೆ ಗೆಲುವು ತೇಜಶ್ವಿ ಯಾದವ್ ಅವರ ತಲೆಯ ಮೇಲಿದೆ” ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

243 ಶಾಸಕರಿರುವ ವಿಧಾನ ಸಭೆಯಲ್ಲಿ, ಎನ್‌ಡಿಎಗೆ 125 ಸ್ಥಾನಗಳು ದೊರೆತಿದೆ, ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಗೆಲುವು ಎಷ್ಟು ಉತ್ತಮವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಅದು ಹೇಳಿದೆ.

“ತೇಜಶ್ವಿ ಯಾದವ್ ಅವರ ಮಹಾಘಟಬಂಧನ್ 110 ಸ್ಥಾನಗಳನ್ನು ಪಡೆದಿದ್ದಾರೆ. ಮತ ಎಣಿಕೆಯ ಕೊನೆಯ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ತೇಜಸ್ವಿ ಅವರ ಪಕ್ಷ ಆರೋಪಿಸಿದೆ. ಆರ್‌‌ಜೆಡಿ 119 ವಿಜೇತ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ಆದರೆ ಚುನಾವಣಾ ಅಧಿಕಾರಿಗಳು ನಿತೀಶ್  ಕುಮಾರ್‌ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೇಜಶ್ವಿ ಯಾದವ್ ಆರೋಪಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ, ಆದರೆ ಜನರ ನಡುವಿನ ಟ್ರೆಂಡ್ ಏನು?” ಎಂದು ಶಿವಸೇನೆ ಬಿಹಾರದ ಜನತೆ ತೇಜಸ್ವಿ ಯಾದವ್ ಪರ ಇದ್ದಾರೆ ಎಂದು ಸೂಚಿಸಿದೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

“ಸ್ಪಷ್ಟವಾಗಿ ಹೇಳುವುದಾದರೆ, ಬಿಹಾರದಲ್ಲಿ ಈ ಎರಡು ವಿರುದ್ಧ ಮನಸ್ಸಿನ ಪಕ್ಷಗಳಾದ ಬಿಜೆಪಿ ಮತ್ತು ರಾಷ್ಟ್ರೀಯ ಜನತಾದಳ ಯಶಸ್ಸು ಗಳಿಸಿವೆ. ಇದರಲ್ಲಿ ನಿತೀಶ್ ಕುಮಾರ್ ಮತ್ತು ಅವರ ಪಕ್ಷ ಎಲ್ಲಿಯೂ ಕಾಣುವುದಿಲ್ಲ. ಜನರು ನಿತೀಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ಮುಖ್ಯಮಂತ್ರಿ ಹುದ್ದೆಯತ್ತ ಹೊರಟಿದ್ದಾರೆ, ಇದು ಜನಾಭಿಪ್ರಾಯಕ್ಕೆ ಮಾಡುವ ಅವಮಾನ” ಎಂದು ಶಿವಸೇನೆ ಹೇಳಿದೆ.

ಜೆಡಿಯು ಅಭ್ಯರ್ಥಿಗಳ ವಿರುದ್ಧ ನಿಂತಿದ್ದ ಎಲ್‌ಜೆಪಿ ಅಭ್ಯರ್ಥಿಗಳಿಂದಾಗಿ ನಿತೀಶ್ ಕುಮಾರ್ ಅವರ ಇಪ್ಪತ್ತು ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು.

“ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಮತ್ತು ಚಿರಾಗ್ ಇನ್ನೂ ಎನ್‌ಡಿಎಯ ಮಿತ್ರರಾಗಿದ್ದಾರೆ” ಎಂದಿರುವ ಶಿವಸೇನೆ ಜೆಡಿಯು ಸೋಲಿಗೆ ಬಿಜೆಪಿ ತಂತ್ರ ರೂಪಿಸಿತ್ತು ಎಂದು ಸೂಚಿಸಿದೆ.

2020 ರ ಬಿಹಾರ ಚುನಾವಣೆಯ 243 ಸ್ಥಾನಗಳಲ್ಲಿ 125 ಸ್ಥಾನಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಪಡೆದಿದ್ದರೆ, 110 ಸ್ಥಾನಗಳಲ್ಲಿ ಪ್ರತಿಸ್ಪರ್ಧಿ ಮಹಾಘಟಬಂಧನ್ ಪಡೆಯಿತು. ಇದರಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳವು 75 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಇದನ್ನೂಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...