Homeಮುಖಪುಟಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಎಂದು ಶಿವಸೇನೆ ಸೂಚಿಸಿದೆ

- Advertisement -
- Advertisement -

ಸಂಖ್ಯಾಶಾಸ್ತ್ರೀಯ ಆಟದಲ್ಲಿ, ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿರಬಹುದು ಆದರೆ ನಿಜವಾದ ವಿಜೇತ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಆಗಿದ್ದಾರೆ, ಅವರ ಪಕ್ಷವು ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಿವಸೇನೆ ತಿಳಿಸಿದೆ .

ಶಿವಸೇನೆ, ಪಕ್ಷದ ಮುಖವಾಣಿ ಸಾಮ್ನಾ ಮೂಲಕ, “ಬಿಹಾರದ ನಾಯಕತ್ವವು ಅಂತಿಮವಾಗಿ ಬಿಜೆಪಿ ಕೈಗೆ ಸಿಕ್ಕಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದಲ್ಲಿ ಬಿಜೆಪಿ ದೊಡ್ಡ ಜಯ ಸಾಧಿಸಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ. ಅಂಕಿಅಂಶಗಳ ಆಟದಲ್ಲಿ, ’ಎನ್‌ಡಿಎ’ ವಿಜಯಶಾಲಿಯಾಗಿದೆ ಆದರೆ ನಿಜವಾದ ವಿಜೇತ 31 ವರ್ಷದ ತೇಜಶ್ವಿ ಯಾದವ್” ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

“ತೇಜಸ್ವಿಯ ರಾಷ್ಟ್ರೀಯ ಜನತಾದಳ ಪಕ್ಷವು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಾಬೀತಾಯಿತು. ಬಿಜೆಪಿಗೆ ಈ ಅದೃಷ್ಟವನ್ನು ಪಡೆಯಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಧಿಕಾರವನ್ನು ಉಳಿಸಿದ ಸಂತೋಷವನ್ನು ಆಚರಿಸಬಹುದು ಆದರೆ ಗೆಲುವು ತೇಜಶ್ವಿ ಯಾದವ್ ಅವರ ತಲೆಯ ಮೇಲಿದೆ” ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

243 ಶಾಸಕರಿರುವ ವಿಧಾನ ಸಭೆಯಲ್ಲಿ, ಎನ್‌ಡಿಎಗೆ 125 ಸ್ಥಾನಗಳು ದೊರೆತಿದೆ, ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಗೆಲುವು ಎಷ್ಟು ಉತ್ತಮವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಅದು ಹೇಳಿದೆ.

“ತೇಜಶ್ವಿ ಯಾದವ್ ಅವರ ಮಹಾಘಟಬಂಧನ್ 110 ಸ್ಥಾನಗಳನ್ನು ಪಡೆದಿದ್ದಾರೆ. ಮತ ಎಣಿಕೆಯ ಕೊನೆಯ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ತೇಜಸ್ವಿ ಅವರ ಪಕ್ಷ ಆರೋಪಿಸಿದೆ. ಆರ್‌‌ಜೆಡಿ 119 ವಿಜೇತ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ಆದರೆ ಚುನಾವಣಾ ಅಧಿಕಾರಿಗಳು ನಿತೀಶ್  ಕುಮಾರ್‌ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೇಜಶ್ವಿ ಯಾದವ್ ಆರೋಪಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ, ಆದರೆ ಜನರ ನಡುವಿನ ಟ್ರೆಂಡ್ ಏನು?” ಎಂದು ಶಿವಸೇನೆ ಬಿಹಾರದ ಜನತೆ ತೇಜಸ್ವಿ ಯಾದವ್ ಪರ ಇದ್ದಾರೆ ಎಂದು ಸೂಚಿಸಿದೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

“ಸ್ಪಷ್ಟವಾಗಿ ಹೇಳುವುದಾದರೆ, ಬಿಹಾರದಲ್ಲಿ ಈ ಎರಡು ವಿರುದ್ಧ ಮನಸ್ಸಿನ ಪಕ್ಷಗಳಾದ ಬಿಜೆಪಿ ಮತ್ತು ರಾಷ್ಟ್ರೀಯ ಜನತಾದಳ ಯಶಸ್ಸು ಗಳಿಸಿವೆ. ಇದರಲ್ಲಿ ನಿತೀಶ್ ಕುಮಾರ್ ಮತ್ತು ಅವರ ಪಕ್ಷ ಎಲ್ಲಿಯೂ ಕಾಣುವುದಿಲ್ಲ. ಜನರು ನಿತೀಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ಮುಖ್ಯಮಂತ್ರಿ ಹುದ್ದೆಯತ್ತ ಹೊರಟಿದ್ದಾರೆ, ಇದು ಜನಾಭಿಪ್ರಾಯಕ್ಕೆ ಮಾಡುವ ಅವಮಾನ” ಎಂದು ಶಿವಸೇನೆ ಹೇಳಿದೆ.

ಜೆಡಿಯು ಅಭ್ಯರ್ಥಿಗಳ ವಿರುದ್ಧ ನಿಂತಿದ್ದ ಎಲ್‌ಜೆಪಿ ಅಭ್ಯರ್ಥಿಗಳಿಂದಾಗಿ ನಿತೀಶ್ ಕುಮಾರ್ ಅವರ ಇಪ್ಪತ್ತು ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು.

“ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಮತ್ತು ಚಿರಾಗ್ ಇನ್ನೂ ಎನ್‌ಡಿಎಯ ಮಿತ್ರರಾಗಿದ್ದಾರೆ” ಎಂದಿರುವ ಶಿವಸೇನೆ ಜೆಡಿಯು ಸೋಲಿಗೆ ಬಿಜೆಪಿ ತಂತ್ರ ರೂಪಿಸಿತ್ತು ಎಂದು ಸೂಚಿಸಿದೆ.

2020 ರ ಬಿಹಾರ ಚುನಾವಣೆಯ 243 ಸ್ಥಾನಗಳಲ್ಲಿ 125 ಸ್ಥಾನಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಪಡೆದಿದ್ದರೆ, 110 ಸ್ಥಾನಗಳಲ್ಲಿ ಪ್ರತಿಸ್ಪರ್ಧಿ ಮಹಾಘಟಬಂಧನ್ ಪಡೆಯಿತು. ಇದರಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳವು 75 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಇದನ್ನೂಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...