Homeಮುಖಪುಟಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ನಮ್ಮದ್ದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ - ತೇಜಸ್ವಿ ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ದ ನಾಯಕ ತೇಜಸ್ವಿ ಯಾದವ್ ಅಸ್ಸಾಂ ಚುನಾವಣೆಯಲ್ಲಿ ಪಕ್ಷವನ್ನು ಕಣಕ್ಕಿಳಿಸಲು ಸಜ್ಜಾಗುತ್ತಿದ್ದಾರೆಂಬ ಊಹಾಪೋಹಗಳು ಸುಳಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಚುನಾವಣಾ ಆಯೋಗ ಅಸ್ಸಾಂ ಚುನಾವಣಾ ದಿನಾಂಕ ಪ್ರಕಟಿಸುತ್ತಿದ್ದಂತೆ, ತೇಜಸ್ವಿ ಯಾದವ್ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ.

2020ರ ಅಕ್ಟೋಬರ್-ನವೆಂಬರ್ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬರದಿದ್ದರೂ ಒಂದು ಪ್ರಭಲ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಣ್ಣ ಭಯವನ್ನು ಸೃಷ್ಟಿಸಿರುವುದು ಸುಳ್ಳಲ್ಲ.

ಅಸ್ಸಾಂನಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಮತದಾನ ನಡೆಯಲಿದೆ. ’ನಮ್ಮದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ ಎಂದು ತೇಜಶ್ವಿ ಯಾದವ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಆರ್‌ಜೆಡಿ ಮೂಲಗಳ ಪ್ರಕಾರ, ಅಸ್ಸಾಂನಲ್ಲಿ ಸ್ಪರ್ಧಿಸುವ ಸಾಧ್ಯತೆಯಿದ್ದು, ತೇಜಸ್ವಿ ಯಾದವ್ ಮಿತ್ರಪಕ್ಷಗಳನ್ನು ಹುಡುಕುತ್ತಿದ್ದಾರೆ ಎಂದಿದೆ. ಬಿಹಾರದಂತೆಯೇ, ಅಸ್ಸಾಂನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಆರು ಪಕ್ಷಗಳ ಮಹಾಘಟಬಂಧನ್ ಇದೆ. ಹೀಗಾಗಿ ಅಸ್ಸಾಂನಲ್ಲಿ ಯಾವುದೇ ನೆಲೆ ಇಲ್ಲದಿದ್ದರೂ ಆರ್‌ಜೆಡಿ ಈ ಮಹಾಘಟಬಂಧನ್‌ಗೆ ಸೇರಲಿದೆ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ.

ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾಗಿ ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಿಹಾರ ಮೂಲದ ಆರ್‌ಜೆಡಿ ಪಕ್ಷದ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರ ಕಾಲದಿಂದಲೂ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದೆ. ಸದ್ಯ ತೇಜಸ್ವಿ ಯಾದವ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. “ನಾವು ಕಾಂಗ್ರೆಸ್‌ನೊಂದಿಗೆ ಉತ್ತಮ ಮೈತ್ರಿ ಹೊಂದಿದ್ದೇವೆ. ಮೈತ್ರಿ ಕುರಿತು ನಾವು ಅವರೊಂದಿಗೆ ಮಾತನಾಡಿದ್ದೇವೆ” ಎಂದು ಮಾತುಕತೆ ಬಳಿಕ ಹೇಳಿದ್ದಾರೆ.

ಇತ್ತ ಕಾಂಗ್ರೆಸ್ ಮೂಲಗಳು ಹೇಳುವಂತೆ, ಅಸ್ಸಾಂನ ಕೆಲವು ಬೃಹತ್ ಭೋಜ್‌ಪುರಿ ಮತಬ್ಯಾಂಕ್‌ಗಳಲ್ಲಿ ಬಿಜೆಪಿಯತ್ತ ಸಾಗಿರುವ ಮತದಾರರಿರುವ ಕಡೆಗಳಲ್ಲಿ ತೇಜಸ್ವಿ ಅವರನ್ನು ಸ್ಟಾರ್ ಪ್ರಚಾರಕರಾಗಿ ಬಳಸಬಹುದು ಎಂದಿದೆ.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ಬಿಜೆಪಿಯ ಮಾಜಿ ಪಾಲುದಾರ ಹಗ್ರಾಮ ಮೊಹಿಲಾರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) ನೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದ್ದಾರೆ. ಫೆಬ್ರವರಿ 10 ರಂದು,  ಹಗ್ರಾಮಾ ಅವರ ಆಹ್ವಾನದ ಮೇರೆಗೆ ತೇಜಸ್ವಿ ಬೋಡೋಲ್ಯಾಂಡ್ ಅಕಾರ್ಡ್ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಆರ್‌ಜೆಡಿ ಇಷ್ಟಕ್ಕೆ ತನ್ನನ್ನು ನಿರ್ಬಂಧಿಸಿಕೊಳ್ಳುತ್ತಿಲ್ಲ. “ಅಸ್ಸಾಂ ಮಾತ್ರವಲ್ಲ, ನಾವು ಬಂಗಾಳ, ಕೇರಳ ಮತ್ತು ಇತರ ರಾಜ್ಯಗಳಿಗೆ ಹೋಗುತ್ತೇವೆ. ಬಿಜೆಪಿ ಮತ್ತು ಅದರ ಮಿತ್ರ ರಾಷ್ಟ್ರಗಳ ವಿರುದ್ಧ ಚುನಾವಣಾ ಪ್ರಚಾರ ಮಾಡಲು ಈ ರಾಜ್ಯಗಳಿಗೆ ಪ್ರಯಾಣಿಸುವುದಾಗಿ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭೆಯ 126 ಸ್ಥಾನಗಳಲ್ಲಿ ಮಾರ್ಚ್ 27 ರಂದು ಮೊದಲ ಹಂತದಲ್ಲಿ 47 ಸ್ಥಾನಗಳಿಗೆ, ಏಪ್ರಿಲ್ 1 ರಂದು 39 ಮತ್ತು ಏಪ್ರಿಲ್ 6 ರಂದು 40 ಸ್ಥಾನಗಳಿಗೆ ಮತದಾನ ನಡೆಯಲಿದೆ. ಎಲ್ಲಾ ಮೂರು ಹಂತಗಳ ಮತಎಣಿಕೆ ಮೇ 2 ರಂದು ನಡೆಯಲಿದೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...