Homeಮುಖಪುಟಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ನಮ್ಮದ್ದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ - ತೇಜಸ್ವಿ ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ದ ನಾಯಕ ತೇಜಸ್ವಿ ಯಾದವ್ ಅಸ್ಸಾಂ ಚುನಾವಣೆಯಲ್ಲಿ ಪಕ್ಷವನ್ನು ಕಣಕ್ಕಿಳಿಸಲು ಸಜ್ಜಾಗುತ್ತಿದ್ದಾರೆಂಬ ಊಹಾಪೋಹಗಳು ಸುಳಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಚುನಾವಣಾ ಆಯೋಗ ಅಸ್ಸಾಂ ಚುನಾವಣಾ ದಿನಾಂಕ ಪ್ರಕಟಿಸುತ್ತಿದ್ದಂತೆ, ತೇಜಸ್ವಿ ಯಾದವ್ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ.

2020ರ ಅಕ್ಟೋಬರ್-ನವೆಂಬರ್ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬರದಿದ್ದರೂ ಒಂದು ಪ್ರಭಲ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಣ್ಣ ಭಯವನ್ನು ಸೃಷ್ಟಿಸಿರುವುದು ಸುಳ್ಳಲ್ಲ.

ಅಸ್ಸಾಂನಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಮತದಾನ ನಡೆಯಲಿದೆ. ’ನಮ್ಮದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ ಎಂದು ತೇಜಶ್ವಿ ಯಾದವ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಆರ್‌ಜೆಡಿ ಮೂಲಗಳ ಪ್ರಕಾರ, ಅಸ್ಸಾಂನಲ್ಲಿ ಸ್ಪರ್ಧಿಸುವ ಸಾಧ್ಯತೆಯಿದ್ದು, ತೇಜಸ್ವಿ ಯಾದವ್ ಮಿತ್ರಪಕ್ಷಗಳನ್ನು ಹುಡುಕುತ್ತಿದ್ದಾರೆ ಎಂದಿದೆ. ಬಿಹಾರದಂತೆಯೇ, ಅಸ್ಸಾಂನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಆರು ಪಕ್ಷಗಳ ಮಹಾಘಟಬಂಧನ್ ಇದೆ. ಹೀಗಾಗಿ ಅಸ್ಸಾಂನಲ್ಲಿ ಯಾವುದೇ ನೆಲೆ ಇಲ್ಲದಿದ್ದರೂ ಆರ್‌ಜೆಡಿ ಈ ಮಹಾಘಟಬಂಧನ್‌ಗೆ ಸೇರಲಿದೆ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ.

ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾಗಿ ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಿಹಾರ ಮೂಲದ ಆರ್‌ಜೆಡಿ ಪಕ್ಷದ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರ ಕಾಲದಿಂದಲೂ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದೆ. ಸದ್ಯ ತೇಜಸ್ವಿ ಯಾದವ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. “ನಾವು ಕಾಂಗ್ರೆಸ್‌ನೊಂದಿಗೆ ಉತ್ತಮ ಮೈತ್ರಿ ಹೊಂದಿದ್ದೇವೆ. ಮೈತ್ರಿ ಕುರಿತು ನಾವು ಅವರೊಂದಿಗೆ ಮಾತನಾಡಿದ್ದೇವೆ” ಎಂದು ಮಾತುಕತೆ ಬಳಿಕ ಹೇಳಿದ್ದಾರೆ.

ಇತ್ತ ಕಾಂಗ್ರೆಸ್ ಮೂಲಗಳು ಹೇಳುವಂತೆ, ಅಸ್ಸಾಂನ ಕೆಲವು ಬೃಹತ್ ಭೋಜ್‌ಪುರಿ ಮತಬ್ಯಾಂಕ್‌ಗಳಲ್ಲಿ ಬಿಜೆಪಿಯತ್ತ ಸಾಗಿರುವ ಮತದಾರರಿರುವ ಕಡೆಗಳಲ್ಲಿ ತೇಜಸ್ವಿ ಅವರನ್ನು ಸ್ಟಾರ್ ಪ್ರಚಾರಕರಾಗಿ ಬಳಸಬಹುದು ಎಂದಿದೆ.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ಬಿಜೆಪಿಯ ಮಾಜಿ ಪಾಲುದಾರ ಹಗ್ರಾಮ ಮೊಹಿಲಾರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) ನೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದ್ದಾರೆ. ಫೆಬ್ರವರಿ 10 ರಂದು,  ಹಗ್ರಾಮಾ ಅವರ ಆಹ್ವಾನದ ಮೇರೆಗೆ ತೇಜಸ್ವಿ ಬೋಡೋಲ್ಯಾಂಡ್ ಅಕಾರ್ಡ್ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಆರ್‌ಜೆಡಿ ಇಷ್ಟಕ್ಕೆ ತನ್ನನ್ನು ನಿರ್ಬಂಧಿಸಿಕೊಳ್ಳುತ್ತಿಲ್ಲ. “ಅಸ್ಸಾಂ ಮಾತ್ರವಲ್ಲ, ನಾವು ಬಂಗಾಳ, ಕೇರಳ ಮತ್ತು ಇತರ ರಾಜ್ಯಗಳಿಗೆ ಹೋಗುತ್ತೇವೆ. ಬಿಜೆಪಿ ಮತ್ತು ಅದರ ಮಿತ್ರ ರಾಷ್ಟ್ರಗಳ ವಿರುದ್ಧ ಚುನಾವಣಾ ಪ್ರಚಾರ ಮಾಡಲು ಈ ರಾಜ್ಯಗಳಿಗೆ ಪ್ರಯಾಣಿಸುವುದಾಗಿ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭೆಯ 126 ಸ್ಥಾನಗಳಲ್ಲಿ ಮಾರ್ಚ್ 27 ರಂದು ಮೊದಲ ಹಂತದಲ್ಲಿ 47 ಸ್ಥಾನಗಳಿಗೆ, ಏಪ್ರಿಲ್ 1 ರಂದು 39 ಮತ್ತು ಏಪ್ರಿಲ್ 6 ರಂದು 40 ಸ್ಥಾನಗಳಿಗೆ ಮತದಾನ ನಡೆಯಲಿದೆ. ಎಲ್ಲಾ ಮೂರು ಹಂತಗಳ ಮತಎಣಿಕೆ ಮೇ 2 ರಂದು ನಡೆಯಲಿದೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...