Homeಮುಖಪುಟಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ನಮ್ಮದ್ದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ - ತೇಜಸ್ವಿ ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ದ ನಾಯಕ ತೇಜಸ್ವಿ ಯಾದವ್ ಅಸ್ಸಾಂ ಚುನಾವಣೆಯಲ್ಲಿ ಪಕ್ಷವನ್ನು ಕಣಕ್ಕಿಳಿಸಲು ಸಜ್ಜಾಗುತ್ತಿದ್ದಾರೆಂಬ ಊಹಾಪೋಹಗಳು ಸುಳಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಚುನಾವಣಾ ಆಯೋಗ ಅಸ್ಸಾಂ ಚುನಾವಣಾ ದಿನಾಂಕ ಪ್ರಕಟಿಸುತ್ತಿದ್ದಂತೆ, ತೇಜಸ್ವಿ ಯಾದವ್ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ.

2020ರ ಅಕ್ಟೋಬರ್-ನವೆಂಬರ್ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬರದಿದ್ದರೂ ಒಂದು ಪ್ರಭಲ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಣ್ಣ ಭಯವನ್ನು ಸೃಷ್ಟಿಸಿರುವುದು ಸುಳ್ಳಲ್ಲ.

ಅಸ್ಸಾಂನಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಮತದಾನ ನಡೆಯಲಿದೆ. ’ನಮ್ಮದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ ಎಂದು ತೇಜಶ್ವಿ ಯಾದವ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಆರ್‌ಜೆಡಿ ಮೂಲಗಳ ಪ್ರಕಾರ, ಅಸ್ಸಾಂನಲ್ಲಿ ಸ್ಪರ್ಧಿಸುವ ಸಾಧ್ಯತೆಯಿದ್ದು, ತೇಜಸ್ವಿ ಯಾದವ್ ಮಿತ್ರಪಕ್ಷಗಳನ್ನು ಹುಡುಕುತ್ತಿದ್ದಾರೆ ಎಂದಿದೆ. ಬಿಹಾರದಂತೆಯೇ, ಅಸ್ಸಾಂನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಆರು ಪಕ್ಷಗಳ ಮಹಾಘಟಬಂಧನ್ ಇದೆ. ಹೀಗಾಗಿ ಅಸ್ಸಾಂನಲ್ಲಿ ಯಾವುದೇ ನೆಲೆ ಇಲ್ಲದಿದ್ದರೂ ಆರ್‌ಜೆಡಿ ಈ ಮಹಾಘಟಬಂಧನ್‌ಗೆ ಸೇರಲಿದೆ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ.

ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾಗಿ ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಿಹಾರ ಮೂಲದ ಆರ್‌ಜೆಡಿ ಪಕ್ಷದ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರ ಕಾಲದಿಂದಲೂ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದೆ. ಸದ್ಯ ತೇಜಸ್ವಿ ಯಾದವ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. “ನಾವು ಕಾಂಗ್ರೆಸ್‌ನೊಂದಿಗೆ ಉತ್ತಮ ಮೈತ್ರಿ ಹೊಂದಿದ್ದೇವೆ. ಮೈತ್ರಿ ಕುರಿತು ನಾವು ಅವರೊಂದಿಗೆ ಮಾತನಾಡಿದ್ದೇವೆ” ಎಂದು ಮಾತುಕತೆ ಬಳಿಕ ಹೇಳಿದ್ದಾರೆ.

ಇತ್ತ ಕಾಂಗ್ರೆಸ್ ಮೂಲಗಳು ಹೇಳುವಂತೆ, ಅಸ್ಸಾಂನ ಕೆಲವು ಬೃಹತ್ ಭೋಜ್‌ಪುರಿ ಮತಬ್ಯಾಂಕ್‌ಗಳಲ್ಲಿ ಬಿಜೆಪಿಯತ್ತ ಸಾಗಿರುವ ಮತದಾರರಿರುವ ಕಡೆಗಳಲ್ಲಿ ತೇಜಸ್ವಿ ಅವರನ್ನು ಸ್ಟಾರ್ ಪ್ರಚಾರಕರಾಗಿ ಬಳಸಬಹುದು ಎಂದಿದೆ.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ಬಿಜೆಪಿಯ ಮಾಜಿ ಪಾಲುದಾರ ಹಗ್ರಾಮ ಮೊಹಿಲಾರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) ನೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದ್ದಾರೆ. ಫೆಬ್ರವರಿ 10 ರಂದು,  ಹಗ್ರಾಮಾ ಅವರ ಆಹ್ವಾನದ ಮೇರೆಗೆ ತೇಜಸ್ವಿ ಬೋಡೋಲ್ಯಾಂಡ್ ಅಕಾರ್ಡ್ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಆರ್‌ಜೆಡಿ ಇಷ್ಟಕ್ಕೆ ತನ್ನನ್ನು ನಿರ್ಬಂಧಿಸಿಕೊಳ್ಳುತ್ತಿಲ್ಲ. “ಅಸ್ಸಾಂ ಮಾತ್ರವಲ್ಲ, ನಾವು ಬಂಗಾಳ, ಕೇರಳ ಮತ್ತು ಇತರ ರಾಜ್ಯಗಳಿಗೆ ಹೋಗುತ್ತೇವೆ. ಬಿಜೆಪಿ ಮತ್ತು ಅದರ ಮಿತ್ರ ರಾಷ್ಟ್ರಗಳ ವಿರುದ್ಧ ಚುನಾವಣಾ ಪ್ರಚಾರ ಮಾಡಲು ಈ ರಾಜ್ಯಗಳಿಗೆ ಪ್ರಯಾಣಿಸುವುದಾಗಿ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭೆಯ 126 ಸ್ಥಾನಗಳಲ್ಲಿ ಮಾರ್ಚ್ 27 ರಂದು ಮೊದಲ ಹಂತದಲ್ಲಿ 47 ಸ್ಥಾನಗಳಿಗೆ, ಏಪ್ರಿಲ್ 1 ರಂದು 39 ಮತ್ತು ಏಪ್ರಿಲ್ 6 ರಂದು 40 ಸ್ಥಾನಗಳಿಗೆ ಮತದಾನ ನಡೆಯಲಿದೆ. ಎಲ್ಲಾ ಮೂರು ಹಂತಗಳ ಮತಎಣಿಕೆ ಮೇ 2 ರಂದು ನಡೆಯಲಿದೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...