Homeಮುಖಪುಟಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ಅಸ್ಸಾಂನಲ್ಲಿ ಆರ್‌ಜೆಡಿಯನ್ನು ಕಣಕ್ಕಿಳಿಸಲು ತೇಜಸ್ವಿ ಯಾದವ್ ಸಜ್ಜು..!

ನಮ್ಮದ್ದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ - ತೇಜಸ್ವಿ ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ದ ನಾಯಕ ತೇಜಸ್ವಿ ಯಾದವ್ ಅಸ್ಸಾಂ ಚುನಾವಣೆಯಲ್ಲಿ ಪಕ್ಷವನ್ನು ಕಣಕ್ಕಿಳಿಸಲು ಸಜ್ಜಾಗುತ್ತಿದ್ದಾರೆಂಬ ಊಹಾಪೋಹಗಳು ಸುಳಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಚುನಾವಣಾ ಆಯೋಗ ಅಸ್ಸಾಂ ಚುನಾವಣಾ ದಿನಾಂಕ ಪ್ರಕಟಿಸುತ್ತಿದ್ದಂತೆ, ತೇಜಸ್ವಿ ಯಾದವ್ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ.

2020ರ ಅಕ್ಟೋಬರ್-ನವೆಂಬರ್ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬರದಿದ್ದರೂ ಒಂದು ಪ್ರಭಲ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಣ್ಣ ಭಯವನ್ನು ಸೃಷ್ಟಿಸಿರುವುದು ಸುಳ್ಳಲ್ಲ.

ಅಸ್ಸಾಂನಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಮತದಾನ ನಡೆಯಲಿದೆ. ’ನಮ್ಮದು ರಾಷ್ಟ್ರೀಯ ಪಕ್ಷವಾಗಿತ್ತು. ಈಗ ನಾವದನ್ನು ವಿಸ್ತರಿಸಲು ಬಯಸುತ್ತೇವೆ’ ಎಂದು ತೇಜಶ್ವಿ ಯಾದವ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಆರ್‌ಜೆಡಿ ಮೂಲಗಳ ಪ್ರಕಾರ, ಅಸ್ಸಾಂನಲ್ಲಿ ಸ್ಪರ್ಧಿಸುವ ಸಾಧ್ಯತೆಯಿದ್ದು, ತೇಜಸ್ವಿ ಯಾದವ್ ಮಿತ್ರಪಕ್ಷಗಳನ್ನು ಹುಡುಕುತ್ತಿದ್ದಾರೆ ಎಂದಿದೆ. ಬಿಹಾರದಂತೆಯೇ, ಅಸ್ಸಾಂನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಆರು ಪಕ್ಷಗಳ ಮಹಾಘಟಬಂಧನ್ ಇದೆ. ಹೀಗಾಗಿ ಅಸ್ಸಾಂನಲ್ಲಿ ಯಾವುದೇ ನೆಲೆ ಇಲ್ಲದಿದ್ದರೂ ಆರ್‌ಜೆಡಿ ಈ ಮಹಾಘಟಬಂಧನ್‌ಗೆ ಸೇರಲಿದೆ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ.

ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾಗಿ ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಿಹಾರ ಮೂಲದ ಆರ್‌ಜೆಡಿ ಪಕ್ಷದ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರ ಕಾಲದಿಂದಲೂ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದೆ. ಸದ್ಯ ತೇಜಸ್ವಿ ಯಾದವ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. “ನಾವು ಕಾಂಗ್ರೆಸ್‌ನೊಂದಿಗೆ ಉತ್ತಮ ಮೈತ್ರಿ ಹೊಂದಿದ್ದೇವೆ. ಮೈತ್ರಿ ಕುರಿತು ನಾವು ಅವರೊಂದಿಗೆ ಮಾತನಾಡಿದ್ದೇವೆ” ಎಂದು ಮಾತುಕತೆ ಬಳಿಕ ಹೇಳಿದ್ದಾರೆ.

ಇತ್ತ ಕಾಂಗ್ರೆಸ್ ಮೂಲಗಳು ಹೇಳುವಂತೆ, ಅಸ್ಸಾಂನ ಕೆಲವು ಬೃಹತ್ ಭೋಜ್‌ಪುರಿ ಮತಬ್ಯಾಂಕ್‌ಗಳಲ್ಲಿ ಬಿಜೆಪಿಯತ್ತ ಸಾಗಿರುವ ಮತದಾರರಿರುವ ಕಡೆಗಳಲ್ಲಿ ತೇಜಸ್ವಿ ಅವರನ್ನು ಸ್ಟಾರ್ ಪ್ರಚಾರಕರಾಗಿ ಬಳಸಬಹುದು ಎಂದಿದೆ.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ಬಿಜೆಪಿಯ ಮಾಜಿ ಪಾಲುದಾರ ಹಗ್ರಾಮ ಮೊಹಿಲಾರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) ನೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದ್ದಾರೆ. ಫೆಬ್ರವರಿ 10 ರಂದು,  ಹಗ್ರಾಮಾ ಅವರ ಆಹ್ವಾನದ ಮೇರೆಗೆ ತೇಜಸ್ವಿ ಬೋಡೋಲ್ಯಾಂಡ್ ಅಕಾರ್ಡ್ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಆರ್‌ಜೆಡಿ ಇಷ್ಟಕ್ಕೆ ತನ್ನನ್ನು ನಿರ್ಬಂಧಿಸಿಕೊಳ್ಳುತ್ತಿಲ್ಲ. “ಅಸ್ಸಾಂ ಮಾತ್ರವಲ್ಲ, ನಾವು ಬಂಗಾಳ, ಕೇರಳ ಮತ್ತು ಇತರ ರಾಜ್ಯಗಳಿಗೆ ಹೋಗುತ್ತೇವೆ. ಬಿಜೆಪಿ ಮತ್ತು ಅದರ ಮಿತ್ರ ರಾಷ್ಟ್ರಗಳ ವಿರುದ್ಧ ಚುನಾವಣಾ ಪ್ರಚಾರ ಮಾಡಲು ಈ ರಾಜ್ಯಗಳಿಗೆ ಪ್ರಯಾಣಿಸುವುದಾಗಿ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭೆಯ 126 ಸ್ಥಾನಗಳಲ್ಲಿ ಮಾರ್ಚ್ 27 ರಂದು ಮೊದಲ ಹಂತದಲ್ಲಿ 47 ಸ್ಥಾನಗಳಿಗೆ, ಏಪ್ರಿಲ್ 1 ರಂದು 39 ಮತ್ತು ಏಪ್ರಿಲ್ 6 ರಂದು 40 ಸ್ಥಾನಗಳಿಗೆ ಮತದಾನ ನಡೆಯಲಿದೆ. ಎಲ್ಲಾ ಮೂರು ಹಂತಗಳ ಮತಎಣಿಕೆ ಮೇ 2 ರಂದು ನಡೆಯಲಿದೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...