Homeಮುಖಪುಟಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್ ಜಾಖರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರ ಮಗನಿಗೆ ಟಿಕೆಟ್ ನೀಡುವುದು ಮಹಿಳಾ ಕುಸ್ತಿಪಟುಗಳಿಗೆ ಅವಮಾನವಾಗಿದೆ. ನನಗೆ ದೇಶದ ಗೌರವ ಮೊದಲು ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ನಾನು ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತು ರಾಷ್ಟ್ರೀಯ ಲೋಕದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಈ ಕುರಿತ ರಾಜೀನಾಮೆ ಪತ್ರವನ್ನು ಶುಕ್ರವಾರ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಅವರಿಗೆ ಕಳುಹಿಸಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ, ಸಾಮಾಜಿಕ ಸಮಸ್ಯೆಗಳಿಗಾಗಿ ನನ್ನ ಹೋರಾಟ ಮೊದಲಿನಂತೆ ಮುಂದುರಿಯಲಿದೆ ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ರೋಹಿತ್ ಜಾಖರ್ RLDಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ರಾಷ್ಟ್ರೀಯ ಜಾಟ್ ಫೆಡರೇಶನ್‌ನ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಒಂದು ದಶಕದಿಂದ ಆರ್‌ಎಲ್‌ಡಿ ಮತ್ತು ರೈತ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು.

ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಬಿಜೆಪಿ ಗುರುವಾರ ಕರಣ್ ಭೂಷಣ್ ಸಿಂಗ್ ಅವರನ್ನು  ಲೋಕಸಭೆಯ ಅಭ್ಯರ್ಥಿಯನ್ನಾಗಿ ಹೆಸರಿಸಿದೆ. ಕುಸ್ತಿ ಪಟುಗಳಿಗೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಟಿಕೆಟ್‌ ನೀಡದೆ ಇದ್ದರೂ, ಅವರ ಪುತ್ರನಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲಿ ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ಬಜರಂಗ್ ಪುನಿಯಾ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಕರಣ್‌ ಸಿಂಗ್‌ಗೆ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಯಾವತ್ತೂ ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಮುರಿದಿದೆ. ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಸಾಕ್ಷಿ ಮಲಿಕ್‌ ಪ್ರಶ್ನಿಸಿದ್ದರು.

ಕುಸ್ತಿಪಟು ಬಜರಂಗ್ ಪುನಿಯ ಈ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದರು.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...