Homeಮುಖಪುಟಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್ ಜಾಖರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರ ಮಗನಿಗೆ ಟಿಕೆಟ್ ನೀಡುವುದು ಮಹಿಳಾ ಕುಸ್ತಿಪಟುಗಳಿಗೆ ಅವಮಾನವಾಗಿದೆ. ನನಗೆ ದೇಶದ ಗೌರವ ಮೊದಲು ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ನಾನು ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತು ರಾಷ್ಟ್ರೀಯ ಲೋಕದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಈ ಕುರಿತ ರಾಜೀನಾಮೆ ಪತ್ರವನ್ನು ಶುಕ್ರವಾರ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಅವರಿಗೆ ಕಳುಹಿಸಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ, ಸಾಮಾಜಿಕ ಸಮಸ್ಯೆಗಳಿಗಾಗಿ ನನ್ನ ಹೋರಾಟ ಮೊದಲಿನಂತೆ ಮುಂದುರಿಯಲಿದೆ ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ರೋಹಿತ್ ಜಾಖರ್ RLDಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ರಾಷ್ಟ್ರೀಯ ಜಾಟ್ ಫೆಡರೇಶನ್‌ನ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಒಂದು ದಶಕದಿಂದ ಆರ್‌ಎಲ್‌ಡಿ ಮತ್ತು ರೈತ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು.

ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಬಿಜೆಪಿ ಗುರುವಾರ ಕರಣ್ ಭೂಷಣ್ ಸಿಂಗ್ ಅವರನ್ನು  ಲೋಕಸಭೆಯ ಅಭ್ಯರ್ಥಿಯನ್ನಾಗಿ ಹೆಸರಿಸಿದೆ. ಕುಸ್ತಿ ಪಟುಗಳಿಗೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಟಿಕೆಟ್‌ ನೀಡದೆ ಇದ್ದರೂ, ಅವರ ಪುತ್ರನಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲಿ ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ಬಜರಂಗ್ ಪುನಿಯಾ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಕರಣ್‌ ಸಿಂಗ್‌ಗೆ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಯಾವತ್ತೂ ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಮುರಿದಿದೆ. ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಸಾಕ್ಷಿ ಮಲಿಕ್‌ ಪ್ರಶ್ನಿಸಿದ್ದರು.

ಕುಸ್ತಿಪಟು ಬಜರಂಗ್ ಪುನಿಯ ಈ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದರು.

ಇದನ್ನು ಓದಿ: ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...